ಹುಬ್ಬಳ್ಳಿ - ಧಾರವಾಡ ಬೈಪಾಸ್ ರಸ್ತೆ ಕಾಮಗಾರಿ: ಜಿಲ್ಲಾಧಿಕಾರಿ ದಿವ್ಯ ಪ್ರಭು ಅಪ್ಡೇಟ್ಸ್, 580 ಕೋಟಿ ರೂ. 23 ಎಕರೆ ಭೂಸ್ವಾಧೀನ
ಹುಬ್ಬಳ್ಳಿ - ಧಾರವಾಡ ಮಧ್ಯದಲ್ಲಿ 6 ಲೇನ್ನ (ಷಟ್ಪಥ) ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆಯ 30.60 ಕಿ.ಮೀ. ಅಭಿವೃದ್ಧಿ ಪಡಿಸಿ, ರಸ್ತೆ ನಿರ್ಮಿಸಲು ಗುತ್ತಿಗೆದಾರರನಿಗೆ 2025 ರ ಸಪ್ಟೆಂಬರ್ವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಇಲ್ಲಿಯವರೆಗೆ ಶೇ. 73.89 ರಷ್ಟು ಪ್ರಗತಿಯಾಗಿದೆ. ಇನ್ನುಳಿದ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ 2026 ರವರೆಗೆ ಕಾಲಾವಕಾಶ ಕೇಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಗುತ್ತಿಗೆದಾರರು ಮನವಿ ಸಲ್ಲಿಸಿದ್ದು, ಪ್ರಸ್ತುತ ಕಾಮಗಾರಿ ತೀವ್ರಗತಿಯಲ್ಲಿ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾಹಿತಿ ನೀಡಿದ್ದಾರೆ.
ಹುಬ್ಬಳ್ಳಿ ಮತ್ತು ಧಾರವಾಡ ಬೈಪಾಸ್ ರಸ್ತೆ (ನರೇಂದ್ರ ಟೋಲ್ದಿಂದ) ಕಾಮಗಾರಿ ಪ್ರಗತಿ ಪರಿಶೀಲನೆ ಮಾಡಿ ಅವರು ಮಾತನಾಡಿದರು. ಹುಬ್ಬಳ್ಳಿ ಮತ್ತು ಧಾರವಾಡ ನಡುವಿನ 30.60 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿಯು ಪ್ರಗತಿಯಲ್ಲಿದೆ. 2023ರಲ್ಲಿ ಪ್ರಾರಂಭವಾಗಿದ್ದ ಕಾಮಗಾರಿಯು ಸೆಪ್ಟೆಂಬರ್ 2025 ರೊಳಗೆ ಪೂರ್ಣಗೊಳ್ಳಬೇಕಿತ್ತು. ಈ ಮಹತ್ವದ ಯೋಜನೆಯು ಶೇ. 75 ರಷ್ಟು ಪೂರ್ಣಗೊಂಡಿದೆ. ಉಳಿದ ಶೇ. 15 ರಷ್ಟು ಕಾಮಗಾರಿಯನ್ನು ಆದಷ್ಟು ಬೇಗ ನಿಗದಿತ ಸಮಯದೊಳಗೆ ಮುಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಉದ್ದೇಶಿತ ಕಾಮಗಾರಿಯು 580 ಕೋಟಿ ರೂಪಾಯಿ ಮೊತ್ತದ್ದಾಗಿದ್ದು, ಇದರಲ್ಲಿ ರಸ್ತೆಗಳ ಅಗಲೀಕರಣ, ಸೇತುವೆಗಳ ನಿರ್ಮಾಣ ಮತ್ತು ಮಳೆನೀರು ನಿರ್ವಹಣೆಯನ್ನು ಒಳಗೊಂಡಿದೆ. ಈ ಯೋಜನೆಯಡಿ, ಈಗಾಗಲೇ 62 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸಾರ್ವಜನಿಕರು, ರೈತರು ಮತ್ತು ಸ್ಥಳೀಯರ ಬೇಡಿಕೆಗಳನ್ನು ಪರಿಗಣಿಸಿ, ಕೆಲವು ಕಡೆಗಳಲ್ಲಿ ಸರ್ವಿಸ್ ರಸ್ತೆಗಳನ್ನು ಅಗಲೀಕರಣಗೊಳಿಸಲಾಗುವುದು ಎಂದಿದ್ದಾರೆ.
ಅಲ್ಲದೇ ಮಳೆನೀರು ಹೆಚ್ಚಾಗಿ ಹರಿಯುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಈ ಹೆಚ್ಚುವರಿ ಕಾಮಗಾರಿಗಳಿಗಾಗಿ ಅಂದಾಜು 23 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅವಶ್ಯಕತೆ ಇದೆ. ಸದ್ಯ ಈ ಭೂಸ್ವಾಧೀನ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಉದ್ದೇಶಿತ ಈ ಕಾಮಗಾರಿಯು 2026ರ ಮಾರ್ಚ್ ಅಂತ್ಯದ ಒಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಡಳಿತವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಮಾಸಿಕ ಪ್ರಗತಿ ವರದಿಗಳನ್ನು ಸಲ್ಲಿಸಲಾಗುತ್ತಿದ್ದು, ಕಾಮಗಾರಿಯ ವೇಗವನ್ನು ನಿರ್ಧರಿಸಲಾಗುತ್ತಿದೆ.
ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳಲು ಮತ್ತು ಹಾನಿಗೊಳಗಾದ ಭಾಗಗಳನ್ನು ಸರಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಗಿದೆ. ತಾಂತ್ರಿಕ ಅಥವಾ ನಿರ್ಮಾಣಕ್ಕೆ ಸಂಬಂಧಿತ ಸಮಸ್ಯೆಗಳು ಎದುರಾದಲ್ಲಿ, ಅವುಗಳನ್ನು ತಕ್ಷಣವೇ ಸರಿಪಡಿಸಲು ನಾವು ಸೂಚನೆ ನೀಡಿದ್ದೇವೆ. ರಸ್ತೆ ನಿರ್ಮಾಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನ ಅಧಿಕಾರಿ ದೇವರಾಜ ಆರ್., ಯೋಜನಾ ನಿರ್ದೇಶಕ ಭುವನೇಶಕುಮಾರ, ಧಾರವಾಡ ತಹಶೀಲ್ದಾರ ಡಾ. ಡಿ.ಎಚ್.ಹೂಗಾರ, ಗುತ್ತಿಗೆದಾರ ಕಂಪನಿಯ ಯೋಜನಾ ನಿರ್ದೇಶಕ ಮನೋಜ ತಿವಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಜಿಲ್ಲಾಡಳಿತದ ಅಧಿಕಾರಿಗಳು ಇದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications