ಶ್ರೀರಾಮುಲು, ಸುರೇಶ ಬಾಬು ವಿರುದ್ಧ ಜನಾಂದೋಲನಕ್ಕೆ ಹಿರೇಮಠ್ ಆಗ್ರಹ
ಹುಬ್ಬಳ್ಳಿ, ಮೇ 14: ಸಂಸದ ಶ್ರೀರಾಮುಲು ಮತ್ತು ಶಾಸಕ ಸುರೇಶ್ ಬಾಬು ವಿರುದ್ಧ ಜನಾಂದೋಲನ ನಡೆಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಬಿಡುಗಡೆಗೆ ಸುಪ್ರೀಂ ಕೋರ್ಟ್ ನ ಅಂದಿನ ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ ಅವರಿಗೆ ಇವರಿಬ್ಬರು ಲಂಚದ ಆಮಿಷ ಒಡ್ಡಿದ್ದರು. ಹಾಗಾಗಿ ಇವರ ಉಮೇದುವಾರಿಕೆಯನ್ನು ರದ್ದುಪಡಿಸಬೇಕು ಎಂದು ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ಶ್ರೀರಾಮುಲು ಮತ್ತು ಸುರೇಶ್ ಬಾಬು ಮೇಲೆ ಗಂಭೀರ ಪ್ರಕರಣಗಳಿವೆ. "ಇವರು ಮುಖ್ಯ ನ್ಯಾಯಮೂರ್ತಿಯವರಿಗೆ ರೂಪಾಯಿ 160 ಕೋಟಿ ಮೊತ್ತದ ಆಮಿಷ ನೀಡಲು ಮುಂದಾಗಿದ್ದರು," ಎಂದು ಅವರು ಕಿಡಿಕಾರಿದ್ದಾರೆ.

ಇಂಥವರು ಸಾರ್ವಜನಿಕ ಜೀವನದಲ್ಲಿ ಇರಬಾರದು. ಇಂಥವರ ವಿರುದ್ಧ ಜನಾಂದೋಲನ ಬೆಳೆಯಬೇಕು ಎಂದು ಹಿರೇಮಠ್ ಆಗ್ರಹಿಸಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications