ಸೆ.5ರಿಂದ ಹುಬ್ಬಳ್ಳಿ-ಗೋವಾ ಬಸ್ ಸೇವೆ; ವೇಳಾಪಟ್ಟಿ
ಹುಬ್ಬಳ್ಳಿ, ಸೆಪ್ಟೆಂಬರ್ 04: ಲಾಕ್ ಡೌನ್ ಘೋಷಣೆ ಬಳಿಕ ಸ್ಥಗಿತಗೊಂಡಿದ್ದ ಹುಬ್ಬಳ್ಳಿ-ಗೋವಾ ಬಸ್ ಸೇವೆಯನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಶನಿವಾರದಿಂದ ಆರಂಭಿಸಲಿದೆ. ಉಭಯ ರಾಜ್ಯಗಳ ಪ್ರತಿದಿನ ಹಲವಾರು ಜನರು ಸಂಚಾರ ನಡೆಸುತ್ತಾರೆ.
ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಿಂದ ಗೋವಾಕ್ಕೆ ಬಸ್ಗಳು ಸಂಚಾರ ನಡೆಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೊದಲ ಹಂತದಲ್ಲಿ ಪಣಜಿಗೆ 4 (3ವೇಗಧೂತ, 1 ರಾಜಹಂಸ), ವಾಸ್ಕೋ ಮತ್ತು ಮಡಗಾಂವ್ಗೆ ತಲಾ ಒಂದು ಬಸ್ ಸಂಚಾರ ನಡೆಸಲಿದೆ.
Recommended Video
ಲಾಕ್ ಡೌನ್ಗೆ ಮೊದಲು ಹುಬ್ಬಳ್ಳಿಯಿಂದ ಪಣಜಿಗೆ 1 ರಾಜಹಂಸ, 8 ವೇಗಧೂತ ಬಸ್ ಸಂಚಾರ ನಡೆಸುತ್ತಿತ್ತು. ವಾಸ್ಕೋ ಮತ್ತು ಮಡಗಾಂವ್ಗೆ ಒಂದು ಬಸ್ ಸೇರಿ ಒಟ್ಟು 11 ಬಸ್ಗಳು ಸಂಚಾರ ನಡೆಸುತ್ತಿದ್ದವು.

ವೇಳಾಪಟ್ಟಿ: ಪಣಜಿಗೆ ಸಂಚಾರ ನಡೆಸುವ ರಾಜಹಂಸ ಬಸ್ ಬೆಳಗ್ಗೆ 8 ಗಂಟೆಗೆ ಹೊರಡಲಿದೆ. ವೇಗಧೂತ ಬಸ್ಗಳು ಬೆಳಗ್ಗೆ 8.30, 10.30 ಮತ್ತು ರಾತ್ರಿ 11.45ಕ್ಕೆ ಹುಬ್ಬಳ್ಳಿಯಿಂದ ಹೊರಡಲಿವೆ.
ಪಣಜಿಯಿಂದ ಹುಬ್ಬಳ್ಳಿಗೆ ಬರುವ ರಾಜಹಂಸ ಬಸ್ ಮಧ್ಯಾಹ್ನ 2.30ಕ್ಕೆ ಹೊರಡಲಿದೆ. ವೇಗಧೂತ ಬಸ್ ಬೆಳಗ್ಗೆ 10.30, ಮಧ್ಯಾಹ್ನ 3 ಗಂಟೆ ಮತ್ತು ಸಂಜೆ 5.15ಕ್ಕೆ ಹೊರಡಲಿವೆ. ಧಾರವಾಡ, ಕಿತ್ತೂರು, ಖಾನಾಪುರ, ಚೋರ್ಲಾ ಮಾರ್ಗವಾಗಿ ಬಸ್ ಸಂಚಾರ ನಡೆಸಲಿದೆ.
ಅಂಕೋಲಾ ಮಾರ್ಗವಾಗಿ ಸಂಚಾರ : ಮಡಗಾಂವ್ಗೆ ಹೋಗುವ ಬಸ್ ಬೆಳಗ್ಗೆ 8.30ಕ್ಕೆ ಹುಬ್ಬಳ್ಳಿಯಿಂದ ಹೊರಡಲಿದೆ. ಕಲಘಟಗಿ, ಯಲ್ಲಾಪುರ, ಅಂಕೋಲಾ, ಕಾರವಾರ, ಸದಾಶಿವಗಢ, ಕಾಣಕೋಣ ಮಾರ್ಗವಾಗಿ ಸಂಚಾರ ನಡೆಸಲಿದ್ದು, 2.30ಕ್ಕೆ ಮಡಗಾಂವ್ ತಲುಪಲಿದೆ. ಮಧ್ಯಾಹ್ನ 3ಕ್ಕೆ ಮಡಗಾಂವ್ನಿಂದ ಹೊರಡುವ ಬಸ್ ರಾತ್ರಿ 9ಕ್ಕೆ ಹುಬ್ಬಳ್ಳಿ ತಲುಪಲಿದೆ.
ವಾಸ್ಕೋಗೆ ಹೋಗುವ ಬಸ್ ಹುಬ್ಬಳ್ಳಿಯಿಂದ ರಾತ್ರಿ 12.30ಕ್ಕೆ ಹೊರಡಲಿದೆ. ಧಾರವಾಡ, ಕಿತ್ತೂರು, ಖಾನಾಪುರ, ಚೋರ್ಲಾ ಮಾರ್ಗದಲ್ಲಿ ಸಂಚಾರ ನಡೆಸಲಿದ್ದು ಬೆಳಗ್ಗೆ 6ಕ್ಕೆ ವಾಸ್ಕೋ ತಲುಪಲಿದೆ. ವಾಸ್ಕೋದಿಂದ ಮಧ್ಯಾಹ್ನ 1.30ಕ್ಕೆ ಹೊರಡುವ ಬಸ್ ಹುಬ್ಬಳ್ಳಿಗೆ ಸಂಜೆ 7.30ಕ್ಕೆ ಆಗಮಿಸಲಿದೆ.
-
ಏಪ್ರಿಲ್ 9ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ












Click it and Unblock the Notifications