ವಿದ್ಯಾರ್ಥಿಯ ತಲೆ ಬೋಳಿಸಿ ಕ್ರೌರ್ಯ ಮೆರೆದ ಹುಬ್ಬಳ್ಳಿ ಮುಖ್ಯ ಶಿಕ್ಷಕಿ
ಹುಬ್ಬಳ್ಳಿ, ಫೆಬ್ರವರಿ 9: ಇಲ್ಲಿಯ ನೆಹರು ನಗರದ ಸೇಂಟ್ ಪೌಲ್ಸ್ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯ ತಲೆ ಬೋಳಿಸಿ ಅಮಾನವೀಯತೆ ಮೆರದ ಘಟನೆ ಬುಧವಾರ ಜರುಗಿದೆ.
ಈ ಕುರಿತು ಮಾತನಾಡಿದ ವಿದ್ಯಾರ್ಥಿಯ ತಂದೆ ಖಾಸಗಿ ಸಂಸ್ಥೆಯ ಉದ್ಯೋಗಿ ಸೀಸಿಲ್ ನನ್ನ ಮಗನಿಗೆ ಮೊದ ಮೊದಲು ತಲೆಗೂದಲು ಕತ್ತರಿಸಿಕೊಂಡು ಬರಲು ಮನೆಗೆ ಹೇಳಿ ಕಳಿಸುತ್ತಿದ್ದರು. 6ನೇ ತರಗತಿ ಓದುತ್ತಿರುವ ನನ್ನ ಪುತ್ರ ಸ್ಯಾಮುಯೆಲ್ ಸಿ. ಬೋರ್ಗಾಯಿ (12) ನನ್ನು ಬುಧವಾರ ಶಾಲೆಯಲ್ಲಿ ಎಲ್ಲರೆದುರು ಹಿಡಿದುಕೊಂಡು ತಲೆಯಲ್ಲಿನ ಅರ್ಧ ಕೂದಲು ಕತ್ತರಿಸಿದ್ದಾರೆ. ಇದರಿಂದ ನೊಂದ ನನ್ನ ಮಗ ಮಾನಸಿಕವಾಗಿ ಕುಗ್ಗಿ ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದಾನೆ ಎಂದು ತಿಳಿಸಿದರು.[ಮಂಗಳೂರು: ಪ್ರಾಂಶುಪಾಲರ ಮೇಲೆ ವಿದ್ಯಾರ್ಥಿ ಹಲ್ಲೆ]

ಸ್ಪಷ್ಟನೆ ಕೇಳಲು ಶಾಲೆಗೆ ಹೋದರೆ ಶಾಲಾ ಸಿಬ್ಬಂದಿಯವರು ಇಲ್ಲಿ ಯಾರೂ ಇಲ್ಲ ನೀವು ನಾಳೆಗೆ ಬನ್ನಿ ಎಂದು ಹೇಳಿ ಬೇಜವಾಬ್ದಾರಿ ತನ ಮೆರೆದಿದ್ದಾರೆ. ಈ ರೀತಿ ಚಿಕ್ಕಮಕ್ಕಳಿಗೆ ಅಮಾನವೀಯತೆಯಿಂದ ನಡೆದುಕೊಳ್ಳುತ್ತಿರುವ ಶಾಲಾ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನನ್ನ ಒತ್ತಾಯವಾಗಿದೆ. ಅಲ್ಲದೇ ಶಾಲಾ ಮುಂಭಾಗ ಮೈದಾನವನ್ನು ಶಾಲೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದೆ ಎಂಬ ಆರೋಪವೂ ಇದೆ ಎಂದರು.

ಈ ಹಿಂದೆಯೂ ಅನೇಕ ರೀತಿಯ ಅಮಾನವೀಯ ಘಟನೆಗಳು ಈ ಶಾಲೆಯಲ್ಲಿ ನಡೆದಿದೆ. ಆದರೆ ನಾನು ಮತ್ತು ನನ್ನ ಮಗನಿಗಾದ ತೊಂದರೆ ಬೇರೆಯವರಿಗೆ ಆಗಬಾರದು, ನನಗೆ ನ್ಯಾಯ ದೊರಕಿಸಿ ಕೊಡಿ ಎಂದು ಸೀಸಿಲ್ ಅಲವತ್ತುಕೊಂಡಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications