ಹುಬ್ಬಳ್ಳಿ ಬಿಎಸ್ಸೆನ್ನೆಲ್ ಗ್ರಾಹಕರಿಗೆ ಶುಭ ಸುದ್ದಿ
ಹುಬ್ಬಳ್ಳಿ, ಆಗಸ್ಟ್, 24: ಹುಬ್ಬಳ್ಳಿಯ ಹಲವು ಕಡೆ ಬಿಎಸ್ ಎನ್ ಎಲ್ ನೆಟ್ ವರ್ಕ್ ಸಮಸ್ಯೆ ಬಗ್ಗೆ ದೂರುಗಳಿದ್ದು ಹೆಚ್ಚಿನ ಸಾಮರ್ಥ್ಯದ ಟವರ್ ಗಳನ್ನು ಅಳವಡಿಸಲಾಗುವುದು ಎಂದು ಭಾರತ ದೂರ ಸಂಚಾರ ನಿಗಮದ ಜನರಲ್ ಮ್ಯಾನೇಜರ್ ವಿವೇಕ ಜೈಸ್ವಾಲ ತಿಳಿಸಿದ್ದಾರೆ.
ಅವರು ಬುಧವಾರ ಬಿಎಸ್ಸೆನ್ನೆಲ್ ಸಭಾಂಗಣದಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಸಂಸದರ ಅನುದಾನದಲ್ಲಿ ಆರಂಭಿಸಲಾದ ಫ್ರೀ ವೈಪೈ ಸೇವೆಯನ್ನು ಸದ್ಯ ಹೊಸ ಬಸ್ ನಿಲ್ದಾಣದಲ್ಲಿ ಪ್ರತಿನಿತ್ಯ 1300 ಜನರು, ಶಿರೂರ ಪಾರ್ಕ್ ನಲ್ಲಿ 300 ಜನರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.[ಬಿಎಸ್ ಎನ್ ಎಲ್ ಲ್ಯಾಂಡ್ ಲೈನ್ ನಿಂದ ಭಾನುವಾರ ಫ್ರೀ ಕಾಲ್ಸ್]

ನಗರದ ಹಲವಾರು ಭಾಗಗಳಲ್ಲಿ ಫೈಬರ್ ಕೇಬಲ್ ಗಳನ್ನು ಅಳವಡಿಸಲಾಗುತ್ತಿದ್ದು, ಬಿಎಸ್ಸೆನ್ನೆಲ್ ಕೆಲವೊಂದು ಕಡೆಗಳಲ್ಲಿ ಕೇಬಲ್ ಹಾಕಿಲ್ಲ. ಹೀಗಾಗಿ ಹೊಸದಾಗಿ ಕೇಬಲ್ ಹಾಕಲು ಚಿಂತನೆ ನಡೆಸಲಾಗಿದೆ ಎಂದರು.
ಬಿಎಸ್ ಎನ್ ಎಲ್ ಲ್ಯಾಂಡ್ ಫೋನನಿಂದ ಭಾರತದ ಯಾವುದೇ ಮೊಬೈಲ್ ಮತ್ತು ಲ್ಯಾಂಡಲೈನ್ ಪ್ರತಿ ರವಿವಾರ ಉಚಿತ ಕರೆ ಮಾಡುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಿಂದೆ ಇಂತಹ ಯಾವುದೇ ಕೊಡುಗೆಗಳನ್ನು ನೀಡಿರಲಿಲ್ಲ ಈಗ ಪ್ರತಿನಿತ್ಯ ಕೇವಲ ರಾತ್ರಿ 9 ರಿಂದ ಬೆಳಗಿನ 7 ರವರೆಗೆ ಉಚಿತ ಕರೆ ಸೌಲಭ್ಯವಿದೆ ಎಂದರು.[ಬಿಎಸ್ಎನ್ಎಲ್ ನಿಂದ 40 ಸಾವಿರ ವೈಫೈ ಹಾಟ್ ಸ್ಪಾಟ್]
ಇನ್ಮುಂದೆ ಕೇವಲ 49 ರೂ. ತಿಂಗಳ ಬಾಡಿಗೆಯಲ್ಲಿ ಲ್ಯಾಂಡ್ ಲೈನ್ ಫೋನ್ ನೀಡಲಾಗುತ್ತದೆ. ಇದಕ್ಕೆ ಯಾವುದೇ ಹೆಚ್ಚುವರಿ ಚಾರ್ಜ್ ಇಲ್ಲ. 6 ತಿಂಗಳ ನಂತರ ತಮಗೆ ಬೇಕಾದ ಪ್ಲಾನ್ ಗೆ ಗ್ರಾಹಕರು ಬದಲಾಯಿಸಿಕೊಳ್ಳಬಹುದು. ಇದರೊಂದಿಗೆ ಒಂದು ಸಿಮ್ ಉಚಿತವಾಗಿ ನೀಡಲಾಗುತ್ತದೆ ಎಂದರು.
ಸ್ವಾತಂತ್ರ್ಯ ದಿನ ಮತ್ತು ರಕ್ಷಾ ಬಂಧನ ಹಬ್ಬದಂಗವಾಗಿ 70 ರೂ. ಗೆ ಪುಲ್ ಟಾಕಟೈಮ್ ನೀಡಲಾಗುತ್ತಿದೆ ಎಂದು ಹಲವು ಯೋಜನೆಗಳ ಮಾಹಿತಿ ನೀಡಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications