ಹುಬ್ಬಳ್ಳಿ ಮಗು ಪ್ರಕರಣ: ಬಾಲಕಿ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ, ಹೇಳಿದ್ದೇನು?
ಹುಬ್ಬಳ್ಳಿ, ಏಪ್ರಿಲ್ 15: ಹುಬ್ಬಳ್ಳಿಯ ಐದು ವರ್ಷದ ಬಾಲಕಿ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ.ನಾಗಲಕ್ಷ್ಮೀ ಚೌಧರಿ ಅವರು ಮೃತ ಬಾಲಕಿ ಮನೆಗೆ ಭೇಟಿ ನೀಡಿದ್ದಾರೆ. ಪಾಲಕರಿಗೆ ಸಾಂತ್ವನ ಹೇಳಿದ್ದಾರೆ. ಪ್ರಾಥಮಿಕ ವೈದ್ಯಕೀಯ ವರದಿ ಪ್ರಕಾರ, ಮೃತಪಟ್ಟ ಮಗುವಿನ ಖಾಸಗಿ ಅಂಗ ಹಾಗೂ ಇತರೆಡೆ ಗಾಯವಾಗಿರುವುದು ಗೊತ್ತಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
05 ವರ್ಷದ ಮಗುವಿನ ಅಮಾನುಷ ಕೃತ್ಯವೆಸಗಿ ಕೊಂದ ಬಿಹಾರಿ ಮೂಲದ ಪಾಪಿಯು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಾಲಕಿ ಮನೆಗೆ ಭೇಟಿ ನೀಡಿದ ಬಳಿಕೆ ನಾಗಲಕ್ಷ್ಮೀ ಚೌಧರಿ ಅವರು ವೈದ್ಯಕೀಯ ವರದಿ ಬಗ್ಗೆ ಮಾತನಾಡಿದರು. ಬಾಲಕಿ 'ಮರಣೋತ್ತರ ವೈದ್ಯಕೀಯ ವರದಿ ದೊರೆತ ನಂತರ ಪೊಲೀಸರು ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಿದ್ದಾರೆ. ವರದಿ ಪರೀಕ್ಷಿಸುತ್ತಾರೆ. ಮಗು ಖಾಯಿಲೆ ಬಿದ್ದು ಸತ್ತಿಲ್ಲ. ಅವಳ ಮೇಲೆ ದೌರ್ಜನ್ಯ ಎಸಗುವಾಗ ತುಂಬಾ ಒದ್ದಾಡಿ ಕೂಗಾಡಿದ್ದಾಳೆ. ಆಗ ಅವಳ ಕತ್ತು ಹಿಸುಕಿ ಸಾಯಿಸಿದ್ದಾನೆ' ಎಂದು ಅವರು ವಿವರಿಸಿದರು.

ತಾಯಿ ತಾನು ಕೆಲಸ ಮನೆಯಂಗಳದಲ್ಲಿಯೇ ಮಗು ಬಿಟ್ಟು ಒಳಗಡೆ ಕೆಲಸ ಮಾಡುತ್ತಿದ್ದರು. ಈ ವೇಳೆ ಆರೋಪಿ, ಕಾಂಪೌಂಡ್ ಬಳಿಕ ಮಗುಗೆ ಚಾಕಲೇಟ್ ಅಸೆ ತೋರಿಸಿ ಎತ್ತುಕೊಂಡು ಹೋಗಿದ್ದಾನೆ. ಸಣ್ಣ ಮಕ್ಕಳನ್ನು ಸಹ ಈ ನೀಚರು ಬಿಡುತ್ತಿಲ್ಲ.ನಾವು ನಮ್ಮ ಮಕ್ಕಳನ್ನು ಹುಷಾಗಿ ಕಣ್ಣಿನಲ್ಲಿ ಕಣ್ಣು ಇಟ್ಟು ನೋಡಬೇಕು ಎಂದರು.
ನಮ್ಮ ಮಕ್ಕಳನ್ನು ಜೋಪಾನವಾಗಿ ನೋಡಿಕೊಳ್ಳುವುದು ಪ್ರತಿ ಪೋಷಕರ ಜವಾಬ್ದಾರಿ ಆಗಿದೆ. ತೆರೆದ ಮನೆ ಕುರಿತು ಸಂಘ, ಸಂಸ್ಥೆಗಳು, ಸರ್ಕಾರ ಜಾಗೃತಿ ಮೂಡಿಸಿದರೆ ಸಾಕಾಗುವುದಿಲ್ಲ. ಈ ಸಂಬಂದ, ಸಾರ್ವಜನಿಕರು ಮತ್ತು ಪೊಲೀಸ್ ಸಹಕಾರ ಅಗತ್ಯ ಎಂದು ಸಲಹೆ ನೀಡಿದರು.
ಕಾರ್ಮಿಕರ ಸಮೀಕ್ಷೆಗೆ ಚಿಂತನೆ
ಬಾಲಕಿ ಮೇಲೆ ದೌರ್ಜನ್ಯ ಮಾಡಿ ಹತ್ಯೆಗೈದ ಬಿಹಾರಿ ವ್ಯಕ್ತಿ ನಗರಕ್ಕೆ ಗಾರೆ (ಗೌಂಡಿ)ಕೆಲಸಕ್ಕಾಗಿ ಬಂದಿದ್ದ. ಬೇರೆ ಬೇರೆ ರಾಜ್ಯಗಳಿಂದ ನಗರಕ್ಕೆ ಕೆಲಸ ಅರಸಿ ಬರುತ್ತಾರೆ. ಕಟ್ಟಡ ನಿರ್ಮಾಣ ಹಾಗೂ ಇನ್ನಿತರ ಕೆಲಸಗಳಿಗಾಗಿ ಆಂಧ್ರಪ್ರದೇಶ, ಮಧ್ಯ ಪ್ರದೇಶ, ಬಿಹಾರ ಸೇರಿದಂತೆ ಇನ್ನಿತರ ಉತ್ತರ ಭಾರತದ ಪ್ರದೇಶಗಳಿಂದ ಇಲ್ಲಿವೆ ವಲಸೆ ಬರುವ ಕಾರ್ಮಿಕರ ಸಂಖ್ಯೆ ಹೆಚ್ಚಿದೆ. ಇಲ್ಲಿನ ಹಲವು ಅಪರಾಧ ಕೃತ್ಯಗಳಲ್ಲಿ ಬೇರೆ ರಾಜ್ಯದವರು ತೊಡಗಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ಆದ್ದರಿಂದ ಜಿಲ್ಲಾಡಳಿತರುವ ಕಾರ್ಮಿಕರ ಸಮೀಕ್ಷೆ ಕೈಗೊಳ್ಳಬೇಕು. ಇವರು ಸ್ಥಳೀಯ ನಿವಾಸಗಳೇ ಅಥವಾ ಬೇರೆ ಕಡೆಯಿಂದ ಬಂದವರೇ ಸ್ಪಷ್ಟ ಮಾಹಿತಿ ಕಲೆ ಹಾಕಬೇಕಿದೆ ಎಂದು ಅವರು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications