ಹುಬ್ಬಳ್ಳಿ: ಸಾಯಿಬಾಬಾ ಭಜನೆ, ದುರ್ಗಾದೇವಿ ಆರಾಧನೆ
ಹುಬ್ಬಳ್ಳಿ,ಜುಲೈ,19: ನಗರದಲ್ಲಿ ಮಂಗಳವಾರ ಆಷಾಢ ಹುಣ್ಣಿಮೆದಂದು ಗುರು ಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗಿನಿಂದಲೇ ಸಾರ್ವಜನಿಕರು ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದರು.
ನಗರದ ಶಿರಡಿ ನಗರದ ಸಾಯಿಬಾಬಾ ಮಂದಿರ, ಕೋರ್ಟ್ ವೃತ್ತ ಸಾಯಿಮಂದಿರದಲ್ಲಿ ಸಾವಿರಾರು ಭಕ್ತ ಸಮೂಹ ಬಾಬಾ ದರ್ಶನ ಪಡೆದುಕೊಂಡು ಗುರು ಕಾಣಿಕೆ ಸಲ್ಲಿಸಿದರು.[ಸನ್ಮಾರ್ಗ ತೋರಿದವರಿಗೆ ನಮೋ ನಮಃ]

ಐದು ದೇವಿಯವರ ದರ್ಶನ: ಇನ್ನು ನಗರದ ಮುತ್ತೈದೆಯರು ಐದು ದೇವಿಯವರ ದೇವಸ್ಥಾನಕ್ಕೆ ಭೇಟಿ ನೀಡಿ ಉಡಿ ತುಂಬಿದರು. ಆಷಾಢದಲ್ಲಿ ಐದು ದೇವಿಗಳಿಗೆ ಉಡಿ ತುಂಬುವ ಪದ್ಧತಿ ಎರಡು ವಾರಗಳ ಹಿಂದಿನಿಂದ ನಡೆಯುತ್ತಿದ್ದು, ಇನ್ನೆರಡು ವಾರ ಉಡಿ ತುಂಬುವ ಕಾರ್ಯ ಮಾಡಿಕೊಂಡು ನಂತರ ಶ್ರಾವಣ ಮಾಸದಲ್ಲಿ ವೃತ ಪೂರ್ಣಗೊಳಿಸುತ್ತಾರೆ.

ಗುರು ಕಾಣಿಕೆ :ಗುರು ಪೂರ್ಣಿಮೆಯಂದು ಹಲವಾರು ಜನರು ತಮ್ಮ ಇಚ್ಛಿತ ವಿದ್ಯೆ ಕಲಿಸಿದ ಗುರುಗಳಿಗೆ, ಗುರು ಸ್ಥಾನ ಕೊಟ್ಟಿರುವ ಸ್ವಾಮೀಜಿಗಳಿಗೆ ಗುರು ಕಾಣಿಕೆ ಸಲ್ಲಿಸಿ ಸಂಭ್ರಮ ಪಟ್ಟು ಆಶೀರ್ವಾದ ಪಡೆದುಕೊಂಡರು.[ಹೀಗಿದ್ದರು ನಮ್ಮ ಎಚ್ಚೆನ್ ಮೇಷ್ಟ್ರು]

ಚಾತುರ್ಮಾಸ್ಯ ಆರಂಭ: ಆಷಾಢ ಏಕಾದಶಿ ಆಚರಿಸಿದ್ದ ವೈಷ್ಣವ ಸಮುದಾಯದವರು ಮಂಗಳವಾರದಿಂದ ಚಾತುರ್ಮಾಸ್ಯ ಆಚರಣೆ ಆರಂಭಿಸಿದರು. ಈ ಹಿನ್ನೆಲೆಯಲ್ಲಿ ನಗರದ ಹಲವಾರು ದೇವಸ್ಥಾನಗಳಲ್ಲಿ ಚಾತುರ್ಮಾಸ್ಯದಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದುರ್ಗಾದೇವಿ ಜಾತ್ರೆ: ನಗರದ ಹೊಸುರು ಬಳಿಯ ದುರ್ಗಾದೇವಿಯ ಜಾತ್ರೆಯು ಮಂಗಳವಾರ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದುಕೊಂಡರು.

ಮಂಗಳವಾರ ಸಂಜೆ ದೇವಿಯ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಪ್ರಸಾದ ಸ್ವೀಕರಿಸಲು ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications