ಸ್ಟುಡೆಂಟ್ಸ್ ಒಲಿಂಪಿಕ್ಸ್: ಹುಬ್ಬಳ್ಳಿಯ ಸಹನಾ ಕುಲಕರ್ಣಿಗೆ ಚಿನ್ನ
ಹುಬ್ಬಳ್ಳಿ, ಜುಲೈ 03 : ಮಲೇಷ್ಯಾದಲ್ಲಿ ಜೂನ್ 29ರಿಂದ ಜುಲೈ 1ರ ವರಗೆ ನಡೆದ 3ನೇ ಅಂತಾರಾಷ್ಟ್ರೀಯ ಸ್ಟುಡೆಂಟ್ಸ್ ಒಲಿಂಪಿಕ್ಸ್ ಗೇಮ್ಸ್ ನ ಟೇಬಲ್ ಟೆನಿಸ್ ನಲ್ಲಿ ಹುಬ್ಬಳ್ಳಿಯ ಸಹನಾ ಕುಲಕರ್ಣಿ ಚಿನ್ನಕ್ಕೆ ಕೊರಳೊಡ್ಡಿದ್ದಾರೆ.
ಫೈನಲ್ ನಲ್ಲಿ ಮಲೇಷ್ಯಾ ಆಟಗಾರ್ತಿಯನ್ನು 11-8 ಪಾಯಿಂಟ್ಸ್ ಗಳ ಅಂತರದಿಂದ ಮಣಿಸಿ ಚಿನ್ನದ ಪದಕವನ್ನು ಮುಗಿಡಿಗೇರಿಸಿಕೊಂಡಿದ್ದಾರೆ. ಫೈನಲ್ ಪಂದ್ಯದ 5 ಸೆಟ್ಗಳಲ್ಲಿ 3-2 ಅಂತರದಿಂದ ಜಯ ಸಾಧಿಸಿರುವ ಸಹನಾ ಮೊದಲ ಭಾರತದ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.

ಹುಬ್ಬಳ್ಳಿಯ ಕೆಎಲ್ ಇ ಸಂಸ್ಥೆಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಇ ಅಂಡ್ ಸಿ ವಿಭಾಗದ 7ನೇ ಸೆಮಿಸ್ಟರ್ ವಿದ್ಯಾರ್ಥಿನಿಯಾಗಿರುವ ಸಹನಾ, ಟೂರ್ನಿಯುದ್ದಕ್ಕೂ ಉತ್ತಮ ಸಾಧನೆ ಮಾಡಿದ್ದ ಸಹನಾ ಅಂತಿಮ ಸುತ್ತಿನಲ್ಲಿ ಕಠಿಣ ಸ್ಪರ್ಧೆ ಎದುರಿಸಿದರೂ ಎದುರಾಳಿಯನ್ನು ಸಮರ್ಥವಾಗಿ ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅತ್ತ ಸಹನಾ ಪ್ರಶಸ್ತಿ ಮುಡಿಗೇರಿಸಿಕೊಳ್ಳುತ್ತಿದ್ದಂತೆ, ಇತ್ತ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಸಹನಾ ತಂದೆ ಶ್ರೀನಿವಾಸ್ ಕುಲಕರ್ಣಿ ಹಾಗೂ ತಾಯಿ ಇಂಧು ಕುಲಕರ್ಣಿ ಮಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಹನಾ ವ್ಯಾಸಂಗ ಮಾಡುತ್ತಿರುವ ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದು, ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೋ ಅಶೋಕ ಶೆಟ್ಟರ್ ಹಾಗೂ ಕೆಎಲ್ ಇ ಸಂಸ್ಥೆಯ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ ಅಭಿನಂದಿಸಿದ್ದಾರೆ.

ಧಾರವಾಡ ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೆಶನ್ ವಿಜಯ್ ಪೈ, ಹುಬ್ಬಳ್ಳಿ ಟೇಬಲ್ ಟೆನಿಸ್ ಅಸೋಸಿಯೇಷನ್ ಕಾರ್ಯದರ್ಶಿ ಎಸ್.ಎಸ್.ಅರಳಿಕಟ್ಟಿ. ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎಂ.ಕುರಗೋಡಿ ಅವರು ಸಹನಾಳಿಗೆ ತರಬೇತಿ ನೀಡಿದ್ದು, ಹುಬ್ಬಳ್ಳಿಯ ಕೀರ್ತಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಬ್ಬುವಂತೆ ಮಾಡಿದ್ದಾರೆ.
ಕಳೆದ 2016 ಇದೇ ಒಲಿಂಪಿಕ್ಸ್ ನಲ್ಲಿ ಬಂಗಾರ ಪದಕ ಗೆದ್ದಿರುವುದನ್ನು ಇಲ್ಲಿ ಸ್ಮರಿಸಬಹುದು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications