ಬೆಂಗ್ಳೂರಿಗೆ ಬಂದೆ ಬಿಡ್ತು 12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಹರಳುಗಳ ಗಣಪ ಮೂರ್ತಿ, ತಯಾರಾಗಿದ್ದು ಎಲ್ಲಿ?, ಇಲ್ಲಿದೆ ವಿವರ
ಹುಬ್ಬಳ್ಳಿ , ಸೆಪ್ಟೆಂಬರ್, 17: ವಿಘ್ನ ನಿವಾರಕ ಗಣಪತಿ ಮೂರ್ತಿ ತಯಾರು ಮಾಡುವುದು ಎಂದರೆ ದೊಡ್ಡ ಸವಾಲೇ ಸರಿ. ಇದು ಬಲು ಸ್ಪರ್ಧಾತ್ಮಕ ಕಾಲ ಬೇರೆ. ಹೀಗೆ ಹುಬ್ಬಳ್ಳಿಯಲ್ಲಿ ಮೂರ್ತಿ ತಯಾರಿಕೊಬ್ಬರು 12 ಲಕ್ಷ ರೂಪಾಯಿ ಮೌಲ್ಯದ ಅಮೆರಿಕನ್ ಡೈಮಂಡ್ ಹರಳುಗಳಿಂದ ಗಣಪತಿ ಮೂರ್ತಿಯನ್ನು ನಿರ್ಮಿಸಿ ಗಮನ ಸೆಳೆದಿದ್ದಾರೆ. ಅಷ್ಟಕ್ಕೂ ಈ ಮೂರ್ತಿಯನ್ನು ಎಲ್ಲಿಗೆ ಹೊಯ್ಯಲಾಗಿದೆ, ತಯಾರಿಸಿದ್ದು ಯಾರು ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಈ ಗಣಪತಿ ಮೂರ್ತಿ ಒಂದು ಸಲ ನೋಡಬೀಡಿ ಎಷ್ಟೋ ಚೆಂದ ಎಷ್ಟು ಅಂದ ನೋಡಲು ಎರಡೂ ಕಣ್ಣುಗಳು ಸಾಲದು. ಧಾರವಾಡ ಜಿಲ್ಲೆಯ ವಾಣಿಜ್ಯನಗರಿ ಹುಬ್ಬಳ್ಳಿಯ ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು 12 ಲಕ್ಷ ರೂಪಾಯಿ ಮೌಲ್ಯದ ಅಮೆರಿಕನ್ ಡೈಮಂಡ್ ಹರಳುಗಳಿಂದ ಗಣಪತಿ ಮೂರ್ತಿಯನ್ನು ನಿರ್ಮಿಸಿದ್ದಾರೆ. ಸದ್ಯ ಈ ಮೂರ್ತಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಕಳುಹಿಸಿ ಕೊಡಲಾಗಿದೆ .

ಈ ಕುರಿತು ಕಲಾವಿದ ಮಹೇಶ ಮುರಗೋಡ ಅವರು ಮಾತನಾಡಿ, ಗಣಪತಿ ಮೂರ್ತಿ ತಯಾರು ಮಾಡಲು ಬೆಂಗಳೂರಿನವರು ಆರ್ಡರ್ ಮಾಡಿದ್ದರು. ಅದರಲ್ಲೂ 12 ಲಕ್ಷ ರೂಪಾಯಿ ಮೌಲ್ಯದ ಅಮೆರಿಕಾ ಡೈಮಂಡ್ ಹರಳುಗಳಿಂದ ಗಣೇಶ ಮೂರ್ತಿಯನ್ನು ತಯಾರು ಮಾಡಲಾಗಿದೆ ಎಂದರು.
ನಮ್ಮ ತಂಡವು ಕಳೆದ 10 ವರ್ಷಗಳಿಂದ ಅನೇಕ ಗಣಪತಿ ಮೂರ್ತಿ ತಯಾರು ಮಾಡಿದ್ದು, ಇಷ್ಟೊಂದು ಈ ವರ್ಷ ಮಾಡಿದ ಮೂರ್ತಿ ಮಾಡಲಿಲ್ಲ ಎನ್ನುತ್ತಾರೆ ಅಭಿಷೇಕ. ಈ ಅಮೆರಿಕನ್ ಡೈಮಂಡ್ ಮೂರ್ತಿಯನ್ನು ಬೆಂಗಳೂರಿನ ರಾಜಾಜಿನಗರ 2ನೇ ಹಂತದ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘ ಸೆಪ್ಟೆಂಬರ್ 18 ರಂದು ಪ್ರತಿಷ್ಠಾಪನೆ ಮಾಡುತ್ತದೆ. ಈ ಗಣೇಶ ಮೂರ್ತಿ 5.7 ಅಡಿ ಎತ್ತರವಿದ್ದು, ಸುಮಾರು 150 ಕೆ.ಜಿ. ತೂಕ ಇದೆ. ಮುಖವೊಂದನ್ನು ಬಿಟ್ಟು ಇನ್ನುಳಿದ ಎಲ್ಲ ಭಾಗವನ್ನು ಅಮೆರಿಕನ್ ಡೈಮಂಡ್ ಹರಳುಗಳಿಂದ ಮಾಡಲಾಗಿದೆ.
ಕಳೆದ ಹಲವಾರು ವರ್ಷಗಳಿಂದ ಬೆಂಗಳೂರಿನ ಸ್ವಸ್ತಿಕ ಯುವಕರ ಸಂಘ ಅಮೇರಿಕನ್ ಡೈಮಂಡ್ ಹರಳುಗಳಿಂದ ಗಣೇಶ ಮೂರ್ತಿಯನ್ನು ಹುಬ್ಬಳ್ಳಿಯಲ್ಲಿ ತಯಾರಿಸಿಕೊಂಡು, ರೈಲಿನ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಪ್ರತಿಷ್ಠಾಪನೆ ಮಾಡುತ್ತಾರೆ. ಅಲ್ಲದೆ ಏಳು ದಿನಗಳವರೆಗೆ ಅದ್ದೂರಿಯಾಗಿ ಗಣೇಶೋತ್ಸವ ಆಚರಣೆ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಈ ವರ್ಷವೂ ಸಹ ಸುಮಾರು 60 ಸಾವಿರ ಅಮೆರಿಕನ್ ಡೈಮಂಡ್ ಹರಳುಗಳಿಂದ ಐಶ್ವರ್ಯ ಗಣೇಶ ಮಾದರಿಯಲ್ಲಿ ಮೂರ್ತಿಯನ್ನು ನಿರ್ಮಿಸಲಾಗಿದೆ. ಈ ಮೂರ್ತಿಯನ್ನು ನಗರದಿಂದ ರೈಲಿನ ಮೂಲಕ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications