ವಿವಿಧ ಬೇಡಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ನೇಕಾರರ ಪ್ರತಿಭಟನೆ
ಹುಬ್ಬಳ್ಳಿ, ಜುಲೈ 6: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಕೈಮಗ್ಗ ನೇಕಾರರ ಸಂಘದ ಪ್ರತಿನಿಧಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರಲ್ಲದೆ ನಿಗಮದ ಅಧ್ಯಕ್ಷ ಹಾಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಹಲವು ವರ್ಷಗಳಿಂದ ನಮ್ಮ ಬೇಡಿಕೆ ಈಡೇರಿಲ್ಲ. ಪ್ರತಿ ಸಲ ಪ್ರತಿಭಟನೆ ನಡೆಸಿದಾಗ ಭರವಸೆ ನೀಡುತ್ತೀರಿ. ನೇಕಾರ ಅಭಿವೃದ್ಧಿಗಾಗಿ ಸ್ಥಾಪಿಸಲಾದ ನಿಗಮದಿಂದ ಯಾವುದೇ ಪ್ರಯೋಜನವಾಗಿಲ್ಲ. ರೈತರಂತೆ ನೇಕಾರರು ಸಹ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದ ನಿಗಮದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಸಂಘದ ಪರವಾಗಿ ಇಬ್ಬರು ಪ್ರತಿನಿಧಿಗಳು ಒಳಗೆ ಬನ್ನಿ ಸಮಸ್ಯೆ ಬಗ್ಗೆ ಚರ್ಚಿಸೋಣ ಎಂದರು. ಇದರಿಂದ ಮತ್ತಷ್ಟು ಕೆರಳಿದ ಒಳಗೆ ಕರೆದುಕೊಂಡು ಹೋಗಿ ರಾಜಿ ಮಾಡುವುದು ಬೇಡ ಎಲ್ಲರ ಎದುರು ನಿಮ್ಮ ನಿರ್ಧಾರ ತಿಳಿಸಿ ಎಂದು ಪಟ್ಟು ಹಿಡಿದರು.
ಸಂಘದ ಪ್ರಮುಖ ಬೇಡಿಕೆಗಳು
ನೇಕಾರರ ಮಜೂರಿ ಶೇ 50ರಷ್ಟು ಹೆಚ್ಚು ಮಾಡಬೇಕು. ನೇಕಾರರ ಮನೆಗಳನ್ನು ಅವರ ಹೆಸರಿನಲ್ಲಿ ನೋಂದಾಯಿಸಬೇಕು. ನೇಕಾರರಿಗೆ ಗುಣಮಟ್ಟದ ನೂಲು ಪೂರೈಕೆ ಮಾಡಬೇಕು. ಶೂಟಿಂಗ್ ಮತ್ತು ಜಕಾರ್ಡ್ ಮಗ್ಗಗಳನ್ನು ಪುನರ್ ಆರಂಭಿಸಬೇಕು. ನಿಗಮದ ಎಂಡಿ ಹಾಗೂ ಅಧ್ಯಕ್ಷರು ಖಾಯಂ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸಬೇಕು. ನಿಗಮದ ಕಚೇರಿಯಲ್ಲಿ ನೇಕಾರರ ಮಕ್ಕಳಿಗೆ ಕೆಲಸಕ್ಕೆ ತೆಗೆದುಕೊಳ್ಳುವುದು, ನಿಗಮದಲ್ಲಿ ನಡೆದ ಹಗರಣದ ತನಿಖೆ ಸೇರಿದಂತೆ ಹಲವು ಬೇಡಿಕೆಯನ್ನು ಈಡೇರಿಸುವಂತೆ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.
ರಾಜ್ಯ ನೇಕಾರರ ಸಂಘದ ಅಧ್ಯಕ್ಷ ಎನ್.ಜೆ. ಮಾಳವದೆ, ಕೊಪ್ಪಳ ಜಿಲ್ಲೆ ಉಪಾಧ್ಯಕ್ಷ ವಿಠ್ಠಪ್ಪ ಗೋರಂಟ್ಲಿ, ರಾಮಚಂದ್ರ ಮುದಗಲ, ಸರೇಶ ಶಿರಹಟ್ಟಿ, ಪ್ರೇಮವ್ವ ಮುಳಗುಂದ, ಗೌರಮ್ಮ ಬೆಡಗೇಲಿ, ಶೋಭಾ ದಡಿಗೌಡರ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications