ವಿವಿಧ ಬೇಡಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ನೇಕಾರರ ಪ್ರತಿಭಟನೆ
ಹುಬ್ಬಳ್ಳಿ, ಜುಲೈ 6: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಕೈಮಗ್ಗ ನೇಕಾರರ ಸಂಘದ ಪ್ರತಿನಿಧಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರಲ್ಲದೆ ನಿಗಮದ ಅಧ್ಯಕ್ಷ ಹಾಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಹಲವು ವರ್ಷಗಳಿಂದ ನಮ್ಮ ಬೇಡಿಕೆ ಈಡೇರಿಲ್ಲ. ಪ್ರತಿ ಸಲ ಪ್ರತಿಭಟನೆ ನಡೆಸಿದಾಗ ಭರವಸೆ ನೀಡುತ್ತೀರಿ. ನೇಕಾರ ಅಭಿವೃದ್ಧಿಗಾಗಿ ಸ್ಥಾಪಿಸಲಾದ ನಿಗಮದಿಂದ ಯಾವುದೇ ಪ್ರಯೋಜನವಾಗಿಲ್ಲ. ರೈತರಂತೆ ನೇಕಾರರು ಸಹ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದ ನಿಗಮದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಸಂಘದ ಪರವಾಗಿ ಇಬ್ಬರು ಪ್ರತಿನಿಧಿಗಳು ಒಳಗೆ ಬನ್ನಿ ಸಮಸ್ಯೆ ಬಗ್ಗೆ ಚರ್ಚಿಸೋಣ ಎಂದರು. ಇದರಿಂದ ಮತ್ತಷ್ಟು ಕೆರಳಿದ ಒಳಗೆ ಕರೆದುಕೊಂಡು ಹೋಗಿ ರಾಜಿ ಮಾಡುವುದು ಬೇಡ ಎಲ್ಲರ ಎದುರು ನಿಮ್ಮ ನಿರ್ಧಾರ ತಿಳಿಸಿ ಎಂದು ಪಟ್ಟು ಹಿಡಿದರು.
ಸಂಘದ ಪ್ರಮುಖ ಬೇಡಿಕೆಗಳು
ನೇಕಾರರ ಮಜೂರಿ ಶೇ 50ರಷ್ಟು ಹೆಚ್ಚು ಮಾಡಬೇಕು. ನೇಕಾರರ ಮನೆಗಳನ್ನು ಅವರ ಹೆಸರಿನಲ್ಲಿ ನೋಂದಾಯಿಸಬೇಕು. ನೇಕಾರರಿಗೆ ಗುಣಮಟ್ಟದ ನೂಲು ಪೂರೈಕೆ ಮಾಡಬೇಕು. ಶೂಟಿಂಗ್ ಮತ್ತು ಜಕಾರ್ಡ್ ಮಗ್ಗಗಳನ್ನು ಪುನರ್ ಆರಂಭಿಸಬೇಕು. ನಿಗಮದ ಎಂಡಿ ಹಾಗೂ ಅಧ್ಯಕ್ಷರು ಖಾಯಂ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸಬೇಕು. ನಿಗಮದ ಕಚೇರಿಯಲ್ಲಿ ನೇಕಾರರ ಮಕ್ಕಳಿಗೆ ಕೆಲಸಕ್ಕೆ ತೆಗೆದುಕೊಳ್ಳುವುದು, ನಿಗಮದಲ್ಲಿ ನಡೆದ ಹಗರಣದ ತನಿಖೆ ಸೇರಿದಂತೆ ಹಲವು ಬೇಡಿಕೆಯನ್ನು ಈಡೇರಿಸುವಂತೆ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.
ರಾಜ್ಯ ನೇಕಾರರ ಸಂಘದ ಅಧ್ಯಕ್ಷ ಎನ್.ಜೆ. ಮಾಳವದೆ, ಕೊಪ್ಪಳ ಜಿಲ್ಲೆ ಉಪಾಧ್ಯಕ್ಷ ವಿಠ್ಠಪ್ಪ ಗೋರಂಟ್ಲಿ, ರಾಮಚಂದ್ರ ಮುದಗಲ, ಸರೇಶ ಶಿರಹಟ್ಟಿ, ಪ್ರೇಮವ್ವ ಮುಳಗುಂದ, ಗೌರಮ್ಮ ಬೆಡಗೇಲಿ, ಶೋಭಾ ದಡಿಗೌಡರ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
-
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications