ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ವ್ಯಕ್ತಿಯ ಬರ್ಬರ ಹತ್ಯೆ
ಹುಬ್ಬಳ್ಳಿ, ಮೇ 03 : ಇಲ್ಲಿನ ಗಬ್ಬೂರ ಕ್ರಾಸ್ ಬಳಿಯ ಹೊಲವೊಂದರಲ್ಲಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆಯಾಗಿಲ್ಲ. ಬಸವರಾಜ ಸತ್ತೂರ ಎಂಬುವರ ಜಮೀನಿನಲ್ಲಿ ವ್ಯಕ್ತಿಯನ್ನು ಕರೆತಂದು ಕುತ್ತಿಗೆಗೆ ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಮೃತ ವ್ಯಕ್ತಿಗೆ 45 ವರ್ಷವಾಗಿರಬಹುದು ಎಂದು ಅಂದಾಜಿಸಲಾಗಿದ್ದು ಕೊಲೆಯಾದ ವ್ಯಕ್ತಿ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ.

ಮೃತ ವ್ಯಕ್ತಿ ರೈತನಿರಬೇಕು ಎಂಬುದು ಆತನ ಬಟ್ಟೆಗಳಿಂದ ಗೊತ್ತಾಗುತ್ತಿದ್ದು, ಹಳೇ ವೈಷಮ್ಯವೇ ಕೊಲೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.












Click it and Unblock the Notifications