ವಿದ್ಯುತ್ ಬಿಲ್ ಪಾವತಿಸದವರಿಗೆ ಅ.1ರಿಂದ ವಿದ್ಯುತ್ ಸಂಪರ್ಕ ಕಟ್ ನಿಯಮ ಜಾರಿ
ಹುಬ್ಬಳ್ಳಿ, ಸೆಪ್ಟಂಬರ್ 27: ವಿದ್ಯುತ್ ಗ್ರಾಹಕರಿಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಕಟು ಎಚ್ಚರಿಕೆ ನೀಡಿದೆ. ಯಾವ ಗ್ರಾಹಕರು ಬಾಕಿ ಇರುವ ವಿದ್ಯುತ್ ಬಿಲ್ ಪಾವತಿಸದೇ ಇರುತ್ತಾರೆ ಅವರಿಗೆ ಹೊಸ ಗಡುವು ನೀಡುವ ಜೊತೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಈ ನಿಯಮ ಅಕ್ಟೋಬರ್ 1ರಿಂದಲೇ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ.
ಗ್ರಾಹಕರಿಗೆ ವಿದ್ಯುತ್ ಬಿಲ್ ನೀಡಲಾಗುತ್ತದೆ. ಅದರಲ್ಲಿ ಯಾರ ವಿದ್ಯುತ್ ಬಿಲ್ ಬಾಕಿ ಇರುತ್ತದೋ ಅವರು, ಮುಂದಿನ ಒಂದು ತಿಂಗಳು (30 ದಿನಗಳಲ್ಲಿ) ಬಾಕಿ ಪಾವತಿಸದಿದ್ದರೆ ನಿಯಮಗಳ ಪ್ರಕಾರ ಅವರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಹೆಸ್ಕಾಂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ತಿಂಗಳ ಎರಡು ವಾರದಲ್ಲಿ ವಿದ್ಯುತ್ ಕಡಿತದ ಎಚ್ಚರಿಕೆ
ಅಕ್ಟೋಬರ್ 1ರಿಂದಲೇ ಗಡುವು ಹಾಗೂ ವಿದ್ಯುತ್ ಕಡಿತದ ಕಠಿಣ ನಿಯಮ ಜಾರಿಗೆ ಬರಲಿದೆ. ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್ಮೆಂಟ್ಗಳು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸಬೇಕು. ಇಲ್ಲವಾದಲ್ಲಿ ಆ ಗ್ರಾಹಕರ ಮೀಟರ್ ರೀಡಿಂಗ್ ಮಾಡಿಕೊಳ್ಳಲಾಗುತ್ತದೆ. ಬಾಕಿ ಎಷ್ಟು ಉಳಿದಿದೆ ಎಂದು ಲೆಕ್ಕ ಹಾಕಲಾಗುತ್ತದೆ. ನಂತರ ನಿಯಮಗಳ ಪ್ರಕಾರ, ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್ ಲೈನ್ ಸಂಪರ್ಕ ತಪ್ಪಿಸುವ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಲ್ಲಿಯವರೆಗೂ ಹೋಗದೇ ಗ್ರಾಹಕರು ವಿದ್ಯುತ್ ಬಿಲ್ ಕೈ ಸೇರುತ್ತಿದ್ದಂತೆ ಬಾಕಿ ಇರುವ ಶುಲ್ಕ ಪಾವತಿಸುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದೆ. ಪ್ರತಿ ತಿಂಗಳ ಮೊದಲ ಎರಡು ವಾರದಲ್ಲಿ ನಿಮಗೆ ಬಿಲ್ ಕೊಡಲಾಗುತ್ತದೆ. ಅದರಲ್ಲಿನ ಬಾಕಿ ನೋಡಿ ಕೂಡಲೇ ಪಾವತಿಸಬೇಕಿದೆ.
ಬಿಲ್ ನೀಡುವವರ ಜತೆ ಲೈನ್ಮನ್ ಭೇಟಿ
ಮುಂದಿನ ದಿನಗಳಲ್ಲಿ ಮಾಪಕ ಓದುಗರೊಂದಿಗೆ ಲೈನ್ಮೆನ್ಗಳು ತೆರಳುತ್ತಾರೆ. ಯಾರು ಬಾಕಿ ಉಳಿಸಿಕೊಂಡ ಬಿಲ್ ಸ್ಥಳದಲ್ಲಿ ಕಟ್ಟಲು ಹಿಂದೇಟು ಹಾಕುತ್ತಾರೆಯೋ ಅವರ ವಿದ್ಯುತ್ ಸಂಪರ್ಕ ಅಂದೇ ಕಡಿತ ಮಾಡಲು, ಅವರ ಮನೆಯ ವಿದ್ಯುತ್ ಸಂಪರ್ಕ ನಿಲ್ಲಿಸಲು ಸೂಚನೆ ಇದೆ ಎಂದರು.
ಗ್ರಾಹಕರ ಅನುಕೂಲಕ್ಕಾಗಿ ವಿದ್ಯುತ್ ಬಿಲ್ ಪಾವತಿಗೆ ಬಡ್ಡಿ ರಹಿತವಾಗಿ ಎರಡು ವಾರಗಳ (15 ದಿನ) ಕಾಲಾವಕಾಶ ನೀಡಲಾಗುತ್ತದೆ. ಆ ನಂತರವೂ ಬಡ್ಡಿ ಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ಇರುತ್ತದೆ. ಆದರೂ ಗ್ರಾಹಕರು ಬಿಲ್ ಪಾವತಿಸದಿದ್ದರೆ, ಸಂಪರ್ಕ ಕಡಿತದ ಕ್ರಮ ಅನಿವಾರ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ವಿದ್ಯುತ್ ಬಾಕಿ ಮೊತ್ತ ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಸಹ ಕಡಿತ ಮಾಡಲಾಗುವುದು.
ಹಿಂದಿನ ಬಿಲ್ ತೋರಿಸಿ
ಯಾವುದೇ ಗ್ರಾಹಕರು ಆನ್ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸಿದ್ದು, ಅದು ನಮೂದಾಗದೇ ಇದ್ದಾಗ ಹಿಂದಿನ ಬಿಲ್, ಇಲ್ಲವೇ ಆನ್ಲೈನ್ ಪಾವತಿಗೆ ದಾಖಲೆ ತೋರಿಸಬೇಕಾಗುತ್ತದೆ. ಏಕೆಂದರೆ ಕೆಲವೊಮ್ಮೆ ಹೆಸ್ಕಾಂ ತಂತ್ರಾಂಶದಲ್ಲಿ ( ಸಾಫ್ಟ್ವೇರ್) ತಾಂತ್ರಿಕ ದೋಷ ಉಂಟಾದಾಗ ತಡವಾಗಿ ಅಪ್ಡೇಟ್ ಆಗುವ ಸಾಧ್ಯತೆ ಇರುತ್ತದೆ. ಹೀಗಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ಬಿಲ್ ಕೇಳುವ ಹೆಸ್ಕಾಂ ಸಿಬ್ಬಂದಿಗೆ ಆನ್ಲೈನ್ನಲ್ಲಿ ಬಿಲ್ ಪಾವತಿಸಿದ ರಸೀದಿ ತೋರಿಸಿದರೆ ವಿದ್ಯುತ್ ಕಡಿತ ಮಾಡುವುದಿಲ್ಲ ಎಂದು ಹೆಸ್ಕಾಂ ತಿಳಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications