ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿಯಲ್ಲಿ ವಿನಯ್ ಕುಲಕರ್ಣಿ ವಿಚಾರಣೆ

By Lekhaka
|
Google Oneindia Kannada News

ಹುಬ್ಬಳ್ಳಿ, ನವೆಂಬರ್ 07: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಹುಬ್ಬಳ್ಳಿಗೆ ಕರೆತರಲಾಗಿದೆ.

ವಿನಯ್ ಕುಲಕರ್ಣಿಯನ್ನು ಮೂರು ದಿನ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶವಿನಯ್ ಕುಲಕರ್ಣಿಯನ್ನು ಮೂರು ದಿನ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶ

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿನ ಕೊಠಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Hubballi: Former Minister Vinay Kulkarni Inquiry At CAR Ground

ಶನಿವಾರ ಬೆಳಿಗ್ಗೆ ಬೆಳಗ್ಗೆ 6.40ಕ್ಕೆ ಹಿಂಡಲಗಾ ಜೈಲಿಗೆ ಆಗಮಿಸಿದ ಸಿಬಿಐ ತಂಡ ವಿನಯ್ ಕುಲಕರ್ಣಿಯನ್ನು ವಶಕ್ಕೆ ಪಡೆದಿತ್ತು. ನಿನ್ನೆ ರಾತ್ರಿಯೇ ನಗರಕ್ಕೆ ಆಗಮಿಸಿದ್ದ ಅಧಿಕಾರಿಗಳು ಖಾಸಗಿ ಲಾಡ್ಜ್ ನಲ್ಲಿ ತಂಗಿದ್ದರು.

ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಲಿದ್ದಾರೆ. ನವೆಂಬರ್ 5ರಂದು ಧಾರವಾಡದ ಬಾರಾಕೊಟ್ರಿ ಪ್ರದೇಶದಲ್ಲಿನ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

Recommended Video

Muniratna vs Kusuma : RR Nagar ಕಣದಲ್ಲಿ ಗೆಲ್ಲೋದು ಯಾರು, ಎರಡೂ ಪಕ್ಷಗಳ ಜಿದ್ದಾಜಿದ್ದಿ | Oneindia Kannada

ಇಂದು ವಿನಯ್ ಕುಲಕರ್ಣಿ ಜನ್ಮದಿನ: ನ.7ರಂದು ವಿನಯ್ ಕುಲಕರ್ಣಿ ಹುಟ್ಟುಹಬ್ಬದ ದಿನವಾಗಿದ್ದು, ಅವರ ಅನುಪಸ್ಥಿತಿಯಲ್ಲಿಯೇ ಅವರ ಭಿಮಾನಿಗಳು ಅವರ ಜನ್ಮದಿನ ಆಚರಿಸುತ್ತಿದ್ದಾರೆ. ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ಹಣ್ಣು ಹಂಪಲುಗಳನ್ನು ವಿತರಿಸಿದ್ದಾರೆ.

English summary
Former minister vinay kulkarni inquiry regarding dharwad zilla panchayat member yogesh gowa murder case at hubballi CAR Ground
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X