ಸೆನ್ಸೇಷನಲ್ ಶೂಟ್ಔಟ್ ಪ್ರಕರಣಕ್ಕೆ ಕೋರ್ಟ್ ಮರುಜೀವ
ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್)ನ ಸೂಪರಿಟೆಂಡೆಂಟ್ ಆಗಿದ್ದ ಡಾ.ಶಿವಾನಂದ ದೊಡ್ಡಮನಿ ಅವರನ್ನು ಹತ್ಯೆ ಮಾಡಲು ಹಿಂದಿನ ನಿರ್ದೇಶಕರಾಗಿದ್ದ ಡಾ.ಎಂ.ಜಿ.ಹಿರೇಮಠ, ವಿಶ್ವಪ್ರಕಾಶ ಉಳ್ಳಾಗಡ್ಡಿಮಠ ಹಾಗೂ ಧಾರವಾಡ ಜಿಲ್ಲಾ
ಹುಬ್ಬಳ್ಳಿ, ಜುಲೈ 22 : ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್)ನ ಸೂಪರಿಟೆಂಡೆಂಟ್ ಆಗಿದ್ದ ಡಾ.ಶಿವಾನಂದ ದೊಡ್ಡಮನಿ ಅವರ ಹತ್ಯೆ ಯತ್ನ ಪ್ರಕರಣಕ್ಕೆ 2ನೇ ಜೆಎಂಎಫ್ಸಿ ನ್ಯಾಯಾಲಯ ಮರುಜೀವ ನೀಡಿದೆ.
ಅವರನ್ನು ಹತ್ಯೆ ಮಾಡಲು ಹಿಂದಿನ ನಿರ್ದೇಶಕರಾಗಿದ್ದ ಡಾ.ಎಂ.ಜಿ. ಹಿರೇಮಠ, ವಿಶ್ವಪ್ರಕಾಶ ಉಳ್ಳಾಗಡ್ಡಿಮಠ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಅವರು ಪ್ರಯತ್ನ ಪಟ್ಟಿದ್ದರು ಎಂದು ಹೇಳಿರುವ ನ್ಯಾಯಾಲಯ ಮುಗಿದು ಹೋಗಿದ್ದ ಪ್ರಕರಣಕ್ಕೆ ಮರುಜೀವ ಕೊಟ್ಟಿದೆ.
ಆರೋಪಿಗಳ ಮೇಲಿನ ಆರೋಪವನ್ನು ಪುಷ್ಟೀಕರಿಸಲು ಸಾಕಷ್ಟು ಪುರಾವೆಗಳಿವೆ ಎಂದೂ ಹೇಳಿರುವ ನ್ಯಾಯಾಲಯ, ಇವರ ವಿರುದ್ಧ ಐಪಿಸಿ ಸೆಕ್ಷೆನ್ 307, 120(ಬಿ) ಹಾಗೂ 114ರ ಅಡಿ ಪ್ರಕರಣ ದಾಖಲಿಸುವಂತೆ ನಿರ್ದೇಶನ ನೀಡಿದ್ದು, ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಈ ಮೂಲಕ ಇಡೀ ಉತ್ತರ ಕರ್ನಾಟವನ್ನೇ ತಲ್ಲಣಗೊಳಿಸಿದ್ದ ಕಿಮ್ಸ್ ಶೂಟೌಟ್ ಪ್ರಕರಣ ಮತ್ತೆ ಸುದ್ದಿಗೆ ಬಂದಿದೆ. ಆದರೆ, ಮೂವರು ಆರೋಪಿಗಳ ಪೈಕಿ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠ ಮೂರು ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತಿದ್ದ ಬಂಗಾರೇಶ ಹಿರೇಮಠ ಹಾಗೂ ಶ್ಯಾಂ ಜಾಧವ ವಿರುದ್ಧ ಪೂರಕ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಕೈ ಬಿಡಲಾಗಿದೆ.
ಪ್ರಕರಣದ ಹಿನ್ನೆಲೆ
ಕಿಮ್ಸ್ ಸೂಪರಿಟೆಂಡೆಂಟ್ ಡಾ.ಶಿವಾನಂದ ದೊಡ್ಡಮನಿ ಅವರ ಮೇಲೆ 2007ರ ಡಿಸೆಂಬರ್ 10ರಂದು ರಾತ್ರಿ 10.45ರ ಸುಮಾರಿಗೆ ಕಿಮ್ಸ್ ಆವರಣದದ ದೊಡ್ಡಮನಿ ಅವರ ವಸತಿ ಗೃಹಕ್ಕೆ ಬಂದ ಅಪರಿಚತರಿಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಡಾ. ಶಿವಾನಂದ ದೊಡ್ಡಮನಿ ದೀರ್ಘಕಾಲ ಚಿಕಿತ್ಸೆಯ ನಂತರ ಚೇತರಿಸಿಕೊಂಡು, ಈಗ ಕಾರವಾರ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಆಗಿದ್ದಾರೆ.
ಈ ಪ್ರಕರಣ ಕುರಿತಂತೆ ಸಿಒಡಿ ತನಿಖೆಯಾಗಿ, ಅಂದಿನ ಕಿಮ್ಸ್ ನಿರ್ದೇಶಕ ಡಾ. ಎಂ.ಜಿ. ಹಿರೇಮಠ, ಬಂಗಾರೇಶ ಹಿರೇಮಠ, ವಿಶ್ವಪ್ರಕಾಶ ಉಳ್ಳಾಗಡ್ಡಿಮಠ, ವಿಜಯ ಕುಲಕರ್ಣಿ ಅವರನ್ನು ಪೊಲೀಸರು ಬಂಧಿಸಿದ್ದರು.
ಆದರೆ, ಸಿಒಡಿ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸರು ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಸಾಧ್ಯವಾಗದೇ ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಿತ್ತು. ಅಲ್ಲದೇ ದೋಷಾರೋಪ ಪಟ್ಟಿ ಸಲ್ಲಿಸುವ ವೇಳೆ ಎಲ್ಲರ ಮೇಲೆ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಡಾ. ಶಿವಾನಂದ ದೊಡ್ಡಮನಿ ಅವರ ಪತ್ನಿ ಚಂದನ ರಾಣಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.
ದೀರ್ಘ ವಿಚಾರಣೆ, ವಾದ ಹಾಗೂ ಪ್ರತಿವಾದದ ಬಳಿಕ ಮೂಲಕ ಶಿವಾನಂದ ದೊಡ್ಡಮನಿ ಹತ್ಯೆಗೆ ಷಡ್ಯಂತ್ರ ನಡೆಸಿದ್ದಾರೆ ಎಂಬುದಕ್ಕೆ ಪೂರಕ ಪ್ರಾಥಮಿಕ ಸಾಕ್ಷಿಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟು ಮೂವರ ವಿರುದ್ಧ ಪ್ರಕರಣ ದಾಖಲಿಸಲು ಆದೇಶಿಸಿದೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications