ತೃತೀಯ ರಂಗ ಬಿಜೆಪಿಗೆ ಸರಿಸಾಟಿಯಲ್ಲ; ಶೆಟ್ಟರ್
ಹುಬ್ಬಳ್ಳಿ, ಮೇ27: "ಮೂರನೇ ಅಲ್ಲ ನಾಲ್ಕನೇ ರಂಗ ಬಂದರೂ ಬಿಜೆಪಿಗೆ ಸರಿಸಾಟಿಯಾಗುವುದಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು. ಈ ಮೂಲಕ ತೃತೀಯ ರಂಗ ರಚನೆ ಪ್ರಯತ್ನವನ್ನು ಲೇವಡಿ ಮಾಡಿದರು.
ಶುಕ್ರವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, "ಭಾರತೀಯ ಜನತಾ ಪಕ್ಷ ನರೇಂದ್ರ ಮೋದಿ ನಾಯಕತ್ವದಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಹಾಗಾಗಿ ಮೂರನೇ ರಂಗ ಆದರೂ ಮಾಡಿಕೊಳ್ಳಲಿ, ನಾಲ್ಕನೇ ರಂಗವಾದರೂ ಮಾಡಿಕೊಳ್ಳಲಿ ಅದು ಅವರಿಗೆ ಬಿಟ್ಟದ್ದು" ಎಂದು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಟಾಂಗ್ ಕೊಟ್ಟರು.
ಈ ಮೂಲಕ ಬೆಂಗಳೂರಿನಲ್ಲಿ ಗುರುವಾರ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರಾವ್, ಎಚ್. ಡಿ. ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ನಡುವೆ ಮಾತುಕತೆ ಬಗ್ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, "ಒಂದು ಕಡೆಗೆ ಅವರೇ ರಾಜಕೀಯವಾಗಿ ಆರೋಪ ಮಾಡುತ್ತಾರೆ. ಮತ್ತೊಂದು ಕಡೆಗೆ ಕಾನೂನಿನ ಮೇಲೆ ಗೌರವವಿದೆ. ಕಾನೂನು ರೀತಿ ಹೋರಾಟ ಮಾಡತ್ತೇನೆ ಎನ್ನುತ್ತಾರೆ" ಎಂದರು.
"ಡಿ. ಕೆ. ಶಿವಕುಮಾರ್ಗೆ ಕಾನೂನಿನ ಮೇಲೆ ಗೌರವ ಇದ್ದರೆ, ಅವರದ್ದು ತಪ್ಪು ಇರಲಿಲ್ಲ ಎಂದರೆ ಕಾನೂನು ಪ್ರಕಾರ ಹೋರಾಟ ಮಾಡಲಿ. ಅದು ಬಿಟ್ಟು ಎಲ್ಲದಕ್ಕೂ ರಾಜಕೀಯ ಮಾಡುವುದಕ್ಕೆ ಹೋಗಬೇಡಿ" ಎಂದು ಹರಿಹಾಯ್ದರು.

ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, "ಇಂದು ಸಂಜೆ ಸಭೆ ಕರೆಯಲಾಗಿದೆ. ಅಲ್ಲಿ ಎಲ್ಲರ ಅಭಿಪ್ರಾಯ ಪಡೆದು ಮೇಯರ್, ಉಪಮೇಯರ್ ಅಭ್ಯರ್ಥಿ ಆಯ್ಕೆ ಮಾಡಲಾಗುವುದು" ಎಂದರು.
Recommended Video
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ











Click it and Unblock the Notifications