ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶಮೂರ್ತಿ ಅದ್ಧೂರಿ ವಿಸರ್ಜನೆ
ಹುಬ್ಬಳ್ಳಿ, ಸೆಪ್ಟೆಂಬರ್ 10: ಹುಬ್ಬಳ್ಳಿ ನಗರದ ರಾಣಿ ಚನ್ನಮ್ಮ ಮೈದಾನದಲ್ಲಿ (ಈದ್ಗಾ ಮೈದಾನ) ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನು ಅದ್ಧೂರಿ ಮೆರವಣಿಗೆ ನಡೆಸಿ ನಂತರ ಇಂದಿರಾ ಗಾಜಿನ ಮನೆ ಬಳಿಯ ಬಾವಿಯಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ವಿಸರ್ಜಿಸಲಾಗಿದೆ. ಒಟ್ಟು ಮೂರು ದಿನಗಳವರೆಗೆ ಪ್ರತಿಷ್ಠಾಪಿಸಿದ್ದ ಮೂರ್ತಿಗೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ರಾಣಿ ಚನ್ನಮ್ಮ ಮೈದಾನ ಗಣೇಶೋತ್ಸವ ಮಹಾಮಂಡಳಿ ಕಾರ್ಯಕರ್ತರು ವಿವಿಧ ಧಾರ್ಮಿಕ ಕೈಂಕರ್ಯ ನೆರವೇರಿಸಿದರು.
ಬಿಜೆಪಿ ಎಂಎಲ್ಸಿ ಸಿ.ಟಿ. ರವಿ, ಆರ್ಎಸ್ಎಸ್ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಅವರು ಈದ್ಗಾ ಮೈದಾನದ ಗಣೇಶನ ವಿಗ್ರಹದ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಕಲಾತಂಡಗಳ ಪ್ರದರ್ಶನದೊಂದಿಗೆ ಅದ್ಧೂರಿ ಮೆರವಣಿಗೆ ನಡೆದಿದ್ದು, ಪಂಚವಾದ್ಯ, ರಾಮ್ಡೋಲು-ತಾಷಾ, ಝಾಂಜ್ ಹಾಗೂ ಡಿಜೆ ಮೇಳಗಳು ಮೆರವಣಿಗೆಗೆ ಮೆರಗು ತಂದವು.

ರಸ್ತೆಯುದ್ದಕ್ಕೂ ಭಗವಾಧ್ವಜ, ಕೇಸರಿ ಬಾವುಟಗಳು ರಾರಾಜಿಸಿದವು. ನೆರೆದವರು ಗಣೇಶ, ಹನುಮಾನ್ ಹಾಗೂ ಶ್ರೀರಾಮನಿಗೆ ಜೈಕಾರ ಮೊಳಗಿಸಿದರು. ಗಣಪತಿ ಬಪ್ಪಾ ಮೋರಯಾ..ಎಂದು ಕೇಕೆ ಹಾಕಿದರಲ್ಲೇ ಡಿಜೆ ಸೌಂಡ್ಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಮೆರವಣಿಗೆಯು ಚನ್ನಮ್ಮ ಮೈದಾನದಿಂದ ಆರಂಭವಾಗಿ ಹಳೇ ಬಸ್ ನಿಲ್ದಾಣ ಮಾರ್ಗವಾಗಿ ನಗರದ ಇಂದಿರಾ ಗಾಜಿನ ಮನೆಯವರೆಗೆ ಸಾಗಿತು. ನಂತರ ಪಕ್ಕದ ಬಾವಿಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.
ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ಗಳ ತಂಡ, ಕೆಎಸ್ಆರ್ಪಿ, ಸಿಎಆರ್, ಕ್ಯಾಪಿಡ್ ಆ್ಯಕ್ಷನ್ ಫೋರ್ಸ್ ಸ್ಥಳದಲ್ಲಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಲಿನ ಕಟ್ಟಡಗಳಲ್ಲಿ ಕ್ಯಾಮರಾ ಅಳವಡಿಸಲಾಗಿತ್ತು. ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಡಿಸಿಪಿಗಳಾದ ಮಹಾನಿಂಗ ನಂದಗಾವಿ, ಸಿ.ಆರ್. ರವೀಶ ಮೆರವಣಿಗೆಯುದ್ದಕ್ಕೂ ಸಾಗಿ ಬಂದು ಭದ್ರತೆ ನೀಡಿದರು.

ಗಣೇಶ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿಯಲ್ಲಿ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿತ್ತು. ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಬೇರೆಡೆಯಿಂದ ಆಗಮಿಸಿದ್ದ ಪ್ರಯಾಣಿಕರು ಇಳಿಯಲು ಪ್ರತ್ಯೇಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications