ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌರಿ ಹತ್ಯೆ ಪ್ರಕರಣ ಭೇದಿಸಲು ಸಹಕರಿಸಿದ ಸಿಬ್ಬಂದಿಗೆ ಬಹುಮಾನ ಘೋಷಣೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಜನವರಿ 06: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಭೇದಿಸಲು ರಾಜ್ಯದ ಎಸ್ಐಟಿ ತಂಡಕ್ಕೆ ಸಹಕರಿಸಿದ ಸಿಬ್ಬಂದಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಬಹುಮಾನ ಘೋಷಣೆ ಮಾಡಿದ್ದಾರೆ.

ದೇಶಾದ್ಯಂತ ಕುತೂಹಲ ಕೆರಳಿಸಿದ್ದ ಪತ್ರಕರ್ತೆ ಗೌರಿ ಲಂಕೇಶ ಅವರ ಹತ್ಯೆಯ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ-ಧಾರವಾಡ

ಜೆಎನ್ ಯು ವಿವಿ ಹಲ್ಲೆಯನ್ನು ಬಿಜೆಪಿ ಖಂಡಿಸುತ್ತದೆ: ಪ್ರಲ್ಹಾದ ಜೋಷಿಜೆಎನ್ ಯು ವಿವಿ ಹಲ್ಲೆಯನ್ನು ಬಿಜೆಪಿ ಖಂಡಿಸುತ್ತದೆ: ಪ್ರಲ್ಹಾದ ಜೋಷಿ

ಕಮೀಷನರೇಟ್ ಘಟಕದ ಬಿ.ಡಿ.ಡಿ.ಎಸ್. (ಸ್ಪೋಟಕ ಪತ್ತೆ ಮತ್ತು ನಿಷ್ಕ್ರೀಯ ದಳ) ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರು ಬಹುಮಾನ ಘೋಷಣೆ ಮಾಡಿದ್ದಾರೆ.

Gowri Murder Case: Announces Reward For Staff Who Helped

ಗೌರಿ ಲಂಕೇಶ ಕೊಲೆ ಪ್ರಕರಣದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಬಿ.ಡಿ.ಡಿ.ಎಸ್. ತಂಡದ 8 ಜನ ಸಿಬ್ಬಂದಿಗಳಾದ ಆರ್.ಎಫ್. ಮುಂತೇಶ, ಸಿ.ಬಿ. ಜಗದ, ಎನ್.ಜಿ. ತೋಪಲಕಟ್ಟಿ, ಎನ್.ಎಸ್. ಇಂಗಳಗಿ, ಡಿ.ವಾಯ್. ಭೋವಿ, ಸ ಎಮ್.ಪಿ. ಔದಕ್ಕನವರ, ಎಮ್.ಆರ್. ಮಹಳ್ಳಿ, ಎಮ್.ಕೆ. ಕೋನಿ ಇವರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಪ್ರಶಂಸನಾ ಪತ್ರ ಮತ್ತು ಬಹುಮಾನ ಘೋಷಣೆ ಮಾಡಿದ್ದಾರೆ,

ಹುಬ್ಬಳ್ಳಿಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ನಡೆದಿದ್ಯಾಕೆ...?ಹುಬ್ಬಳ್ಳಿಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆ ನಡೆದಿದ್ಯಾಕೆ...?

ಸಿಎಆರ್ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಮೆಚ್ಚಿ, ಪೊಲೀಸ್ ಮಹಾ ನಿರ್ದೇಶಕರು ಹಾಗೂ ಪೊಲೀಸ ಮಹಾ ನಿರೀಕ್ಷಕರು, ಬೆಂಗಳೂರು ಇವರು ಪ್ರಶಂಸನಾ ಪತ್ರಗಳನ್ನು ನೀಡಿದ್ದು, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಸಹ ಇವರ ಕಾರ್ಯ ಶ್ಲಾಘಿಸಿ, ಸೂಕ್ತ ಬಹುಮಾನವನ್ನು ಘೋಷಿಸಿ, ಪ್ರಶಂಸನಾ ಪತ್ರಗಳನ್ನು ವಾರದ ಕವಾಯತ್ತಿನಲ್ಲಿ ನೀಡಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Hubli-Dharwad Police Commissioner has announced a reward for the staff who helped the states SIT team to crack down on the murder of journalist Gawri Lankesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X