ಹುಬ್ಬಳ್ಳಿ ಬಿಎಸ್ಸೆನ್ನೆಲ್ ಗ್ರಾಹಕರಿಗೆ ಶುಭ ಸುದ್ದಿ
ಹುಬ್ಬಳ್ಳಿ, ಆಗಸ್ಟ್, 24: ಹುಬ್ಬಳ್ಳಿಯ ಹಲವು ಕಡೆ ಬಿಎಸ್ ಎನ್ ಎಲ್ ನೆಟ್ ವರ್ಕ್ ಸಮಸ್ಯೆ ಬಗ್ಗೆ ದೂರುಗಳಿದ್ದು ಹೆಚ್ಚಿನ ಸಾಮರ್ಥ್ಯದ ಟವರ್ ಗಳನ್ನು ಅಳವಡಿಸಲಾಗುವುದು ಎಂದು ಭಾರತ ದೂರ ಸಂಚಾರ ನಿಗಮದ ಜನರಲ್ ಮ್ಯಾನೇಜರ್ ವಿವೇಕ ಜೈಸ್ವಾಲ ತಿಳಿಸಿದ್ದಾರೆ.
ಅವರು ಬುಧವಾರ ಬಿಎಸ್ಸೆನ್ನೆಲ್ ಸಭಾಂಗಣದಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಸಂಸದರ ಅನುದಾನದಲ್ಲಿ ಆರಂಭಿಸಲಾದ ಫ್ರೀ ವೈಪೈ ಸೇವೆಯನ್ನು ಸದ್ಯ ಹೊಸ ಬಸ್ ನಿಲ್ದಾಣದಲ್ಲಿ ಪ್ರತಿನಿತ್ಯ 1300 ಜನರು, ಶಿರೂರ ಪಾರ್ಕ್ ನಲ್ಲಿ 300 ಜನರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.[ಬಿಎಸ್ ಎನ್ ಎಲ್ ಲ್ಯಾಂಡ್ ಲೈನ್ ನಿಂದ ಭಾನುವಾರ ಫ್ರೀ ಕಾಲ್ಸ್]

ನಗರದ ಹಲವಾರು ಭಾಗಗಳಲ್ಲಿ ಫೈಬರ್ ಕೇಬಲ್ ಗಳನ್ನು ಅಳವಡಿಸಲಾಗುತ್ತಿದ್ದು, ಬಿಎಸ್ಸೆನ್ನೆಲ್ ಕೆಲವೊಂದು ಕಡೆಗಳಲ್ಲಿ ಕೇಬಲ್ ಹಾಕಿಲ್ಲ. ಹೀಗಾಗಿ ಹೊಸದಾಗಿ ಕೇಬಲ್ ಹಾಕಲು ಚಿಂತನೆ ನಡೆಸಲಾಗಿದೆ ಎಂದರು.
ಬಿಎಸ್ ಎನ್ ಎಲ್ ಲ್ಯಾಂಡ್ ಫೋನನಿಂದ ಭಾರತದ ಯಾವುದೇ ಮೊಬೈಲ್ ಮತ್ತು ಲ್ಯಾಂಡಲೈನ್ ಪ್ರತಿ ರವಿವಾರ ಉಚಿತ ಕರೆ ಮಾಡುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಿಂದೆ ಇಂತಹ ಯಾವುದೇ ಕೊಡುಗೆಗಳನ್ನು ನೀಡಿರಲಿಲ್ಲ ಈಗ ಪ್ರತಿನಿತ್ಯ ಕೇವಲ ರಾತ್ರಿ 9 ರಿಂದ ಬೆಳಗಿನ 7 ರವರೆಗೆ ಉಚಿತ ಕರೆ ಸೌಲಭ್ಯವಿದೆ ಎಂದರು.[ಬಿಎಸ್ಎನ್ಎಲ್ ನಿಂದ 40 ಸಾವಿರ ವೈಫೈ ಹಾಟ್ ಸ್ಪಾಟ್]
ಇನ್ಮುಂದೆ ಕೇವಲ 49 ರೂ. ತಿಂಗಳ ಬಾಡಿಗೆಯಲ್ಲಿ ಲ್ಯಾಂಡ್ ಲೈನ್ ಫೋನ್ ನೀಡಲಾಗುತ್ತದೆ. ಇದಕ್ಕೆ ಯಾವುದೇ ಹೆಚ್ಚುವರಿ ಚಾರ್ಜ್ ಇಲ್ಲ. 6 ತಿಂಗಳ ನಂತರ ತಮಗೆ ಬೇಕಾದ ಪ್ಲಾನ್ ಗೆ ಗ್ರಾಹಕರು ಬದಲಾಯಿಸಿಕೊಳ್ಳಬಹುದು. ಇದರೊಂದಿಗೆ ಒಂದು ಸಿಮ್ ಉಚಿತವಾಗಿ ನೀಡಲಾಗುತ್ತದೆ ಎಂದರು.
ಸ್ವಾತಂತ್ರ್ಯ ದಿನ ಮತ್ತು ರಕ್ಷಾ ಬಂಧನ ಹಬ್ಬದಂಗವಾಗಿ 70 ರೂ. ಗೆ ಪುಲ್ ಟಾಕಟೈಮ್ ನೀಡಲಾಗುತ್ತಿದೆ ಎಂದು ಹಲವು ಯೋಜನೆಗಳ ಮಾಹಿತಿ ನೀಡಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications