ಒಂದೇ ಕ್ಷೇತ್ರದಲ್ಲಿ 8 ಬಾರಿ ಗೆಲುವು: ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಗೌರವಕ್ಕೆ ಪಾತ್ರರಾದ ಹೊರಟ್ಟಿ
ಹುಬ್ಬಳ್ಳಿ, ಸೆಪ್ಟೆಂಬರ್ 2 : ಸುಮಾರು ನಾಲ್ಕು ದಶಕಗಳ ಕಾಲ ಯಶಸ್ವಿ ರಾಜಕಾರಣಿ. ಕೃಷಿಕನಾಗಿ, ಶಿಕ್ಷಕನಾಗಿ, ರಾಜಕಾರಣಿಯಾಗಿ ಹಲವು ಜವಾಬ್ದಾರಿಯನ್ನು ನಿಭಾಯಿಸುವ ಮೂಲಕ ಈಗ ದಾಖಲೆಯನ್ನು ಬರೆದಿರುವ ಬಸವರಾಜ ಹೊರಟ್ಟಿ ಲಂಡನ್ನಿನ ವರ್ಲ್ಡ ಬುಕ್ ಆಫ್ ರೆಕಾರ್ಡ್ ಗೌರವಕ್ಕೆ ಭಾಜನರಾಗಿದ್ದಾರೆ.
ಕಳೆದ ಐದು ದಶಕಗಳಿಂದ ಶೈಕ್ಷಣಿಕ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಹಲವಾರು ವಿಧಾಯಕ ಸೇವೆಗಳನ್ನು ಸಲ್ಲಿಸುವ ಮೂಲಕ ಬಸವರಾಜ ಹೊರಟ್ಟಿಯವರ ಹೆಸರು ಕನ್ನಡ ನಾಡಿಗೆ ಚಿರ ಪರಿಚಿತವಾಗಿದೆ. ಅವರು ವಿಧಾನ ಪರಿಷತ್ತಿಗೆ ಸತತ 8 ಬಾರಿ ಆಯ್ಕೆಯಾಗುವ ಮೂಲಕ ಐತಿಹಾಸಿಕ ದಾಖಲೆ ಮಾಡಿದ ಮೇಲ್ಮನೆ ಹಿರಿಯ ಸದಸ್ಯರಾದ ಬಸವರಾಜ ಹೊರಟ್ಟಿಯವರಿಗೆ ಲಂಡನ್ನಿನ ವರ್ಲ್ಡಬುಕ್ ಆಫ್ ರಿಕಾರ್ಡ ಸಂಸ್ಥೆಯವರು ದಾಖಲೆಯ ದೃಢೀಕರಣ ಪ್ರಮಾಣಪತ್ರ ನೀಡಿದ್ದಾರೆ.
1980 ರಿಂದ ವಿಧಾನ ಪರಿಷತ್ತಿಗೆ ಒಂದೇ ಕ್ಷೇತ್ರದಿಂದ ಸತತ 8 ಬಾರಿ ಆಯ್ಕೆಯಾಗುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಸಾಮಾನ್ಯ ಶಿಕ್ಷಕರಾದ ಹೊರಟ್ಟಿಯವರು ಶಿಕ್ಷಣ ಸಚಿವರಾಗಿ, ವಿವಿಧ ಖಾತೆಗಳ ಸಚಿವರಾಗಿ ಎರಡು ಬಾರಿ ಸಭಾಪತಿಯಾಗಿ ಸೇವೆ ಸಲ್ಲಿಸಿದ್ದು ಶಿಕ್ಷಣ ಕ್ಷೇತ್ರಕ್ಕೆ ಶಿಕ್ಷಣ ವಲಯಕ್ಕೆ ಅಭಿಮಾನದ ಸಂಗತಿ, ಸಾರ್ವಜನಿಕವಾಗಿ ಅವರು ಮಾಡಿದ ಅಪ್ರತಿಮ ಸೇವೆ ಕಳೆದ 5 ದಶಕಗಳಿಂದ ಶಿಕ್ಷಕರ ಹಿತಕ್ಕಾಗಿ ಹೋರಾಟ ಮಾಡುತ್ತಾ ಬರುವ ಮೂಲಕ ಹೋರಾಟದ ಹೊರಟ್ಟಿ ಎಂದೇ ನಾಡಿಗೆ ಚಿರಪರಿಚಿತರಾದವರು. ಶೈಕ್ಷಣಿಕ ಸೇವೆಯಲ್ಲಿ ಅವರು ಮಾಡಿದ ಹೆಗ್ಗುರುತುಗಳು ನಿತ್ಯ ಶಿಕ್ಷಕ ವಲಯ ಮೆಲಕು ಹಾಕುತ್ತಿದೆ. ಶಿಕ್ಷಕರ ಹೊಟ್ಟೆ ಮತ್ತು ರಟ್ಟೆಗಟ್ಟಿಗೊಳಿಸಿದ ಹೊರಟ್ಟಿಯವರೆಂದೇ ನಾಡಿಗೆ ಚಿರಪರಿಚಿತರಾಗಿದ್ದಾರೆ.

ಹೊರಟ್ಟಿಯವರು ಜಾಗತಿಕ ಶಾಂತಿಗಾಗಿ ಅವರು ಸಲ್ಲಿಸಿದ ಮಾನವೀಯ ಸೇವೆಗಾಗಿ ಅವರ ವ್ಯಕ್ತಿತ್ವದ ಇತರೆ ಮಜಲುಗಳನ್ನು, ಸಾಧನೆಗಳನ್ನು ಹಾಗೂ ಮೇಲ್ಮನೆಗೆ ಸತತ 8 ಬಾರಿ ಆಯ್ಕೆಯಾಗುವ ಮೂಲಕ ಶಿಕ್ಷಕರ ಮತ್ತು ಹೊರಟ್ಟಿಯವರ ಅವಿನಾಭಾವ ಸಂಬಂಧದ ಕುರಿತು ಅಧ್ಯಯನ ಮಾಡಿ ಒಬ್ಬ ಮೇರು ಸಾಧಕ ಎಂದು ಲಂಡನ್ನ ವರ್ಲ್ಡಬುಕ್ ಆಫ್ ರಿಕಾರ್ಡ್ ಸಂಸ್ಥೆಯವರು ಹೊರಟ್ಟಿಯವರ ದಾಖಲೆಗಳನ್ನು ದಾಖಲೀಕರಿಸಿ ಸಂಖ್ಯೆ:198/2022 ದಿನಾಂಕ:29-08-2022 ರಂದು ದೃಢೀಕರಣ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.

ಇತ್ತೀಚೆಗೆ ಹೊರಟ್ಟು ಜೆಡಿಎಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ನಂತರ ವಿಧಾನ ಪರಿಷತ್ ಚುನಾವಣೆಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 8ನೇ ಬಾರಿಗೆ ಗೆಲುವು ಸಾಧಿಸಿ ದಾಖಲೆ ನಿರ್ಮಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications