ಈದ್ಗಾ ಮೈದಾನದ ಗಣಪತಿಗೆ ವಿದಾಯ:ಶಾಂತಿಯುತವಾಗಿ ವಿಸರ್ಜನೆಗೊಂಡ ವಿಘ್ನೇಶ್ವರ
ಹುಬ್ಬಳ್ಳಿ, ಸೆಪ್ಟೆಂಬರ್ 21: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ರಾಣಿ ಚೆನ್ನಮ್ಮ (ಈದ್ಗಾ)ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಲಾದ ಗಣೇಶ ಮೂರ್ತಿಯ ವಿಸರ್ಜನೆ ಶಾಂತಿಯುತವಾಗಿ ನೆರವೇರಿದೆ. ಜೊತೆಗೆ ಮೆರವಣಿಗೆ ಕೂಡ ಅದ್ಧೂರಿಯಾಗಿ ನಡೆದಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಪ್ರತಿಷ್ಟಾಪನೆಗೊಂಡಿದ್ದ ಗಣಪತಿ, ಇಂದು ಸಕಲ ವಾದ್ಯ ವೈಭವದೊಂದಿಗೆ ವಿಸರ್ಜನೆಗೊಂಡಿದ್ದು, ಸಾಕಷ್ಟು ದಿನಗಳ ಹೋರಾಟ ಸುಖಾಂತ್ಯಗೊಂಡಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮೆರವಣಿಗೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದ ಬೆನ್ನಲ್ಲೇ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಗಣಪತಿ ಮೆರವಣಿಗೆ ಮಾಡುವ ಮೂಲಕ ವಿಶೇಷವಾಗಿ ಪೂಜೆ ಸಲ್ಲಿಸಿ ಹುಬ್ಬಳ್ಳಿಯ ಗ್ಲಾಸ್ ಹೌಸ್ ಹತ್ತಿರವಿರುವ ಬಾವಿಯಲ್ಲಿ ವಿಸರ್ಜನೆ ಮಾಡಲಾಗಿದೆ.

ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಮಾಹಾನಗರ ಪಾಲಿಕೆ ಅವಕಾಶ ಕೊಟ್ಟಿತ್ತು. ಕೆಲ ಷರತ್ತು ಕೂಡ ಹಾಕಿತ್ತು. ಅದರಂತೆ ಇಂದು 12 ಗಂಟೆಯೊಳಗೆ ಈದ್ಗಾ ಮೈದಾನದಿಂದ ಗಣೇಶ ಹೊರ ಬರಬೇಕು ಎನ್ನುವ ಷರತ್ತು ಹಾಕಲಾಗಿತ್ತು. ಸರಿಯಾಗಿ 11.45ಕ್ಕೆ ಈದ್ಗಾ ಮೈದಾನದಿಂದ ಗಣೇಶನನ್ನ ಹೊರಗೆ ತರಲಾಯಿತು. ಗಣೇಶ ಹೊರಬರುತ್ತಲೆ ಗಣೇಶ ಪ್ರಿಯರ ಘೋಷಣೆ ಮುಗಿಲು ಮುಟ್ಟಿತ್ತು. ಮೆರವಣಿಗೆಯ ಡಿಜೆ ಸದ್ದಿಗೆ ಮಹಿಳೆಯರು ಕುಣಿದು ಕುಪ್ಪಳಿಸಿದರು.
ಇನ್ನು ಈದ್ಗಾ ಮೈದಾನದ ಗಣೇಶ ವಿಸರ್ಜನೆ ವೇಳೆ ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಭಾಗಿಯಾಗಿದ್ದರು. ಮೆರವಣಿಗೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ ತಂಡ ಪ್ಯಾರಾಮಿಲಿಟರಿ ರ್ಯಾಪಿಡ್ ಆಕ್ಷನ್ ಫೋರ್ಸ್ ಸೇರಿದಂತೆ ನಗರದಾದ್ಯಂತ 5 ಸಾವಿರಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications