ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ವಿಸ್ತರಣೆ ಆದ ದಿನವೇ ಸರ್ಕಾರ ಪತನ: ಈಶ್ವರಪ್ಪ

|
Google Oneindia Kannada News

ಹುಬ್ಬಳ್ಳಿ, ನವೆಂಬರ್ 30: ರಾಜ್ಯ ಸರ್ಕಾರ ಸಚಿವ ಸಂಪುಟ ವಿಸ್ತರಣೆ ಮಾಡಿದ ದಿನವೇ ಮೈತ್ರಿ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ ಕಾಂಗ್ರೆಸ್‌ನ ಹಲವು ಶಾಸಕರು ಕಾಯುತ್ತಿದ್ದಾರೆ. ಸರ್ಕಾರ ಉರುಳಿಸಲು ಸಂಪುಟ ವಿಸ್ತರಣೆಯ ನೆಪ ಬೇಕಿದೆ. ವಿಸ್ತರಣೆ ಆದ ಕೂಡಲೇ ಸರ್ಕಾರವನ್ನು ಬೀಳಿಸುತ್ತಾರೆ ಎಂದು ಅವರು ಹೇಳಿದರು.

ಸಂಪುಟ ವಿಸ್ತರಣೆ ಸನಿಹ: ಕಾಂಗ್ರೆಸ್‌ಗೆ ಬಂಡಾಯದ ಭೀತಿಸಂಪುಟ ವಿಸ್ತರಣೆ ಸನಿಹ: ಕಾಂಗ್ರೆಸ್‌ಗೆ ಬಂಡಾಯದ ಭೀತಿ

ರಾಜ್ಯದಲ್ಲಿ ಸರ್ಕಾರ ಇದೆಯಾ? ಎಂಬ ಅನುಮಾನ ಮೂಡುತ್ತಿದೆ. ಮುಖ್ಯಮಂತ್ರಿ ಪದವಿಯ ಆಸೆಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಸಿದ್ದರಾಮಯ್ಯ ಅವರಿಗೆ ಮಾನ-ಮರ್ಯಾದೆ ಇದ್ದಿದ್ದರೆ ಮೈತ್ರಿ ಮಾಡಿಕೊಳ್ಳುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

Government will collapse after the cabinet expansion: KS Eshwarappa

ಅಧಿಕಾರಕ್ಕೆ ಆಸೆ ಪಟ್ಟು ಮಾಡಿಕೊಂಡಿರುವ ಮೈತ್ರಿ ಇದು, ಸಿದ್ದರಾಮಯ್ಯ ಅವರು ತಮ್ಮ ಎಲ್ಲಾ ಆದರ್ಶಗಳನ್ನು ಬದಿಗೆ ಸರಿಸಿ ಮೈತ್ರಿಗೆ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್‌ಗೆ ಎಂದೂ ಇಂಥಹಾ ಹೀನಾಯ ಸ್ಥಿತಿ ಬಂದಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಕುಮಾರಸ್ವಾಮಿ ಮಾತು ಕೇಳಿ ಕಂಗಾಲಾಗಿರುವ ರಾಹುಲ್ ಗಾಂಧಿ!ಕುಮಾರಸ್ವಾಮಿ ಮಾತು ಕೇಳಿ ಕಂಗಾಲಾಗಿರುವ ರಾಹುಲ್ ಗಾಂಧಿ!

ರಾಜ್ಯದಲ್ಲಿ ಇರುವುದು ಜನಪರ ಸರ್ಕಾರವಲ್ಲ, ಅದು ದೇವೇಗೌಡ-ರೇವಣ್ಣ ಸರ್ಕಾರ ಅಷ್ಟೆ ಎಂದು ಲೇವಡಿ ಮಾಡಿದ ಈಶ್ವರಪ್ಪ, ಮುಂದಿನ ಲೋಕಸಭೆಯಲ್ಲಿ ನಾವು 24 ಸೀಟುಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಅವರು ಹೇಳಿದರು.

English summary
BJP leader KS Eshwarappa said that coalition government will collapse after the cabinet expansion. Congress MLAs were waiting for the opportunity to collapse the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X