ಗಂಗೂಬಾಯಿ ಹಾನಗಲ್ ಮೊಮ್ಮಗ ಮನೋಜ್ ನಿಧನ
ಹುಬ್ಬಳ್ಳಿ, ಮೇ 15: ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗ ಮನೋಜ್ ಹಾನಗಲ್ (54) ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಇಲ್ಲಿ ಹೃದಯಾಘಾತದಿಂದ ನಿಧನರಾದರು.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ವೃತ್ತಿಯಿಂದ ವಕೀಲರಾಗಿದ್ದ ಮನೋಜ್ ಹಾನಗಲ್ ಅವರು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ನಲ್ಲಿ ಸಕ್ರಿಯವಾಗಿ ತೊಡಿಸಿಕೊಂಡಿದ್ದರು. ಈದ್ಗಾ ಮೈದಾನದ ಹೋರಾಟದಲ್ಲಿಯೂ ಭಾಗವಹಿಸಿದ್ದರು.
ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿದ್ದರಿಂದ ಅಸ್ವಸ್ಥರಾಗಿದ್ದ ಅವರನ್ನು ಮಂಗಳವಾರ ಬೆಳಿಗ್ಗೆ 9.30ರ ಸುಮಾರಿಗೆ ನಗರದ ವಿವೇಕಾನಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಸುಚಿರಾಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಮನೋಜ್ ಅವರು ಜಿ.ಜಿ. ಕಾಮರ್ಸ್ ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದರು. ಬಳಿಕ ಸಕ್ರಿ ಕಾನೂನು ಕಾಲೇಜಿನಲ್ಲಿ ಎಲ್ಎಲ್ಬಿ ಪದವಿ ಪಡೆದಿದ್ದರು. ಕೆಲವು ಕಾಲ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು.
ಅವರಿಗೆ ತಂದೆ ಬಾಬುರಾವ್ ಹಾನಗಲ್, ತಾಯಿ ಲಲಿತಾ ಹಾನಗಲ್, ಸಹೋದರ ಮತ್ತು ಇಬ್ಬರು ಸಹೋದರಿಯರು ಇದ್ದಾರೆ. ಮನೋಜ್ ಅವರು ಡಾ. ಗಂಗೂಬಾಯಿ ಹಾನಗಲ್ ಸಂಗೀತ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದರು. 2005ರಲ್ಲಿ ಅವರು ಗಂಗೂಬಾಯಿ ಹಾನಗಲ್ ಸಂಗೀತ ವಸ್ತು ಸಂಗ್ರಹಾಲಯವನ್ನು ಆರಂಭಿಸಿದ್ದರು. ಅವರನ್ನು ಅನೇಕ ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು.
ರಾಜಕೀಯ ರಂಗಕ್ಕೂ ಕಾಲಿರಿಸಿದ್ದ ಅವರು ಒಮ್ಮೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ವಿಧಾನಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಬುಧವಾರ ಕೇಶವಾಪುರದ ಮುಕ್ತಿಧಾಮದಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications