ಹುಬ್ಬಳ್ಳಿ-ಧಾರವಾಡ ಅವಳಿ ನಗರ ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ-ಸಚಿವ ಡಾ.ಜಿ.ಪರಮೇಶ್ವರ್
ಹುಬ್ಬಳ್ಳಿ, ಆಗಸ್ಟ್ 18: ಯಾವುದೇ ಕಾರಣಕ್ಕೂ ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ. ಇದು ಇಲ್ಲದಂತೆ ಮಾಡಲು ಆರು ತಿಂಗಳ ಗಡುವು ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಶುಕ್ರವಾರ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಡ್ರಗ್ಸ್ ನಿಲ್ಲಿಸಲು ನಿರ್ಧರಿಸಿದ್ದೇವೆ. ಹುಬ್ಬಳ್ಳಿ ಧಾರವಾಡ ಗೋವಾ, ಒಡಿಶಾಗಳಿಂದ ಡ್ರಗ್ಸ್ ಬರಬಹುದು. ಇಲ್ಲಿಯ ಜನರಿಗೆ ಅನಾಹುತ ಆಗಬಾರದು ಎಂದು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಆರು ತಿಂಗಳು ಅವಕಾಶ ನೀಡಿದ್ದೇನೆ. ಇದನ್ನು ತಡೆಗಟ್ಟದಿದ್ದರೆ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಒಂದೊಂದು ಜಿಲ್ಲೆಯಲ್ಲಿ ಒಂದೊಂದು ಸಮಸ್ಯೆಯಿದೆ. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸರ್ಕಾರದ ನೀತಿ ನಿಯಮಗಳ ಮಾರ್ಗದರ್ಶನ ನೀಡಿ ಜನರ ಸಮಸ್ಯೆ ಬಗೆಹರಿಸಬೇಕು. ಹುಬ್ಬಳ್ಳಿ ಧಾರವಾಡ ಮಹಾನಗರ ಅಪರಾಧಗಳ ಸಂಖ್ಯೆ ಭಿನ್ನವಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ ಶಾಂತಿಯಿದೆ ಇದೆ. ಎಲ್ಲ ಕಡೆ ಇರುವಂತೆ ಇಲ್ಲಿಯೂ ನಿಯಂತ್ರಣದಲ್ಲಿದೆ. ಜ್ವಲಂತ ಸಮಸ್ಯೆಗಳು ಮೊದಲಿನಂತೆ ಇಲ್ಲ ಎನ್ನುವುದು ಅಂಕಿಅಂಶಗಳಿಂದ ತಿಳಿದು ಬಂದಿದೆ ಎಂದರು.
ಪ್ರತಿ ತಿಂಗಳು ಎಸ್ಸಿ, ಎಸ್ಟಿ ಸಭೆ ಮಾಡಿ ಅವರ ಅಹವಾಲುಗಳಿಗೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಠಾಣೆ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ಸಭೆ ನಡೆಸಬೇಕು. ಈ ಬಗ್ಗೆ ಕಮಿಷನರೇಟ್ನಲ್ಲಿಯೂ ದಾಖಲೆ ಇಡಲು ಹೇಳಿದ್ದೇನೆ. ಪ್ರತಿ ತಿಂಗಳು ಪಿಎಸ್ಐ ಮೇಲಿರುವವರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ಪೊಲೀಸ್ ಡೇ ಆಚರಿಸಬೇಕು. ಒಂದು ದಿನ ಟ್ರಾಫಿಕ್, ಕಾನೂನು ಮತ್ತು ಪೊಲೀಸ್ ಸಹಾಯದ ಬಗ್ಗೆ ತಿಳಿಸಬೇಕು. ಇದರ ದಾಖಲೆಗಳನ್ನು ಸಹ ಇಡಬೇಕು. ಮಕ್ಕಳಿಗೆ ಪೊಲೀಸರ ಬಗ್ಗೆ ಕೆಟ್ಟ ಅಭಿಪ್ರಾಯ ಬರಬಾರದು. ಜನಸ್ನೇಹಿ ಪೊಲೀಸ್ ಆಗಲು ಸೂಚಿಸಿದ್ದೇನೆ ಎಂದು ಹೇಳಿದರು.

ಹುಬ್ಬಳ್ಳಿಯ ಈದ್ಗಾ ಮೈದಾನ ಜಾಗ ಪಾಲಿಕೆಗೆ ಸಂಬಂಧಿಸಿದ್ದು. ಅಲ್ಲಿ ಈ ಬಾರಯೂ ಗಣೇಶೋತ್ಸವ ಆಚರಣೆ ಮಾಡಬೇಕೋ ಇಲ್ಲವೋ ಎಂಬುದನ್ನು ಪಾಲಿಕೆಯೇ ನಿರ್ಧಾರ ಮಾಡಬೇಕು. ಅವರು ಸನ್ನಿವೇಶ, ಪರ, ವಿರೋಧ ಪರಿಶೀಲನೆ ಮಾಡಿ ನಿರ್ಧಾರ ಮಾಡಬೇಕು. ಸರ್ಕಾರವು ಸೂಕ್ತ ನಿರ್ಧಾರ ಮಾಡುತ್ತದೆ ಎಂದರು.
ಜಾತಿನಿಂದನೆ ಮಿಸ್ ಯೂಸ್ ಆಗಲು ಹಾಗೂ ಕಾನೂನು ಬಿಟ್ಟು ಕ್ರಮಕೈಗೊಳ್ಳಲು ಬಿಡುವುದಿಲ್ಲ. ಅಮಾಯಕರು, ರೈತರು, ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿದ್ದರೆ ಅದನ್ನು ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications