ಉಮೇಶ ಕತ್ತಿ ಅವರು ನೇರವಾಗಿ ಮಾತನಾಡುವ ವ್ಯಕ್ತಿ ಆಗಿದ್ದರು: ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಸೆಪ್ಟೆಂಬರ್, 07: ನಮ್ಮ ಮತ್ತು ಉಮೇಶ್ ಅವರ ನಡುವ ಆತ್ಮೀಯವಾದ ಸಂಬಂಧ ಇತ್ತು. ನೇರವಾಗಿ ಮಾತನಾಡುವಂತಹ ವ್ಯಕ್ತಿತ್ವ ಅವರದ್ದು. ಮನಸ್ಸಿಗೆ ಬಂದಂತೆ, ಸ್ಪಷ್ಟವಾಗಿ ಹೇಳುವಂತ ವ್ಯಕ್ತಿ ಅವರು ಎಂದು ಹೇಳುತ್ತಾ ಸಚಿವ ಉಮೇಶ್ ಕತ್ತಿ ನಿಧನಕ್ಕೆ ಜಗದೀಶ್ ಶೆಟ್ಟರ್ ಸಂತಾಪ ಸೂಚಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉಮೇಶ್ ಕತ್ತಿ ಅವರು ಉತ್ತರ ಕರ್ನಾಟಕ ಮತ್ತು ಬೆಳಗಾವಿ ಅಭಿವೃದ್ಧಿ ಬಗ್ಗೆ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಅವರ ಅಗಲಿಕೆಯಿಂದ ರಾಜ್ಯಕ್ಕೆ ಬಹಳಷ್ಟು ನಷ್ಟ ಆಗಿದೆ. ಉಮೇಶ್ ಕತ್ತಿ ಅವರ ಸಾವು ನಮ್ಮ ಮನಸ್ಸಿಗೆ ತುಂಬಾ ನೋವು ತಂದಿದೆ ಎಂದರು.
ಅವರು ನೀರಾವರಿ ವಿಚಾರವಾಗಿ ಬಹಳಷ್ಟು ನಿಷ್ಠುರವಾಗಿ ಮಾತನಾಡುತ್ತಿದ್ದರು. ಸದಾ ಪಕ್ಷದ ಬಗ್ಗೆ ಯೋಚನೆಯನ್ನು ಮಾಡುತ್ತಿದ್ದರು. ಸಕ್ಕರೆ ಕಾರ್ಖಾನೆ ತೆಗೆದು ಸಾಕಷ್ಟು ಜನರಿಗೆ ಉದ್ಯೋಗ ನೀಡಿದ ಮಹಾನ್ ವ್ಯಕ್ತಿ ಆಗಿದ್ದರು. ಉಮೇಶ್ ಕತ್ತಿ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುತ್ತೇನೆ ಎಂದರು.

ಸಚಿವ ಉಮೇಶ ಕತ್ತಿ ಅವರ ನಿಧನಕ್ಕೆ ಜವಳಿ, ಕೈಮಗ್ಗ, ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪವನ್ನು ಸೂಚಿಸಿದ್ದಾರೆ. ರಾಜ್ಯದ ಹಿರಿಯ ರಾಜಕಾರಣಿ, ಅತಿ ಹೆಚ್ಚು ಬಾರಿ ಚುನಾವಣೆಯಲ್ಲಿ ಗೆದ್ದಿದ್ದ ಉಮೇಶ್ ಕತ್ತಿಯವರ ನಿಧನದಿಂದ ರಾಜ್ಯ ಬಡವಾಗಿದೆ. ಉಮೇಶ್ ಕತ್ತಿ ಅವರ ನೇರ ಮಾತುಕತೆಯಿಂದ ರಾಜೀ ಇಲ್ಲದ ಜೀವನ ಸಾಗಿಸಿದ್ದರು. ನಾನು ರಾಜಕಾರಣಕ್ಕೆ ಬರುವುದಕ್ಕಿಂತಲೂ ಮೊದಲು ಅವರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದೆ. ಬಹಳ ವರ್ಷದಿಂದ ಅವರನ್ನು ಹತ್ತಿರದಿಂದ ನೋಡಿಕೊಂಡು ಬಂದಿದ್ದೇನೆ. ಉಮೇಶ್ ಕತ್ತಿ ಅವರ ನಿಧನದಿಂದ ಸಮಾಜಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟ ಆಗಿದೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ. ಉಮೇಶ್ ಕತ್ತಿ ಅವರ ನಿಧನದಿಂದ ವೈಯಕ್ತಿಕವಾಗಿ ತೀವ್ರ ನೋವಾಗಿದೆ ಎಂದರು.

ಉಮೇಶ್ ಕತ್ತಿ ನಿಧನಕ್ಕೆ ಆರಗ ಸಂತಾಪ
ಸಚಿವ ಉಮೇಶ್ ಕತ್ತಿಯವರು ಇದ್ದದ್ದು ಇದ್ದ ಹಾಗೆ ಹೇಳುತ್ತಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉಮೇಶ್ ಕತ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಉಮೇಶ್ ಕತ್ತಿ ನಿಧನ ಅತ್ಯಂತ ದುಃಖ ಆಗಿದೆ. ಅವರು ನನ್ನ ಆತ್ಮೀಯರಲ್ಲಿ ಒಬ್ಬರಾಗಿದ್ದರು. ಒಳ್ಳೆಯ ಸ್ವಭಾವದವರು ಮತ್ತು ಹಾಸ್ಯ ಪ್ರಜ್ಞೆ ಉಳ್ಳವರಾಗಿದ್ದರು. ದೇವರು ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ಕೊಡಲಿ. ಅವರ ನಿಧನದಿಂದ ನನ್ನ ಎಲ್ಲಾ ಕೆಲಸ ಕಾರ್ಯ ರದ್ದು ಮಾಡಿದ್ದೇನೆ. ಜನೋತ್ಸವದ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಹಿರಿಯರು ನಿರ್ಧರಿಸುತ್ತಾರೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications