ಹುಬ್ಬಳ್ಳಿ; ಮಗನಿಗೆ ಕಿಡ್ನಿ ದಾನ ಮಾಡಿ ಮರುಜನ್ಮ ಕೊಟ್ಟ ತಾಯಿ
ಹುಬ್ಬಳ್ಳಿ, ಮೇ 06: ಬಡರೋಗಿಗಳ ಪಾಲಿನ ಸಂಜೀವಿನಿ ಎಂದೇ ಖ್ಯಾತವಾಗಿರುವ ಕಿಮ್ಸ್ ಆಸ್ಪತ್ರೆ ಇದೀಗ ಮೊದಲ ಬಾರಿಗೆ ಕಿಡ್ನಿ ಕಸಿ ಮಾಡಿ ಯುವಕನ ಜೀವ ಉಳಿಸಿದೆ. ಯಶಸ್ವಿಯಾಗಿ ಕಿಡ್ನಿ ಕಸಿ ಮಾಡಿರುವ ಕಿಮ್ಸ್ ಆಸ್ಪತ್ರೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ ಎನ್ನುವುದನ್ನು ಸಾಬೀತು ಮಾಡಿದೆ.
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಜನರು ಕಸಿ ಮಾಡಿಸಿಕೊಳ್ಳಲು ಬೆಂಗಳೂರಿನಂತಹ ದೂರದ ಸ್ಥಳಗಳಿಗೆ ಹೋಗುವ ಅನಿವಾರ್ಯತೆ ಇತ್ತು ಅಥವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಿತ್ತು.
ಕಿಡ್ನಿ ಕಸಿ ಹಣ ಭರಿಸಲಾಗದೇ, ಬೆಂಗಳೂರಿಗೆ ಹೋಗಿ ಚಿಕಿತ್ಸೆ ಪಡೆಯಲೂ ಆಗದೆ ಸಾಕಷ್ಟು ಬಡ ಜನರು ಮೃತಪಟ್ಟ ಉದಾಹರಣೆಗಳು ಸಹ ಇವೆ. ಕಿಮ್ಸ್ ಆಡಳಿತ ಮಂಡಳಿ ಕಿಡ್ನಿ ಕಸಿ ಮಾಡಲು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅದರಂತೆ ಸರ್ಕಾರ ಕಳೆದ ಫೆಬ್ರವರಿ 18 ಕಿಡ್ನಿ ಕಸಿಗೆ ಅನುಮತಿ ನೀಡಿತ್ತು.

ಕಿಡ್ನಿ ಕಸಿಗೆ ಅನುಮತಿ ಪಡೆದ ರಾಜ್ಯದ ಏಕೈಕ ಸರಕಾರಿ ಮೆಡಿಕಲ್ ಕಾಲೇಜು ಎಂಬ ಹೆಗ್ಗಳಿಕೆಯನ್ನು ಹುಬ್ಬಳ್ಳಿ ಕಿಮ್ಸ್ ಪಡೆದಿತ್ತು. ಇದೀಗ ತಾಯಿ ದಾನ ಮಾಡಿದ ಕಿಡ್ನಿಯನ್ನು 22 ವರ್ಷದ ಮಗನಿಗೆ ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಈ ಮೂಲಕ ತಾಯಿ ಮಗನಿಗೆ ಮರುಜನ್ಮ ನೀಡಿದ್ದಾರೆ.
ಯಶಸ್ವಿ ಕಿಡ್ನಿ ಕಸಿ; ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಯುವಕ ಮೂತ್ರಪಿಂಡ ಸೋಂಕಿನಿಂದ ಬಳಲುತ್ತಿದ್ದ, ಆದರೆ ಮೊದಮೊದಲು ರೋಗದ ಲಕ್ಷಣ ಕಾಣಿಸಿರಲಿಲ್ಲ. ಆಮೇಲೆ ಏಕಾಏಕಿ ಸೋಂಕು ಕಾಣಿಸಿಕೊಂಡು 6-7 ತಿಂಗಳಿಂದ ಡಯಾಲಿಸ್ ಪಡೆಯಬೇಕಿತ್ತು. ಕಿಡ್ನಿ ಕಸಿ ಮಾಡುವುದು ಅನಿವಾರ್ಯ ಆದಾಗ ಮೂತ್ರಪಿಂಡಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವೆಂಕಟೇಶ ಮೊಗೇರ ನೇತೃತ್ವದ ತಂಡ ಏಪ್ರಿಲ್ 13 ರಂದು ಶಸ್ತ್ರ ಚಿಕಿತ್ಸೆ ನಡೆಸಿದ್ದು, ಅದು ಯಶಸ್ವಿಯಾಗಿದೆ.

ಈ ಕಸಿಯ ಮತ್ತೊಂದು ವಿಶೇಷವೆಂದರೆ ತಾಯಿಯೇ ತಮ್ಮ ಎಡ ಮೂತ್ರಪಿಂಡವನ್ನು ದಾನ ಮಾಡಿ ತನ್ನ ಮಗನನ್ನು ಉಳಿಸಿಕೊಂಡಿದ್ದಾರೆ. ಮತ್ತೇ ತಾಯಿಗಿಂತ ದೊಡ್ಡವರಾರು ಇಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ.
ಉತ್ತರ ಕರ್ನಾಟಕ ಸಂಜೀವಿನಿ ಹೆಗ್ಗಳಿಕೆ ಪಾತ್ರವಾಗಿರುವ ಕಿಮ್ಸ್ ಯಶಸ್ವಿಯಾಗಿ ಕಿಡ್ನಿ ಕಸಿ ಮಾಡಿರುವುದು ಸಿಬ್ಬಂದಿಗಳಲ್ಲಿ ಸಂತಸ ಮೂಡಿಸಿದೆ.
Recommended Video
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications