ಹುಬ್ಬಳ್ಳಿ: 75ರ ವಯಸ್ಸಿನಲ್ಲಿ ಪತ್ನಿಯ ಅಕ್ಕನನ್ನೇ ಎರಡನೇ ಮದುವೆಯಾದ ಮಾಜಿ ಮೇಯರ್
ಹುಬ್ಬಳ್ಳಿ, ನವೆಂಬರ್17: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಡಿ.ಕೆ. ಚವ್ಹಾಣ ತಮ್ಮ 75ರ ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾಗಿದ್ದಾರೆ. ತಮ್ಮ ಪತ್ನಿ ಶಾರದಾ ಅವರ ಸಹೋದರಿ ಅನುಸೂಯಾ ಅವರನ್ನು ಡಿ.ಕೆ. ಚವ್ಹಾಣ ಕೈ ಹಿಡಿದಿದ್ದಾರೆ.
75ನೇ ವಯಸ್ಸಿನಲ್ಲಿ ಮದುವೆಯಾಗಿರುವ ಡಿ.ಕೆ. ಚವ್ಹಾಣ, ಮೃತಪಟ್ಟ ತಮ್ಮ ಮೊದಲ ಪತ್ನಿಯ ಸಹೋದರಿಯನ್ನೇ ವಿವಾಹವಾಗಿರುವುದು ವಿಶೇಷವಾಗಿದೆ. ಈ ಮೂಲಕ ಚವ್ಹಾಣ ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮಾಜಿ ಮೇಯರ್ ಡಿ.ಕೆ. ಚವ್ಹಾಣ ಮದುವೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಕುಟುಂಬಸ್ಥರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಅದ್ಧೂರಿಯಾಗಿ ನಡೆದಿದೆ. ಚವ್ಹಾಣ ವಿವಾಹ ಸಂಭ್ರಮದಲ್ಲಿ ಮೂವರು ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಸಂಬಂಧಿಕರು ಭಾಗಿಯಾಗಿದ್ದರು.

ಡಿ.ಕೆ. ಚವ್ಹಾಣ ಮೊದಲ ಪತ್ನಿ ಶಾರದಾ ಕಳೆದ ಮೂರು ತಿಂಗಳ ಹಿಂದೆ ಮೃತಪಟ್ಟರು. ಪತ್ನಿ ಅಗಲಿದ ಮೂರು ತಿಂಗಳ ನಂತರ ಪತ್ನಿಯ ಸಹೋದರಿ ಅನಸೂಯಾ ಅವರನ್ನು ಮದುವೆಯಾಗಿದ್ದಾರೆ. ಡಿ.ಕೆ. ಚವ್ಹಾಣ ಅವರಿಗೆ ಇದು ಎರಡನೇ ಮದುವೆಯಾದರೆ. ಅನಸೂಯಾ ಅವರಿಗೆ ಇದು ಮೊದಲ ಮದುವೆಯಾಗಿದೆ.
ಮೃತ ಮೊದಲ ಪತ್ನಿಯ ಮಕ್ಕಳು ಉದ್ಯೋಗದ ನಿಮಿತ್ತ ಬೇರೆ-ಬೇರೆ ಕಡೆಗಳಲ್ಲಿ ಇದ್ದಾರೆ. ಇದರಿಂದ ಮಾಜಿ ಮೇಯರ್ ಡಿ.ಕೆ. ಚವ್ಹಾಣ ಅವರು ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ಇಳಿ ವಯಸ್ಸಿನಲ್ಲಿ ಜೊತೆಯಾಗಿರಲು ಮಕ್ಕಳು ಹಾಗೂ ಸಂಬಂಧಿಕರು ಸೇರಿ ಮಾತುಕತೆ ನಡೆಸಿ ಎಲ್ಲರ ಒಪ್ಪಿಗೆ ಮೇರೆಗೆ ಚವ್ಹಾಣ ಅವರಿಗೆ ಮತ್ತೊಂದು ಮದುವೆ ಮಾಡಿಸಿದ್ದಾರೆ.
ಸಹಸ್ರಾರ್ಜುನ ಕ್ಷತ್ರಿಯ (ಎಸ್ ಎಸ್ ಕೆ) ಸಮಾಜಕ್ಕೆ ಸೇರಿರುವ ಡಿ.ಕೆ. ಚವ್ಹಾಣ ಅವರ ಮನೆಯೆ ಹಿಂದೆ ಮೊದಲ ಪತ್ನಿ ತವರು ಮನೆಯಿದ್ದು, ತನ್ನ ಮುದ್ದಿನ ತಂಗಿ ಅನಿರೀಕ್ಷಿತವಾಗಿ ಸಾವನ್ನಪ್ಪಿದ ಬಳಿಕ ಅಕ್ಕ ಅನಸೂಯಾ ಬಹಳ ನೊಂದಿದ್ದರು. ಅಲ್ಲದೇ ಡಿ.ಕೆ.ಚವ್ಹಾಣ ಅವರನ್ನು ಒಬ್ಬಂಟಿಯಾಗಿ ಬಿಟ್ಟರು ಎಂಬ ಮಾತುಗಳು ಸಹ ಕೇಳಿಬಂದವು. ಹೀಗಾಗಿ ಸಮಾಜದ ಹಿರಿಯರು ಇಳಿವಯಸ್ಸಿನಲ್ಲಿ ಇಬ್ಬರು ಒಬ್ಬರಿಗೊಬ್ಬರು ಆಸರೆಯಾಗಿರಲಿ ಎಂದು ಮೂರು ಗಂಟು ಹಾಕಿಸಿ ಅಕ್ಷತೆ ಕಾಳು ಹಾಕಿದ್ದಾರೆ.
ಇನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಆಗಿದ್ದ ಸಂದರ್ಭದಲ್ಲಿ ಚಪ್ಪಲಿ ಧರಿಸದೆ ಡಿ.ಕೆ. ಚವ್ಹಾಣ ಎಲ್ಲರ ಗಮನ ಸೆಳೆದಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications