ಹನುಮಂತನಿಗೂ ಕೊರೊನಾ ಭೀತಿ; ಪೂಜೆಗೆ ಸಾಮಾಜಿಕ ಅಂತರ

ಹುಬ್ಬಳ್ಳಿ, ಏಪ್ರಿಲ್ 08 : ಕೊರೊನಾ ಹರಡದಂತೆ ತಡೆಯಲು ಭಾರತದಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಕೊರೊನಾ ಭೀತಿಯ ನಡುವೆ ಜನರು ಯುಗಾದಿ, ರಾಮನವಮಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಬುಧವಾರ ಹನುಮ ಜಯಂತಿ ಬಂದಿದೆ.

Recommended Video

      ದಯವಿಟ್ಟು ನಿಯಮಗಳನ್ನು ಪಾಲಿಸಿ ಎಂದ ಸುಮಲತಾ | Sumalatha Ambareesh | oneindia kannada

      ಹನುಮ ಜಯಂತಿದಿನದಂದು ಬಹಳ ಜನರು ಹನುಮಂತ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದರು. ಆದರೆ, ಈ ಬಾರಿ ಲಾಕ್ ಡೌನ್ ಪರಿಣಾಮ ದೇವಾಲಯದ ಬಾಗಿಲು ಮುಚ್ಚಿದೆ. ಜನರು ಮನೆಯಿಂದ ಹೊರ ಬರುವಂತಿಲ್ಲ. ದೇವಾಲಯಕ್ಕೆ ಹೋಗುವುದು ದೂರದ ಮಾತು.

      ಕೊರೊನಾ ಹರಡದಂತೆ ತಡೆಯಲು ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ. ಜನರು ಅಗತ್ಯ ವಸ್ತುಗಳ ಖರೀದಿಗೆ ಹೋದಾಗ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಹನುಮನ ಪೂಜೆಗೆ ಸಾಮಾಜಿಕ ಅಂತರ ಕಾಪಾಡಬೇಕಿದೆ.

      Hanuman Jayanti Social Distancing During Offering Prayers To Lord

      ಹುಬ್ಬಳ್ಳಿಯಲ್ಲಿ ದೇವಾಲಯಗಳು ಬಾಗಿಲು ಹಾಕಿದೆ. ಆದ್ದರಿಂದ, ಹನುಮನ ಭಕ್ತರು ರಸ್ತೆಯ ಪಕ್ಕದಲ್ಲಿರುವ ಹನುಮನ ಚಿಕ್ಕ ಗುಡಿಯಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ಪೂಜೆ ಸಲ್ಲಿಸುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಂಡಿರುವ ಫೋಟೋ ವೈರಲ್ ಆಗಿದೆ.

      ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬೆಳಗ್ಗೆ ಟ್ವೀಟ್ ಮಾಡಿ ದೇಶದ ಜನರಿಗೆ ಹನುಮ ಜಯಂತಿ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ವಿವಿಧ ರಾಜಕೀಯ ನಾಯಕರು ಹನುಮ ಜಯಂತಿ ಶುಭಾಶಯಗಳನ್ನು ತಿಳಿಸಲು ಟ್ವೀಟ್ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+