ಭೈರಿದೇವರಕೊಪ್ಪ ದರ್ಗಾದ ಗೋರಿ ಸ್ಥಳಾಂತರ: ಮುಸ್ಲಿಂ ಮುಖಂಡರ ಆಕ್ರೋಶ
ಹುಬ್ಬಳ್ಳಿ, ಡಿಸೆಂಬರ್ 22 : ಹುಬ್ಬಳ್ಳಿ-ಧಾರವಾಡ ಬಿ.ಆರ್.ಟಿ.ಎಸ್ ಯೋಜನೆ ಹಿನ್ನೆಲೆಯಲ್ಲಿ ಬಹು ಚರ್ಚಿತ ನಗರದ ಭೈರಿದೇವರಕೊಪ್ಪದ ದರ್ಗಾದ ಮೂರು ಗೋರಿಗಳನ್ನು ಮುಸ್ಲಿಂ ವಿಧಿವಿಧಾನಗಳ ಮೂಲಕ ಪೊಲೀಸರ ಸರ್ಪಗಾವಲಿನಲ್ಲಿ ಸ್ಥಳಾಂತರ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದರ್ಗಾ ತೆರವು ಕಾರ್ಯಾಚರಣೆ ಎರಡನೇ ದಿನ ಮುಂದುವರೆದಿದ್ದು, ದರ್ಗಾ ಕಾಣದಂತೆ ಸುತ್ತಲೂ ತಗಡಿನ ಹೊದಿಕೆಯನ್ನು ನಿರ್ಮಿಸಲಾಗಿದೆ. ಗೋರಿ ಸ್ಥಳಾಂತರ ಕಾರ್ಯವನ್ನು ಮಿಷನ್ ಮೂಲಕ ಮಾಡಬೇಕಾಗಿತ್ತು. ಆದರೆ ಮಿಷನ್ ಇಲ್ಲದ ಕಾರಣ ಗುರುವಾರ ಗೋರಿಗಳನ್ನು ಯಥಾವತ್ತಾಗಿ ಗುಪ್ತವಾಗಿ ಸ್ಥಳಾಂತರ ನಡೆಸಿದ್ದಾರೆ ಎನ್ನಲಾಗಿದೆ.
ದರ್ಗಾ ತೆರವು ಕಾರ್ಯಾಚರಣೆಯಲ್ಲಿ ಧಾರ್ಮಿಕ ವಿಧಿವಿಧಾನ ಪೂರೈಸಿ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ಗೋರಿ ಮತ್ತು ಇಬ್ಬರು ಸೇವಕರ ಗೋರಿಗಳ ಸ್ಥಳಾಂತರ ಕಾರ್ಯ ನಡೆದಿದೆ. ಗೋರಿಗಳನ್ನು ದರ್ಗಾ ಮಂಡಳಿ ಸೂಚಿಸುವ ಸ್ಥಳಕ್ಕೆ ಸ್ಥಳಾಂತರ ಮಾಡಲು ಸಿಬ್ಬಂದಿ ತೀರ್ಮಾನಿಸಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಹುಬ್ಬಳ್ಳಿ- ಧಾರವಾಡ ರಸ್ತೆಯ ಭೈರಿದೇವರಕೊಪ್ಪದ ಮಾರ್ಗದ ಬದಲಾವಣೆ ಗುರುವಾರ ಸಹ ಮುಂದುವರೆದಿದೆ.

ಕಾರ್ಯಾಚರಣೆ ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಭುರಾಮ್ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು. ಸಿಬ್ಬಂದಿಗೆ ಕರ್ತವ್ಯದ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ. ಈ ವೇಳೆ ಆಗಮಿಸಿದ ವ್ಯಕ್ತಿಯೊಬ್ಬ ಕಮಿಷನರ್ ಮುಂದೆ ಅಸಮಾಧಾನ ಹೊರಹಾಕಿದ್ದು, ಸಿಪಿ ವಿನೋದ್ ಮುಕ್ತೇದಾರ್ ಆತನನ್ನು ಸಮಾಧಾನ ಪಡಿಸಿ ವಾಪಸ್ ಕಳುಹಿಸಿದ್ದಾರೆ.
300 ವರ್ಷಗಳ ಇತಿಹಾಸ ಹೊಂದಿರುವ ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾವನ್ನು ತೆರವು ಮಾಡಿರುವುದಕ್ಕೆ ಮುಸ್ಲಿಂ ಮುಖಂಡ ಅಸ್ಪಾಕ್ ಕುಮಟಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಭೈರಿದೇವರಕೊಪ್ಪದ ದರ್ಗಾಕ್ಕೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲ ಸಮುದಾಯದ ಜನರು ಈ ದೇವರಿಗೆ ನಡೆದುಕೊಳ್ಳುತ್ತಿದ್ದರು. ಕಷ್ಟ ಅಂತ ಬಂದಾಗ ಎಲ್ಲರೂ ಈ ದರ್ಗಾಕ್ಕೆ ಹೋಗಿ ಬೇಡಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲದೇ ಈ ದೇವರು ಕೂಡ ನಂಬಿದ ಭಕ್ತರ ಕೈ ಬಿಟ್ಟಿಲ್ಲ. ಈ ರೀತಿ ದರ್ಗಾ ತೆರವು ಮಾಡಿದ್ದು ಬಹಳ ಸಂಕಟದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications