ದಶಕಗಳ ಬೇಡಿಕೆಗೆ ಮನ್ನಣೆ; ಹುಬ್ಬಳ್ಳಿ-ಚೆನ್ನೈ ರೈಲು ಸೇವೆ ಆರಂಭ
ಹುಬ್ಬಳ್ಳಿ, ಸೆಪ್ಟೆಂಬರ್ 08 : ನೈಋತ್ಯ ರೈಲ್ವೆ ಹುಬ್ಬಳ್ಳಿ-ಚೆನ್ನೈ ನಡುವೆ ವಿಶೇಷ ರೈಲು ಸೇವೆ ಆರಂಭಕ್ಕೆ ಸಿದ್ಧತೆ ನಡೆಸಿದೆ. ಸೆ. 14 ಅಥವ 15ರಂದು ಹುಬ್ಬಳ್ಳಿಯಲ್ಲಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಾಗುತ್ತದೆ. ಈ ಮೂಲಕ ಹಲವು ವರ್ಷಗಳ ಬೇಡಿಕೆಗೆ ಒಪ್ಪಿಗೆ ಸಿಗಲಿದೆ.
Recommended Video
"ಹೊಸ ರೈಲು ಆರಂಭಿಸಲು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಹಲವು ವರ್ಷಗಳಿಂದ ಹುಬ್ಬಳ್ಳಿ-ಚೆನ್ನೈ ನಡುವೆ ರೈಲು ಸಂಚಾರ ಆರಂಭಿಸುವಂತೆ ಬೇಡಿಕೆ ಇತ್ತು" ಎಂದು ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹೊಸಪೇಟೆ-ಕೊಟ್ಟೂರು ನಡುವೆ ರೈಲು; ದಶಕಗಳ ಕನಸು ನನಸು
ಪ್ರಸ್ತುತ ಪ್ರತಿ ಗುರುವಾರ ವಾಸ್ಕೋ-ಚೆನ್ನೈ ಮತ್ತು ಶನಿವಾರ ಹುಬ್ಬಳ್ಳಿ-ಚೆನ್ನೈ ನಡುವೆ ರೈಲು ಸಂಚಾರ ನಡೆಸುತ್ತಿದೆ. ಈ ರೈಲು ದಾವಣಗೆರೆ, ಅರಸೀಕೆರೆ, ತುಮಕೂರು, ಯಶವಂತಪುರ, ಬಂಗಾರಪೇಟೆ ಮಾರ್ಗದ ಮೂಲಕ 835 ಕಿ. ಮೀ. ದೂರ ಕ್ರಮಿಸಿ ಚೆನ್ನೈ ತಲುಪಲಿದೆ.
ಹುಬ್ಬಳ್ಳಿ-ಚೆನ್ನೈ ನಡುವೆ ವಾರಕ್ಕೊಂದು ವಿಶೇಷ ರೈಲು ಸಂಚಾರ
ಈ ರೈಲು ಹುಬ್ಬಳ್ಳಿಯಿಂದ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಗುಂತಕಲ್ ಮಾರ್ಗದ ಮೂಲಕ ಚೆನ್ನೈ ತಲುಪಲಿದೆ. ಈ ಮಾರ್ಗದ ಮೂಲಕ ಚೆನ್ನೈ ತಲುಪಲು ಸುಮಾರು 710 ಕಿ. ಮೀ. ದೂರವಾಗಲಿದೆ. ಇದರಿಂದ 125 ಕಿ. ಮೀ. ಪ್ರಯಾಣದ ಅವಧಿ ಸಹ ಕಡಿಮೆಯಾಗಲಿದೆ.
ಬೆಂಗಳೂರು-ಮೈಸೂರು ನಡುವೆ 2 ಹೊಸ ಮೆಮು ರೈಲಿಗೆ ಗ್ರೀನ್ ಸಿಗ್ನಲ್
ಹುಬ್ಬಳ್ಳಿ-ಚೆನ್ನೈ ನಡುವೆ ವಾರದಲ್ಲಿ ಒಂದು ದಿನ ವಿಶೇಷ ರೈಲನ್ನು ಓಡಿಸಲು ನೈಋತ್ಯ ರೈಲ್ವೆ ಪ್ರಸ್ತಾವನೆ ಸಿದ್ಧಪಡಿಸಿಕೊಂಡಿತ್ತು. ಇಲಾಖೆಯ ಒಪ್ಪಿಗೆ ಮಾತ್ರ ಸಿಕ್ಕಿರಲಿಲ್ಲ. ಈಗ ಬೆಳಗಾವಿ ಸಂಸದ ಸುರೇಶ್ ಅಂಗಡಿ ರೈಲ್ವೆ ಖಾತೆ ರಾಜ್ಯ ಸಚಿವರಾದ ಬಳಿಕ ರೈಲು ಸಂಚಾರಕ್ಕೆ ಅನುಮೋದನೆ ಸಿಕ್ಕಿದೆ.