ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆ ಆರಂಭಕ್ಕೆ ಸಿದ್ದರಾಮಯ್ಯ ಮನವಿ

ಹುಬ್ಬಳ್ಳಿ, ಅ.17 : ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಒಪ್ಪಿಗೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರಿಗೆ ಮನವಿ ಮಾಡಿದರು. ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಪರಿಸರ ಇಲಾಖೆಯೂ ಒಪ್ಪಿಗೆ ನೀಡಿದೆ.

ನವದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿದರು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮನವಿ ಸಲ್ಲಿಸಿದರು.

Hubballi-Ankola railway line issue : Siddaramaiah meets Suresh Prabhu

ಸಚಿವರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, 'ದಶಕಗಳಿಂದ ಈ ರೈಲು ಮಾರ್ಗ ಯೋಜನೆ ನೆನೆಗುದಿಗೆ ಬಿದ್ದಿದೆ. ಈಗ ಯೋಜನೆಗೆ ಪರಿಸರ ಇಲಾಖೆಯ ಅನುಮತಿಯೂ ಸಿಕ್ಕಿದೆ. ಆದ್ದರಿಂದ, ರೈಲು ಮಾರ್ಗ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು' ಎಂದು ಮನವಿ ಮಾಡಲಾಗಿದೆ ಎಂದರು.

1998ರಲ್ಲಿಯೇ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆ ಸಿದ್ಧವಾಗಿತ್ತು. ಆದರೆ, ಅರಣ್ಯ ಭೂಮಿಯನ್ನು ರೈಲು ಮಾರ್ಗ ನಿರ್ಮಾಣಕ್ಕೆ ಬಳಸಬಾರದು ಎಂಬ ವಿವಾದದ ಹಿನ್ನಲೆಯಲ್ಲಿ ಯೋಜನೆ ಜಾರಿಯಾಗಿಲ್ಲ. ಈ ಯೋಜನೆ ಕುರಿತ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

168 ಕಿ.ಮೀ. ರೈಲು ಮಾರ್ಗ ಯೋಜನೆಗೆ ಒಪ್ಪಿಗೆ ನೀಡಲು ಸುಪ್ರೀಂಕೋರ್ಟ್ ನೇಮಿಸಿದ್ದ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ನಿರಾಕರಿಸಿತ್ತು. ಈ ಮಾರ್ಗ ನಿರ್ಮಾಣವಾದರೆ ಪಶ್ಚಿಮ ಘಟ್ಟದ ಅರಣ್ಯ ನಾಶವಾಗುತ್ತದೆ ಎಂದು ಸಿಇಸಿ ಹೇಳಿತ್ತು. ನಂತರ ಹಸಿರು ನ್ಯಾಯಮಂಡಳಿ ಯೋಜನೆಗೆ ಒಪ್ಪಿಗೆ ನೀಡಿತ್ತು.

ಹುಬ್ಬಳ್ಳಿ-ಕಲಘಟಗಿ-ಕಿರವತ್ತಿ-ಯಲ್ಲಾಪುರ-ಇಡಗುಂದಿ ಮೂಲಕ ಈ ರೈಲು ಮಾರ್ಗ ಅಂಕೋಲಾ ತಲುಪಲಿದೆ. ಅರಣ್ಯ ಭೂಮಿಯ ವಿಚಾರವಾಗಿದ್ದ ಕಾರಣ ಸುಪ್ರೀಂಕೋರ್ಟ್ ಎಲ್ಲಾ ಕಡತಗಳನ್ನು ಹಸಿರು ನ್ಯಾಯಮಂಡಳಿಗೆ ಸಲ್ಲಿಸಿತ್ತು. ಹಸಿರು ನ್ಯಾಯಮಂಡಳಿ ಮತ್ತು ಕೇಂದ್ರ ಪರಿಸರ ಇಲಾಖೆ ಯೋಜನೆಗೆ ಈಗಾಗಲೇ ಒಪ್ಪಿಗೆ ನೀಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+