ಕುಮಾರಸ್ವಾಮಿ ಅವರ ಆಲಮಟ್ಟಿ ಬಾಗಿನ ಕಾರ್ಯಕ್ರಮ ರದ್ದು
ಹುಬ್ಬಳ್ಳಿ, ಆಗಸ್ಟ್ 12 : ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಾರ್ಯಕ್ರಮ ರದ್ದಾಗಿದೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದರು.
ಹುಬ್ಬಳ್ಳಿಯಲ್ಲಿ ನ್ಯಾಯಾಲಯದ ಕಟ್ಟಡ ಉದ್ಘಾಟನೆ ಮಾಡಿದ ಬಳಿಕ ಕುಮಾರಸ್ವಾಮಿ ಅವರು ವಿಜಯಪುರಕ್ಕೆ ಭೇಟಿ ನೀಡಬೇಕಿತ್ತು. ಆದರೆ, ಹವಾಮಾನ ವೈಫರಿತ್ಯದ ಕಾರಣ ಪ್ರವಾಸ ರದ್ದಾಗಿದೆ. ಹೆಲಿಕಾಪ್ಟರ್ ಟೇಕಾಫ್ಗೆ ಪೈಲೆಟ್ ನಿರಾಕರಿಸಿದರು.

ಹೆಚ್ಚಿನ ಮಳೆ, ಮೋಡ ಕವಿದ ವಾತಾವರಣದ ಹಿನ್ನಲೆಯಲ್ಲಿ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಟೇಕಾಫ್ ಆಗಲಿಲ್ಲ. ಆದ್ದರಿಂದ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
ಮುಖ್ಯಮಂತ್ರಿಗಳು ಮೈದುಂಬಿದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಬೇಕಿತ್ತು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಮುಂತಾದ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು.
'ಹೆಚ್ಚಿನ ಮಳೆ ಮತ್ತು ಮೋಡ ಕವಿದ ವಾತಾವರಣದ ಹಿನ್ನಲೆಯಲ್ಲಿ ಆಲಮಟ್ಟಿಗೆ ಬಾಗಿನ ನೀಡುವ ಕಾರ್ಯಕ್ರಮ ರದ್ದು ಮುಂದೂಡಲಾಗಿದೆ' ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು. ಆಗಸ್ಟ್ ಅಂತ್ಯದಲ್ಲಿ ಮತ್ತೊಂದು ದಿನವನ್ನು ನಿಗದಿ ಮಾಡಲಾಗುತ್ತದೆ.
ಹುಬ್ಬಳ್ಳಿಯಲ್ಲಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ಅಲ್ಲಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.












Click it and Unblock the Notifications