ಕುಮಾರಸ್ವಾಮಿ ಅವರ ಆಲಮಟ್ಟಿ ಬಾಗಿನ ಕಾರ್ಯಕ್ರಮ ರದ್ದು
ಹುಬ್ಬಳ್ಳಿ, ಆಗಸ್ಟ್ 12 : ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಾರ್ಯಕ್ರಮ ರದ್ದಾಗಿದೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದರು.
ಹುಬ್ಬಳ್ಳಿಯಲ್ಲಿ ನ್ಯಾಯಾಲಯದ ಕಟ್ಟಡ ಉದ್ಘಾಟನೆ ಮಾಡಿದ ಬಳಿಕ ಕುಮಾರಸ್ವಾಮಿ ಅವರು ವಿಜಯಪುರಕ್ಕೆ ಭೇಟಿ ನೀಡಬೇಕಿತ್ತು. ಆದರೆ, ಹವಾಮಾನ ವೈಫರಿತ್ಯದ ಕಾರಣ ಪ್ರವಾಸ ರದ್ದಾಗಿದೆ. ಹೆಲಿಕಾಪ್ಟರ್ ಟೇಕಾಫ್ಗೆ ಪೈಲೆಟ್ ನಿರಾಕರಿಸಿದರು.

ಹೆಚ್ಚಿನ ಮಳೆ, ಮೋಡ ಕವಿದ ವಾತಾವರಣದ ಹಿನ್ನಲೆಯಲ್ಲಿ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಟೇಕಾಫ್ ಆಗಲಿಲ್ಲ. ಆದ್ದರಿಂದ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
ಮುಖ್ಯಮಂತ್ರಿಗಳು ಮೈದುಂಬಿದ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಬೇಕಿತ್ತು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಮುಂತಾದ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು.
'ಹೆಚ್ಚಿನ ಮಳೆ ಮತ್ತು ಮೋಡ ಕವಿದ ವಾತಾವರಣದ ಹಿನ್ನಲೆಯಲ್ಲಿ ಆಲಮಟ್ಟಿಗೆ ಬಾಗಿನ ನೀಡುವ ಕಾರ್ಯಕ್ರಮ ರದ್ದು ಮುಂದೂಡಲಾಗಿದೆ' ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು. ಆಗಸ್ಟ್ ಅಂತ್ಯದಲ್ಲಿ ಮತ್ತೊಂದು ದಿನವನ್ನು ನಿಗದಿ ಮಾಡಲಾಗುತ್ತದೆ.
ಹುಬ್ಬಳ್ಳಿಯಲ್ಲಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ಅಲ್ಲಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications