ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಪೋಸ್ಟ್ ಕೇಸ್: ಮತ್ತೇ ಇಬ್ಬರ ಬಂಧನ, ಇವರ ಕೋಡ್ ಏನು ಗೊತ್ತಾ?
ಹುಬ್ಬಳ್ಳಿ, ಆಗಸ್ಟ್, 12: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಫೋಟೊಗಳನ್ನು ಡೌನ್ಲೋಡ್ ಮಾಡಿ, ಬೇರೊಬ್ಬರ ನಗ್ನ ದೇಹ ಚಿತ್ರಗಳಿಗೆ ಅಂಟಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿನಿಯರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡುತ್ತಿದ್ದ ಕಿರಣ್ ಚವನಗೌಡರ ಮತ್ತು ಅವನ ಸ್ನೇಹಿತ ನವೀನ್ ಅಕ್ಕಿ ಬಂಧಿತರು. ಆರೋಪಿಗಳಿಬ್ಬರೂ ತಾಲೂಕಿನ ಇಂಗಳಹಳ್ಳಿ ಗ್ರಾಮದವರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಮೊದಲು ಪೊಲೀಸರು ಅದೇ ಕಾಲೇಜಿನ ರಜನಿಕಾಂತ ತಳವಾರ ಎಂಬಾತನನ್ನು ಸಂಶಯದ ಮೇಲೆ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಜಾಲತಾಣದ ಅಧಿಕೃತ ಮಾಹಿತಿ ಆಧರಿಸಿ ಸೈಬರ್ ಠಾಣೆ ಪೊಲೀಸರು ಶುಕ್ರವಾರ (ಆಗಸ್ಟ್ 11) ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿ ರಜನಿಕಾಂತ ಅಲ್ಲ, ಇವರಿಬ್ಬರು ಎನ್ನುವ ಮಾಹಿತಿ ಸ್ಪಷ್ಟವಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಈ ಹಿಂದೆ ಸಂಶಯದ ಹಿನ್ನೆಲೆಯಲ್ಲಿ ವಿಜಯನಗರದ ರಜನಿಕಾಂತ ತಳವಾರ ಎಂಬಾತನನ್ನು ಬಂಧಿಸಿ ನ್ಯಾಯಾಲಯ ವಶಕ್ಕೆ ನೀಡಿದ್ದರು. ನಂತರ 7 ದಿನ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದರು.
ರಜನಿಕಾಂತ್ನ ಇ-ಮೇಲ್ ಐಡಿ ಮತ್ತು ಇನ್ಸ್ಟಾಗ್ರಾಮ್ ಖಾತೆ ಹಾಗೂ ಸಾಮಾಜಿಕ ಜಾಲತಾಣಗಳ ವಿವರಗಳನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಜೊತೆಗೆ, ಹ್ಯಾಕ್ ಮಾಡಲಾದ ವಿದ್ಯಾರ್ಥಿನಿಯರ ಇನ್ಸ್ಟಾಗ್ರಾಮ್ ಖಾತೆ ವಿವರ ಸಂಗ್ರಹಿಸಿ ಫೇಸ್ಬುಕ್ ಸಂಸ್ಥೆಗೆ ಪತ್ರ ಬರೆದು ಮಾಹಿತಿ ನೀಡಲು ವಿನಂತಿಸಿದ್ದರು. ಅಲ್ಲಿಂದ ದೊರೆತ ಅಧಿಕೃತ ಮಾಹಿತಿಯೇ ಆರೋಪಿಗಳ ಪತ್ತೆಗೆ ಸಹಕಾರಿಯಾಗಿದೆ.
ಫೇಸ್ಬುಕ್ ಸಂಸ್ಥೆಯಿಂದ ಮಾಹಿತಿ ಸಂಗ್ರಹ
ವಿದ್ಯಾರ್ಥಿನಿಯರ ಚಿತ್ರ ಡೌನ್ಲೋಡ್ ಮಾಡಿಕೊಂಡು, ಅವುಗಳನ್ನು ಅಶ್ಲೀಲ ಚಿತ್ರಗಳಿಗೆ ಅಂಟಿಸುವ ಪ್ರಕರಣದ ಕುರಿತು ಮುಂಬೈನ ಸೈಬರ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಅಲ್ಲಿನ ಪೊಲೀಸರು ಫೇಸ್ಬುಕ್ ಸಂಸ್ಥೆಗೆ ಪತ್ರ ಬರೆದು ಮಾಹಿತಿ ನೀಡುವಂತೆ ಸೂಚಿಸಿದ್ದರು. ಇಂತಹದ್ದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಸೈಬರ್ ಪೊಲೀಸರು ಸಹ ಫೇಸ್ಬುಕ್ ಸಂಸ್ಥೆಗೆ ಪತ್ರ ಬರೆದು ಮಾಹಿತಿಗೆ ವಿನಂತಿಸಿದ್ದರು.
ಈ ಎರಡೂ ಪ್ರಕರಣಗಳಲ್ಲಿ ಕಿರಣ ಚವನಗೌಡನ ಕೈವಾಡ ಇರುವುದು ಫೇಸ್ಬುಕ್ ನೀಡಿರುವ ಮಾಹಿತಿಯಿಂದ ತಿಳಿದುಬಂದಿದೆ. ಪ್ರಮುಖ ಆರೋಪಿ ಹಾಗೂ ಹ್ಯಾಕರ್ ಅವನೇ ಆಗಿದ್ದು, ಅವನ ಸ್ನೇಹಿತ ಶಿವಾನಂದ ಅಕ್ಕಿ ಸಹ ಶಾಮೀಲಾಗಿರುವುದು ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹ್ಯಾಕ್ ಮಾಡಲು ಕಾರಣವೇನು?
ಏಳು ವಿದ್ಯಾರ್ಥಿನಿಯರಲ್ಲಿ ಒಬ್ಬ ವಿದ್ಯಾರ್ಥಿನಿ ತನ್ನದೇ ಕಾಲೇಜಿನ ವಿದ್ಯಾರ್ಥಿಯ ಜೊತೆ ಸಲುಗೆಯಿಂದ ಇದ್ದಳು. ಅದನ್ನು ಸಹಿಸದ ನವೀನ್ ಅಕ್ಕಿ, ಮತ್ತೊಂದು ಕಾಲೇಜಿನಲ್ಲಿ ಓದುತ್ತಿದ್ದ ಹ್ಯಾಕರ್ ಕಿರಣ ಚವನಗೌಡ ಸಹಾಯ ಪಡೆದು, ಆ ವಿದ್ಯಾರ್ಥಿನಿಯ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ ಮಾಡಿಸುತ್ತಾನೆ. ವಿದ್ಯಾರ್ಥಿನಿಯ ಫೋಟೊಗಳನ್ನು ಅಶ್ಲೀಲ ಚಿತ್ರಗಳಿಗೆ ಜೋಡಿಸಿ ಅದೇ ಖಾತೆಯಲ್ಲಿ ಪೋಸ್ಟ್ ಮಾಡಿಸುತ್ತಾನೆ. ನಂತರ ಪೋಸ್ಟ್ ಅಳಿಸುವುದಾಗಿ ಹೇಳಿ ಅವಳ ಜೊತೆ ಸಲುಗೆ ಬೆಳೆಸಿ, ಕಿರಣನಿಗೆ ಪೋಸ್ಟ್ ಅಳಿಸಲು ಹೇಳುತ್ತಾನೆ.
ಇದರಿಂದ ಕೋಪಗೊಂಡ ಕಿರಣ, ನವೀನ್ ಜೊತೆ ಜಗಳ ಮಾಡುತ್ತಾನೆ. ತನ್ನ ಹೆಸರು ಎಲ್ಲಿಯೂ ಬರಬಾರದು ಎಂದು ದಿಕ್ಕು ತಪ್ಪಿಸಲು "ಪಾಲಿಟಿಕ್ಸ್ + ಪೊಲೀಸ್ + ಸೈಬರ್ ಅರ್ಥ ಮಾಡ್ಕೋರಿ ಲೇ.. ನನ್ನ ಏನ್.... ಮಾಡ್ಲಿಕು ಆಗೋದಿಲ್ಲ" ಎಂದು ಪೋಸ್ಟ್ ಮಾಡಿ ಸವಾಲು ಹಾಕಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಅಶ್ಲೀಲ ಚಿತ್ರ ಜೋಡಣೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತದೆ ಎಂದು ಎಸಿಪಿ ಬಾಲಪ್ಪ ನಂದಗಾವಿ ಅವರು ತಿಳಿಸಿದ್ದಾರೆ.
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
ಬಳ್ಳಾರಿ ಪ್ರಕರಣ: ಮಕ್ಕಳ ಬಾಲ್ಯ ಅತ್ಯಂತ ಸೂಕ್ಷ್ಮವಾದದ್ದು ಕೀಟಲೆ, ಏಕಾಂಗಿತನದ ಬಗ್ಗೆ ಇರಲಿ ಎಚ್ಚರ: ವಸುಧೇಂದ್ರ ಬರಹ -
Siddaramaiah: ಡಿಕೆ ಶಿವಕುಮಾರ್ದು ಕಾಂಗ್ರೆಸ್ಗೆ ರಾಜಿಯಿಲ್ಲದ ನಿಷ್ಠೆ: ಸಿದ್ದರಾಮಯ್ಯ, ಸಿಎಂ ಕುರ್ಚಿ ಚರ್ಚೆ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ












Click it and Unblock the Notifications