ಭರವಸೆ ಹುಸಿ: ಹುಬ್ಬಳ್ಳಿಯ ಜೈನ್ ಮುನಿಗಳು ಸರ್ಕಾರಕ್ಕೆ ಕೊಟ್ಟ ಎಚ್ಚರಿಕೆ, ಇಟ್ಟ ಬೇಡಿಕೆ ಏನು?
ಹುಬ್ಬಳ್ಳಿ, ಜನವರಿ 16: ಹುಬ್ಬಳ್ಳಿಯ ಜೈನಮುನಿಗಳು ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಕೋಪಗೊಂಡಿದ್ದಾರೆ. ಬೇಡಿಕೆ ಈಡೇರಿಸಲು ಮುಂದಿನ ಫೆಬ್ರವರಿ 7 ರವರೆಗೆ ಗಡುವ ನೀಡಿದ್ದಲ್ಲದೇ ಎಚ್ಚರಿಕೆ ಸಹ ನೀಡಿದ್ದಾರೆ.
ಹುಬ್ಬಳ್ಳಿ ಸಮೀಪದ ವರೂರಿನ ನವಗ್ರಹದ ತೀರ್ಥ ಕ್ಷೇತ್ರದಲ್ಲಿ ಮಂಗಳವಾರ ಈ ಕುರಿತು ಗುಣಧರ ನಂದಿ ಜೈನ್ ಮುನಿಗಳು ಮಾತನಾಡಿ, ಜೈನ ಮುನಿಗಳು ಪ್ರವಾಸ ವೇಳೆ ಶಾಲೆಗಳಲ್ಲಿ ವ್ಯವಸ್ಥೆ ಹಾಗೂ ಆಯೋಗ ಸ್ಥಾಪನೆ ಬೇಡಿಕೆಗಳನ್ನು ಸರ್ಕಾರ ಇನ್ನೂ ಈಡೇರಿಸಿಲ್ಲ.

ಈ ಬೇಡಿಕೆ ಈಡೇರಿಕೆಗೆ ಫೆಬ್ರವರಿ 7ರೊಳಗೆ ಈಡೇರಿಸಬೇಕೆಂದು ಸರ್ಕಾರಕ್ಕೆ ಅವರು ಗಡುವು ನೀಡಿದರು. ಇಲ್ಲವಾದರೆ ಮಾರನೇ ದಿನ ಫೆಬ್ರವರಿ 8ರಿಂದ ಚಿಕ್ಕೋಡಿ ಶಮನೇವಾಡಿ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.
ಈ ಬೇಡಿಕೆ ಈಡೇರಿಸಿಲ್ಲ: ಜೈನಮುನಿಗಳು
ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನ್ ಮುನಿ ಕಾಮಕುಮಾರ ನಂದಿ ಸ್ವಾಮೀಜಿ ಅವರು ಹತ್ಯೆ ಬಳಿಕ ಸರ್ಕಾರಕ್ಕೆ ನಾಲ್ಕು ಬೇಡಿಕೆ ಈಡೇರಿಸಲು ಆಗ್ರಹಿಸಲಾಗಿತ್ತು. ಅದರಲ್ಲಿ ಜೈನ್ ಮುನಿಗಳ ಹತ್ಯೆ ತನಿಖೆ ನಡೆದು ಆರೋಪಿಗೆ ಶಿಕ್ಷೆ ಹಾಗೂ ಜೈನ್ ಮುನಿಗಳಿಗೆ ರಕ್ಷಣೆ ನೀಡಲಾಗಿದೆ. ಆದರೆ ಪ್ರವಾಸದಲ್ಲಿರುವ ಶಾಲೆಗಳಲ್ಲಿ ವ್ಯವಸ್ಥೆ, ಜೈನ್ ಆಯೋಗ ರಚಿಸುವ ಬೇಡಿಕೆ ಈಡೇರಿಸಿಲ್ಲ ಎಂದರು.

ಬೃಹತ್ ಪ್ರತಿಭಟನೆಯ ಎಚ್ಚರಿಕೆ
ಈ ಸಂಬಂಧ ಒಂದು ಲಕ್ಷದ ಜನರು ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಶ್ರೀರಾಮ ಮಂದಿರ ಉದ್ಘಾಟನೆ ಸಂತೋಷದ ಸಂಗತಿ. ಇದರಿಂದ ದೇಶದಲ್ಲಿ ರಾಮ ರಾಜ ನಿರ್ಮಾಣವಾಗಲಿ. ಕೇಂದ್ರ ಸರ್ಕಾರದ ಸಮಾರಂಭಕ್ಕೆ ಎಲ್ಲ ಮಠಾಧೀಶರ ಆಹ್ವಾನಿಸಲು ತಾರತಮ್ಯ ಮಾಡಿದಂತೆ ಅನಿಸುತ್ತಿಲ್ಲ. ಜೈನ್ ಮುನಿಗಳಿಗೂ ಸಹ ಆಹ್ವಾನಿಸಿದ್ದು, ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಜೈನ ಮುನಿಗಳು ಧರ್ಮ ಪ್ರಚಾರಕ್ಕಾಗಿ ವಿಹಾರ ನಡೆಸುವ ಸಂದರ್ಭದಲ್ಲಿ ಪೊಲೀಸ್ ಭದ್ರತೆ ಒದಗಿಸಲು ಸರ್ಕಾರ ಸಿದ್ಧವಿದೆ. ಪೊಲೀಸ್ ಇಲಾಖೆಯಿಂದ ಎಲ್ಲಾ ಠಾಣೆಗಳಿಗೆ ಶೀಘ್ರ ಸುತ್ತೋಲೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.
ಮುನಿಗಳು ವಿಹಾರ ಸಂದರ್ಭದಲ್ಲಿ ರಾತ್ರಿ ವೇಳೆ ವಿಶ್ರಾಂತಿ ಪಡೆಯಲು ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಅವಕಾಶ ನೀಡಬೇಕು ಎಂದು ವಿನಂತಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಜೈನ ನಿಗಮ ಮಂಡಳಿ ರಚನೆ ಸ್ಥಾಪಿಸಬೇಕೆನ್ನುವ ಬೇಡಿಕೆ ಸಹ ಮುಂದಿಟ್ಟಿದ್ದು, ಆದರೆ ಇದುವರೆಗೆ ಯಾವುದೇ ಸರಿಯಾಗಿ ಭೇಡಿಕೆ ಈಡೇರಿಸಲು ಸರ್ಕಾರದಿಂದ ಆಗಲ್ಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications