ಭೈರಿದೇವರಕೊಪ್ಪ ದರ್ಗಾದ ಗೋರಿ ಸ್ಥಳಾಂತರ: ಮುಸ್ಲಿಂ ಮುಖಂಡರ ಆಕ್ರೋಶ
ಹುಬ್ಬಳ್ಳಿ, ಡಿಸೆಂಬರ್ 22 : ಹುಬ್ಬಳ್ಳಿ-ಧಾರವಾಡ ಬಿ.ಆರ್.ಟಿ.ಎಸ್ ಯೋಜನೆ ಹಿನ್ನೆಲೆಯಲ್ಲಿ ಬಹು ಚರ್ಚಿತ ನಗರದ ಭೈರಿದೇವರಕೊಪ್ಪದ ದರ್ಗಾದ ಮೂರು ಗೋರಿಗಳನ್ನು ಮುಸ್ಲಿಂ ವಿಧಿವಿಧಾನಗಳ ಮೂಲಕ ಪೊಲೀಸರ ಸರ್ಪಗಾವಲಿನಲ್ಲಿ ಸ್ಥಳಾಂತರ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದರ್ಗಾ ತೆರವು ಕಾರ್ಯಾಚರಣೆ ಎರಡನೇ ದಿನ ಮುಂದುವರೆದಿದ್ದು, ದರ್ಗಾ ಕಾಣದಂತೆ ಸುತ್ತಲೂ ತಗಡಿನ ಹೊದಿಕೆಯನ್ನು ನಿರ್ಮಿಸಲಾಗಿದೆ. ಗೋರಿ ಸ್ಥಳಾಂತರ ಕಾರ್ಯವನ್ನು ಮಿಷನ್ ಮೂಲಕ ಮಾಡಬೇಕಾಗಿತ್ತು. ಆದರೆ ಮಿಷನ್ ಇಲ್ಲದ ಕಾರಣ ಗುರುವಾರ ಗೋರಿಗಳನ್ನು ಯಥಾವತ್ತಾಗಿ ಗುಪ್ತವಾಗಿ ಸ್ಥಳಾಂತರ ನಡೆಸಿದ್ದಾರೆ ಎನ್ನಲಾಗಿದೆ.
ದರ್ಗಾ ತೆರವು ಕಾರ್ಯಾಚರಣೆಯಲ್ಲಿ ಧಾರ್ಮಿಕ ವಿಧಿವಿಧಾನ ಪೂರೈಸಿ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ಗೋರಿ ಮತ್ತು ಇಬ್ಬರು ಸೇವಕರ ಗೋರಿಗಳ ಸ್ಥಳಾಂತರ ಕಾರ್ಯ ನಡೆದಿದೆ. ಗೋರಿಗಳನ್ನು ದರ್ಗಾ ಮಂಡಳಿ ಸೂಚಿಸುವ ಸ್ಥಳಕ್ಕೆ ಸ್ಥಳಾಂತರ ಮಾಡಲು ಸಿಬ್ಬಂದಿ ತೀರ್ಮಾನಿಸಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಹುಬ್ಬಳ್ಳಿ- ಧಾರವಾಡ ರಸ್ತೆಯ ಭೈರಿದೇವರಕೊಪ್ಪದ ಮಾರ್ಗದ ಬದಲಾವಣೆ ಗುರುವಾರ ಸಹ ಮುಂದುವರೆದಿದೆ.

ಕಾರ್ಯಾಚರಣೆ ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಭುರಾಮ್ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು. ಸಿಬ್ಬಂದಿಗೆ ಕರ್ತವ್ಯದ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ. ಈ ವೇಳೆ ಆಗಮಿಸಿದ ವ್ಯಕ್ತಿಯೊಬ್ಬ ಕಮಿಷನರ್ ಮುಂದೆ ಅಸಮಾಧಾನ ಹೊರಹಾಕಿದ್ದು, ಸಿಪಿ ವಿನೋದ್ ಮುಕ್ತೇದಾರ್ ಆತನನ್ನು ಸಮಾಧಾನ ಪಡಿಸಿ ವಾಪಸ್ ಕಳುಹಿಸಿದ್ದಾರೆ.
300 ವರ್ಷಗಳ ಇತಿಹಾಸ ಹೊಂದಿರುವ ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾವನ್ನು ತೆರವು ಮಾಡಿರುವುದಕ್ಕೆ ಮುಸ್ಲಿಂ ಮುಖಂಡ ಅಸ್ಪಾಕ್ ಕುಮಟಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಭೈರಿದೇವರಕೊಪ್ಪದ ದರ್ಗಾಕ್ಕೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲ ಸಮುದಾಯದ ಜನರು ಈ ದೇವರಿಗೆ ನಡೆದುಕೊಳ್ಳುತ್ತಿದ್ದರು. ಕಷ್ಟ ಅಂತ ಬಂದಾಗ ಎಲ್ಲರೂ ಈ ದರ್ಗಾಕ್ಕೆ ಹೋಗಿ ಬೇಡಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲದೇ ಈ ದೇವರು ಕೂಡ ನಂಬಿದ ಭಕ್ತರ ಕೈ ಬಿಟ್ಟಿಲ್ಲ. ಈ ರೀತಿ ದರ್ಗಾ ತೆರವು ಮಾಡಿದ್ದು ಬಹಳ ಸಂಕಟದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications