ಮಲೇಷ್ಯಾ ಸ್ಟುಡೆಂಟ್ಸ್ ಒಲಿಂಪಿಕ್ಸ್ ಗೆ ಹುಬ್ಬಳ್ಳಿಯ ಸಹನಾ ಕುಲಕರ್ಣಿ
ಹುಬ್ಬಳ್ಳಿ, ಜೂನ್ 29 : ಮಲೇಷ್ಯಾದಲ್ಲಿ ಇದೇ ಜೂನ್ 29ರಿಂದ ಜುಲೈ 1ರ ವರಗೆ ನಡೆಯಲಿರುವ 3ನೇ ಅಂತಾರಾಷ್ಟ್ರೀಯ ಸ್ಟುಡೆಂಟ್ಸ್ ಒಲಿಂಪಿಕ್ ಗೇಮ್ಸ್ ಗೆ ಹುಬ್ಬಳ್ಳಿಯ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಹನಾ ಕುಲಕರ್ಣಿ ಆಯ್ಕೆಯಾಗಿದ್ದಾರೆ.
ಹುಬ್ಬಳ್ಳಿ ಕೆಎಲ್ ಇ ಸಂಸ್ಥೆಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಇ ಅಂಡ್ ಸಿ ವಿಭಾಗದ 7ನೇ ಸೆಮಿಸ್ಟರ್ ವಿದ್ಯಾರ್ಥಿನಿ ಸಹನಾ ಕುಲಕರ್ಣಿ ಸ್ಟುಡೆಂಟ್ಸ್ ಒಲಿಂಪಿಕ್ ಗೇಮ್ಸ್ ನ ಮಹಿಳಾ ವಿಭಾಗದ ಟೇಬಲ್ ಟೆನಿಸ್ ನಲ್ಲಿ ಸ್ಪರ್ಧೆ ಮಾಡಲಿದ್ದು, ಮಂಗಳವಾರ ಮಲೇಷ್ಯಾಗೆ ಪ್ರಯಾಣ ಬೆಳೆಸಿದರು.

ಸ್ಟುಡೆಂಟ್ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳುವ ರಾಜ್ಯದ ಏಕೈಕ ವಿದ್ಯಾರ್ಥಿನಿ ಸಹನಾ ಆಗಿದ್ದು, ಉಳಿದಂತೆ ಟೇಬಲ್ ಟೆನಿಸ್ ಪಂದ್ಯಾವಳಿಯ 22 ವರ್ಷದೊಳಗಿನ ಪುರುಷರ ವಿಭಾಗದಲ್ಲಿ ರಾಜ್ಯದ ಪ್ರತೀಕ್ ಘೋಡ್ಸೆ, ಅಭಿಷೇಕ್ ಕಠಾರೆ ಭಾಗವಹಿಸುತ್ತಿದ್ದಾರೆ.
ಮಧ್ಯಮ ಕುಟುಂಬದಿಂದ ಬಂದಿರುವ ಸಹನಾಳಿಗೆ ಬಾಲ್ಯದಿಂದಲೂ ಟೇಬಲ್ ಟೆನಿಸ್ ಅಚ್ಚುಮೆಚ್ಚಿನ ಕ್ರೀಡೆಯಾಗಿತ್ತು. ಇವರ ತಂದೆ ಶ್ರೀನಿವಾಸ ಕುಲಕರ್ಣಿ ಖಾಸಗಿ ಕಂಪನಿಯೊಂದರ ಉದ್ಯೋಗಿ ಆಗಿದ್ದು, ತಾಯಿ ಇಂಧು ಕುಲಕರ್ಣಿ ಜೆಎಸ್ ಎಸ್ ಕಾಲೇಜಿನಲ್ಲಿ ಶಿಕ್ಷಣ ವಿಭಾಗದ ಮುಖ್ಯಸ್ಥರಾಗಿದ್ದಾರೆ.
ಹುಬ್ಬಳ್ಳಿ ಟೇಬಲ್ ಟೆನಿಸ್ ಅಸೋಸಿಯೇಷನ್ ನಿಂದ ತರಬೇತಿ ಪಡೆದಿರುವ ಸಹನಾ, 2009ರಿಂದಲೇ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡತೊಡಗಿದ್ದಳು. ಈಗಾಗಲೇ 121 ಟ್ರೋಫಿ ಹಾಗೂ ಮೆಡಲ್ ಗೆದ್ದಿರುವ ಸಹನಾ 16 ಬಾರಿ ರಾಷ್ಟ್ರೀಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾಳೆ.

ರಾಜ್ಯಮಟ್ಟದ 51 ಪಂದ್ಯಾವಳಿಯ ಪ್ರಶಸ್ತಿಗಳನ್ನು ಸಹನಾ ಮುಡಿಗೇರಿಸಿಕೊಂಡಿದ್ದಾಳೆ. ಗುಜರಾತ್ ನ ವಡೋದರದಲ್ಲಿ 2016ರಲ್ಲಿ ನಡೆದ ರಾಷ್ಟ್ರಮಟ್ಟದ ಸ್ಟೂಡೆಂಟ್ಸ್ ಒಲಿಂಪಿಕ್ ನ ಟೇಬಲ್ ಟೆನಿಸ್ ನ ಸಿಂಗಲ್ ವಿಭಾಗದಲ್ಲಿ ಬಂಗಾರದ ಪದಕ ತನ್ನದಾಗಿಸಿಕೊಂಡಿದ್ದಳು.
ಬಿವಿಬಿ ಕಾಲೇಜ್ ನಿಂದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಮೂರು ಸಲ ಯೂನಿವರ್ಸಿಟಿ ಬ್ಲೂ ಆಗಿ ಹೊರಹೊಮ್ಮಿದ್ದಾಳೆ.
"ಚಿಕ್ಕಂದಿನಿಂದಲೇ ಸಹನಾಳಿಗೆ ತರಬೇತಿ ನೀಡಲಾಗುತ್ತಿತ್ತು. ಅವಳಿಗೆ ಪ್ರಶಸ್ತಿ ಮೇಲೆ ಪ್ರಶಸ್ತಿ ಬರುತ್ತಿದ್ದಂತೆ ಟೇಬಲ್ ಟೆನಿಸ್ ಕ್ರೀಡೆಯಲ್ಲಿ ಆಸಕ್ತಿ ಬೆಳೆಯಿತು.
ಈ ಬೆಳೆವಣಿಗೆ ಎಲ್ಲರಿಗೂ ಖುಷಿ ತರಿಸಿದೆ" ಎಂದು ಹುಬ್ಬಳ್ಳಿ ಟೇಬಲ್ ಟೆನಿಸ್ ಅಸೋಸಿಯೇಷನ್ ಕಾರ್ಯದರ್ಶಿ ಎಸ್.ಎಸ್.ಅರಳಿಕಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications