Heavy Rains ಹುಬ್ಬಳ್ಳಿ - ಧಾರವಾಡದಲ್ಲಿ ಧಾರಾಕಾರ ಮಳೆ: ಈ ರಸ್ತೆಗಳಲ್ಲಿ ಕೆರೆಯಂತೆ ನಿಂತ ನೀರು
ಹುಬ್ಬಳ್ಳಿ - ಧಾರವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರವಾಡದಲ್ಲಿ ಭಾನುವಾರ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಹುಬ್ಬಳ್ಳಿಯ ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡಿದರು. ಇಲ್ಲಿನ ಎನ್ಟಿಟಿಎಫ್ ರಸ್ತೆ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಮೊಣಕಾಲಿನ ವರೆಗೆ ನೀರು ತುಂಬಿ ಕೊಂಡಿತ್ತು.
ಕೇಶ್ವಾಪುರದ ಸುತ್ತಮುತ್ತ ಸಹ ಮಳೆ ಅವಾಂತರ ಸೃಷ್ಟಿಯಾಗಿದೆ. ಧಾರವಾಡದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ದಿನಸಿ ಹಾಗೂ ಕಾಳು ಕಡಿಗೆ ಹಾಳಾಗಿವೆ. ಕಳೆದ ಒಂದು ವಾರದಿಂದ ಹುಬ್ಬಳ್ಳಿ - ಧಾರವಾಡದಲ್ಲಿ ಮಳೆ ತುಸು ಬಿಡುವು ನೀಡಿತ್ತು. ಶನಿವಾರದಿಂದ ಚುರುಕು ಪಡೆದುಕೊಂಡಿದ್ದು, ಅವಳಿ ಜಿಲ್ಲೆ ಹುಬ್ಬಳ್ಳಿ - ಧಾರವಾಡದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಚಿಗರಿ ಬಸ್ ಮಾರ್ಗದಲ್ಲಿ ನಿಂತ ನೀರು
ಹುಬ್ಬಳ್ಳಿ - ಧಾರವಾಡದ ಚಿಗರಿ ಬಸ್ ನಿಲ್ಲುವ ಮಾರ್ಗದಲ್ಲಿ ಮಳೆ ನೀರು ನಿಂತಿದ್ದು ಜನ ಹಾಗೂ ವಾಹನ ಸವಾರರು ಪರದಾಡುತ್ತಿದ್ದಾರೆ. ಕೊಚ್ಚೆ, ಗಲೀಜು ನೀರು ಅಂಗಡಿಗಳಿಗೂ ನುಗ್ಗಿದೆ. ರಸ್ತೆ ಬದಿಯಲ್ಲಿ ಓಡಾಡಲಾಗದೆ. ಪಾದಚಾರಿಗಳು ಸಾಹಸವನ್ನೇ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಭಾರೀ ಮಳೆ ಬಂದಾಗೆಲ್ಲ ಚಿಗರಿ ಬಸ್ ಸಾಗುವ ಮಾರ್ಗದಲ್ಲಿ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗುತ್ತದೆ. ಆದರೆ, ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ - ಧಾರವಾಡ ಪಾಲಿಕೆ ಈ ನಿಟ್ಟಿನಲ್ಲಿ ಇಲ್ಲಿಯವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಜನ ದೂರಿದ್ದಾರೆ.
ಶನಿವಾರ ಮತ್ತು ಭಾನುವಾರ ಸುರಿದ ಮಳೆಯಿಂದ ನಗರದ ಬಹುತೇಕ ಭಾಗದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿತ್ತು. ನಗರದ ಒಳಭಾಗದ ರಸ್ತೆಗಳಲ್ಲಿ ಡಾಂಬರೀಕರಣ ಸಮರ್ಪಕವಾಗಿ ಆಗಿಲ್ಲ. ಒಳ ಭಾಗದ ಕಚ್ಚಾ ರಸ್ತೆಗಳು ಕೆಸರು ಗದ್ದೆಯಂತೆ ಬದಲಾಗಿದ್ದು, ವಾಹನ ಸವಾರರು ಕೆಳೆಗೆ ಬೀಳುತ್ತಿದ್ದಾರೆ. ಇಲ್ಲಿನ ಎನ್ಟಿಟಿಎಫ್ ರಸ್ತೆಯ ತುಂಬಾ ಮಳೆ ನೀರು ನಿಂತಿದೆ. ಈ ಭಾಗದಲ್ಲಿ ಸಂಚರಿಸುವ ಪ್ರಯಾಣಿಕರು ಹಾಗೂ ವಾಹನ ಸವಾರರು ಮಳೆ ನೀರಿನಲ್ಲಿ ಸಾಗಲಾಗದೆ ಪರದಾಡಿದ್ದಾರೆ. ಧಾರವಾಡದಿಂದ ಹುಬ್ಬಳ್ಳಿಗೆ ಹೋಗುವ ಹಲವು ರಸ್ತೆಗಳಲ್ಲಿ ನೀರು ನಿಂತಿದೆ. ಗುಡುಗು ಸಹಿತ ಸುಮಾರ ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದೆ.
ಸಿಡಿಲು ಬಡಿದು ರೈತ ಸಾವು
ಕಳೆದ ಎರಡು ದಿನಗಳಿಂದ ಹುಬ್ಬಳ್ಳಿ - ಧಾರವಾಡದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ, ಭಾನುವಾರ ಸುರಿದ ಧಾರಾಕಾರ ಮಳೆ ವೇಳೆ ಸಿಡಿಲು ಬಡಿದು ರೈತರೊಬ್ಬರು ಮೃತಪಪಟ್ಟಿದ್ದಾರೆ. ಧಾರವಾಡದ ಹನುಮನಹಾಳ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಭೀಮನಗೌಡ ಮಲ್ಲನಗೌಡ ಪಾಟೀಲ (65) ಎನ್ನುವವರು ಸಿಡಿಲಾಘಾತಕ್ಕೆ ಬಲಿಯಾಗಿದ್ದಾರೆ.
ರೈತ ಭೀಮನಗೌಡ ಅವರು ಆಕಳನ್ನು ತೆಗೆದುಕೊಂಡು ತಮ್ಮ ಹೊಲಕ್ಕೆ ಹೋಗಿ ಶೇಂಗಾ ಸೋಸುವ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಗರಗ ಠಾಣೆ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿ, ದೂರು ದಾಖಲಿಸಿಕೊಂಡಿದ್ದಾರೆ. ನಂತರ ಭೀಮನಗೌಡ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications