'ಹುಬ್ಬಳ್ಳಿ ಕಾ ಮಹಾರಾಜ' ಗಣೇಶ ಮೂರ್ತಿಗೆ ಫೈನಲ್ ಟಚ್: ಪಾಲ್ ಸಹೋದರರು ತಯಾರಿಸುವ ಮೂರ್ತಿ ಹೇಗಿದೆ?
ಹುಬ್ಬಳ್ಳಿ, ಆಗಸ್ಟ್ 26: ಗಣೇಶ ಚತುರ್ಥಿ 2024 ಇನ್ನೇನು ಸಮೀಪಿಸುತ್ತಿದ್ದು, ಇಡಿ ರಾಜ್ಯವೇ ಸ್ವಾಗತಿಸಲು ಸಜ್ಜಾಗಿದೆ. ಈಗಾಗಲೇ ಸಿದ್ಧತೆ ಆರಂಭಿಸಲಾಗಿದೆ. ಮಾರುಕಟ್ಟೆಗಳಲ್ಲಿ ಬಣ್ಣ ಬಣ್ಣದ, ಅನೇಕ ಬಗೆಯ ಗಣೇಶ ಮೂರ್ತಿಗಳು ಮಾರಾಟಕ್ಕೆ ಸಿದ್ಧವಾಗಿದೆ. ಯಾವೆಲ್ಲ ಗಲ್ಲಿಗಳಲ್ಲಿ, ವೃತ್ತದಲ್ಲಿ ವಿಶೇಷ ಗಣಪತಿಗಳು ಪ್ರತಿಷ್ಠಾಪನೆಗೊಳ್ಳಲಿವೆ ಎಂಬ ಕುತೂಹಲವು ಜನರಲ್ಲಿ ಹೆಚ್ಚಾಗಿದೆ. ಈ ಪೈಕಿ ಹುಬ್ಬಳ್ಳಿಯ ಮರಾಠ ಗಲ್ಲಿಯಲ್ಲಿ ಪ್ರತಿಷ್ಠಾಪನೆಗೊಳ್ಳುವ ಗಣೇಶನ ಮೇಲೆ ತುಸು ಹೆಚ್ಚೇ ನಿರೀಕ್ಷೆ ಇದೆ.
ಏಕೆಂದರೆ ದೇಶದಲ್ಲಿಯೇ ಮುಂಬೈ ಹೊರತುಪಡಿಸಿದರೆ ಅತ್ಯಂತ ವಿಜೃಂಭಣೆಯಿಂದ ಗಣೇಶೋತ್ಸವ ಆಚರಣೆಯನ್ನು ಹುಬ್ಬಳ್ಳಿಯಲ್ಲಿ ಮಾಡಲಾಗುತ್ತದೆ. ಈಗಾಗಲೇ ಸಕಲ ಸಿದ್ಧತೆ ನಡೆದಿದೆ. ಹುಬ್ಬಳ್ಳಿಯಲ್ಲಿ ಬೃಹತ್ ಗಣೇಶ ಮೂರ್ತಿಗಳ ತಯಾರಿಕೆ ಸಹ ಅಷ್ಟೇ ಗಮನ ಸೆಳೆಯತ್ತದೆ.

ಛೋಟಾ ಮುಂಬೈ ಅಂತಲೇ ಕರೆಸಿಕೊಳ್ಳುವ ಹುಬ್ಬಳ್ಳಿಯ ನಗರದ ಮರಾಠಾ ಗಲ್ಲಿಯಲ್ಲಿನ ಪ್ರತಿಷ್ಠಾಪನೆಗೊಳ್ಳಲಿರುವ ಗಣಪತಿ ಮೂರ್ತಿ ತಯಾರಿಸಲು ಪಶ್ಚಿಮ, ಬಂಗಾಳದ ಕೋಲ್ಕತ್ತ ಸಹೋದರರಾದ ಅಪ್ಪು ಪಾಲ್ ಮತ್ತು ಸ್ವಪನ್ ಪಾಲ್ ನಿರತರಾಗಿದ್ದಾರೆ.
4 ತಿಂಗಳು ಮುನ್ನ ನಗರಕ್ಕೆ ಪಾಲ್ ಸಹೋದರರ ಆಗಮನ
ಈ ಸಹೋದರರು ಸಿದ್ಧಪಡಿಸುವ 23 ಅಡಿ ಎತ್ತರದ 'ಹುಬ್ಬಳ್ಳಿ ಕಾ ಮಹಾರಾಜ' ಗಣೇಶ ಮರಾಠಾ ಗಲ್ಲಿಯಲ್ಲಿ ಪ್ರತಿಷ್ಠಾಪನೆ ಆಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಹುಬ್ಬಳ್ಳಿಯೊಂದಿಗೆ 30 ವರ್ಷಗಳಿಂದ ನಂಟು ಹೊಂದಿರುವ ಈ ಪಾಲ್ ಸಹೋದರರು ಪ್ರತಿ ವರ್ಷ ನಾಲ್ಕು ತಿಂಗಳು ಮೂರ್ತಿ ತಯಾರಿಗೆಂದೇ ನಗರಕ್ಕೆ ಆಗಮಿಸುತ್ತಾರೆ. ಬೃಹತ್ ಮೂರ್ತಿಗಳನ್ನು ರೂಪಿಸುವುದರಲ್ಲಿ ನಿಷ್ಣಾತರಾದ ಅವರು ಪ್ರತಿ ಸಲವೂ ಬೇರೆ ಬೇರೆ ವಿನ್ಯಾಸಗಳಿಗೆ ಆದ್ಯತೆ ನೀಡುತ್ತಾರೆ.

ರೈಲ್ವೆ ಇಲಾಖೆ ಅಧಿಕಾರಿಯೊಬ್ಬರು 30 ವರ್ಷಗಳ ಹಿಂದೆ ದುರ್ಗಾ ಮಾತೆ ತಯಾರಿಸುವಂತೆ ಕೋರಿ ಈ ಇಬ್ಬರೂ ಸಹೋದರರನ್ನು ಹುಬ್ಬಳ್ಳಿಗೆ ಕರೆಸಿಕೊಂಡರು. ಅವರು ಬೃಹತ್ ಮೂರ್ತಿ ಸಿದ್ಧಪಡಿಸುವುದನ್ನು ಕಂಡು ಸ್ಥಳೀಯ ಗಣೇಶೋತ್ಸವ ಮಂಡಳಿಗಳ ಪ್ರಮುಖರು ಅವರಿಂದಲೇ ಮೂರ್ತಿ ತಯಾರು ಮಾಡುವುದು ಮತ್ತೊಂದ ವಿಶೇಷ.
ಹುಬ್ಬಳ್ಳಿಯಲ್ಲಿಯೇ ಮೂರ್ತಿ ತಯಾರಿಕೆ
ಹುಬ್ಬಳ್ಳಿಯಲ್ಲಿ ಮೂರ್ತಿಗಳನ್ನು ತಯಾರಿಸುವುದು ನಮಗೆ ಖುಷಿ ತರುತ್ತದೆ. ನಾವು ತಯಾರು ಮಾಡಿರುವ ಗಣಪತಿಗಳನ್ನು ಗಣೇಶ ಮೂರ್ತಿ ತಯಾರಕರಿಗೆ ಸಹ ವಿವಿಧ ಜಿಲ್ಲೆಗಳ ಗಣೇಶೋತ್ಸವ ಮಂಡಳಿಯವರು ಒಯ್ದು ಪ್ರತಿಷ್ಠಾಪಿಸುತ್ತಾರೆ ಇದು ಇಲ್ಲಿಯ ಮಂಡಳಿಯವರು ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಖುಷಿಪಡುತ್ತಾರೆ.
ಒಟ್ಟಾರೆ 'ಹುಬ್ಬಳ್ಳಿ ಕಾ ಮಹಾರಾಜ' ಕಣ್ತುಂಬಿಕೊಳ್ಳಲು, ವಿಜೃಂಭಣೆಯ ಆಚರಣೆ ನಡೆಸಲು ಭರ್ಜರಿ ತಯಾರಿ ನಡೆದಿದೆ. ಈಗಾಗಲೇ ಮೂರ್ತಿ ತಯಾರಾಗಿದೆ. ಬಣ್ಣ ಹಚ್ಚುವ ಕಾರ್ಯದಲ್ಲಿ ಪಾಲ್ ಸಹೋದರರ ನಿರತರಾಗಿದ್ದಾರೆ. ಇನ್ನೆರಡು ದಿನದಲ್ಲಿ ಮೂರ್ತಿ ಕಾರ್ಯ ಪೂರ್ಣಗೊಳ್ಳಲಿದೆ. ಸೆಪ್ಟಂಬರ್ 7ರಂದು ಶನಿವಾರ ಗಣೇಶ ಪ್ರತಿಷ್ಠಾಪಿಸಲಾಗುತ್ತದೆ. ಹುಬ್ಬಳ್ಳಿ ಸೇರಿದಂತೆ ರಾಜ್ಯಾದ್ಯಂತ ಸಂಭ್ರಮ ಮನೆ ಮಾಡಿರಲಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications