ಗೌರಿ ಲಂಕೇಶ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
2008ರ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಗೌರಿ ಲಂಕೇಶ್ ಅವರು ಶನಿವಾರ ಅಂತಿಮ ತೀರ್ಪಿಗೆ ಗೈರು ಹಾಜರಾಗಿದ್ದ ಹಿನ್ನಲೆಯಲ್ಲಿ ಹುಬ್ಬಳ್ಳಿಯ 2ನೇ ಜೆಎಂಎಫ್ ಕೋರ್ಟ್ ಶನಿವಾರ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಹುಬ್ಬಳ್ಳಿ, ನವೆಂಬರ್, 26: ಹಿರಿಯ ಪತ್ರಕರ್ತ ದಿ.ಲಂಕೇಶ್ ಅವರ ಪುತ್ರಿ ಗೌರಿ ಲಂಕೇಶ್ ಅವರ ವಿರುದ್ಧ ವಾರಂಟ್ ಜಾರಿಗೊಳಿಸಲಾಗಿದೆ.
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಆರೋಪಿಯಾಗಿರುವ ಗೌರಿ ಲಂಕೇಶ್ ಅವರು ಶನಿವಾರ ಅಂತಿಮ ಕೋರ್ಟ್ ತೀರ್ಪಿಗೆ ಗೈರು ಹಾಜರಾಗಿದ್ದರಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ಶನಿವಾರ ಹುಬ್ಬಳ್ಳಿ ಜಿಲ್ಲಾ 2ನೇ ಜೆಎಂಎಫಸಿ ನ್ಯಾಯಾಲಯದಲ್ಲಿ ಗೌರಿ ಲಂಕೇಶ್ ಅವರ ಪ್ರಕರಣದ ಅಂತಿಮ ತೀರ್ಪು ಹಿನ್ನಲೆಯಲ್ಲಿ. ಕೋರ್ಟ್ ಗೆ ಹಾಜರಾಗಬೇಕಿತ್ತು.
ಲಂಕೇಶ್ ಪರ ವಕೀಲ ಆರ್ ಎಂ ಜಾವೀದ್ ಅನಾರೋಗ್ಯ ಕಾರಣ ನೀಡಿ ನ್ಯಾಯಾಧೀಶರಿಗೆ ಅರ್ಜಿ ಸಲ್ಲಿಸಲು ಮುಂದಾದರು. ಆದರೆ ಅಂತಿಮ ತೀರ್ಪು ಇರುವುದರಿಂದ ಯಾವುದೇ ಅರ್ಜಿ ಪರಿಗಣಿಸಲಿಲ್ಲ. ಹೀಗಾಗಿ ಅವರಿಗೆ ಹುಬ್ಬಳ್ಳಿ 2ನೇ ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶ ಅಮರ ವಿ ಎಲ್ ಅವರು ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶ ಕಾಯ್ದಿರಿಸಿದ್ದಾರೆ.

ಸಂಸದ ಪ್ರಹ್ಲಾದ್ ಜೋಶಿ ಮತ್ತು ಮೂವರ ಮುಖಂಡರ ಮೇಲೆ 2008 ರಲ್ಲಿ ಲಂಕೇಶ್ ಪತ್ರಿಕೆಯಲ್ಲಿ ಗೌರಿ ಲಂಕೇಶ್ ಅವರು ಅವಹೇಳನಕಾರಿಯಾಗಿ ಲೇಖನ ಬರೆದಿದ್ದಾರೆ ಎಂದು ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿತ್ತು.
ಹೀಗಾಗಿ ಕಳೆದ ಹಲವು ವರ್ಷಗಳಿಂದ ವಿಚಾರಣೆ ನಡೆದಿದ್ದು, ಅಂತಿಮ ಹಂತಕ್ಕೆ ತಲುಪಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಬಿಜೆಪಿ ಧುರೀಣ ಉಮೇಶ ದುಶಿ ಪರವಾಗಿ ವಕೀಲ ಸಂಜು ಬಡಸ್ಕರ ಮತ್ತು ಸಂಸದ ಪ್ರಹ್ಲಾದ ಜೋಶಿ ಪರವಾಗಿ ವಕೀಲ ಲಕ್ಷ್ಮೇಶ್ವರ ವಾದ ಮಂಡಿಸಿದ್ದರು.
ಲಂಕೇಶ ಪತ್ರಿಕೆಯ ಹುಬ್ಬಳ್ಳಿ ವರದಿಗಾರ ಪ್ರಕರಣದ ಆರೋಪಿ ಜಗಾಪುರ ಕೋರ್ಟ್ ಗೆ ಹಾಜರಾಗಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications