ಶಾಸಕ ಬಿ.ಕೆ ಸಂಗಮೇಶ್ ನಡೆಗೆ ಸಭಾಪತಿ ಬಸವರಾಜ್ ಹೊರಟ್ಟಿ ಅಸಮಾಧಾನ
ಹುಬ್ಬಳ್ಳಿ, ಮಾರ್ಚ್ 7: "ಭದ್ರಾವತಿ ಕ್ಷೇತ್ರದ ಶಾಸಕ ಬಿಕೆ ಸಂಗಮೇಶ್ ಅವರು ವಿಧಾನಸಭೆಯಲ್ಲಿ ಅಂಗಿ ಬಿಚ್ಚಿದ ಪ್ರಕರಣದಿಂದ ವೈಯಕ್ತಿಕವಾಗಿ ಬಹಳ ನೋವಾಗಿದೆ" ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.
ಶಾಸಕರಾದವರು ಸದನದ ಒಳಗೆ ಮತ್ತು ಹೊರಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಸದನದ ಗೌರವ ಹೆಚ್ಚಿಸುವ ರೀತಿಯಲ್ಲಿ ವರ್ತಿಸಬೇಕು ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಇದೇ ವೇಳೆ ಅಭಿಪ್ರಾಯಪಟ್ಟರು.
ಶನಿವಾರ(ಮಾ.6) ದಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜನಪ್ರತಿನಿಧಿಗಳು ಕೆಲವು ವಿಷಯಗಳಲ್ಲಿ ಸಮಾಧಾನದಿಂದ ವರ್ತಿಸಬೇಕು. ಸಭಾಪತಿ ಅಥವಾ ಸ್ಪೀಕರ್ ಬಳಿ ಹೋಗಿ ಮನವಿ ಮಾಡಬೇಕು. ಇದನ್ನು ಹೊರತುಪಡಿಸಿ ಮೈ ಮೇಲಿನ ಬಟ್ಟೆ ಬಿಚ್ಚುವುದು, ಮತ್ತಿತರ ಅಸಹ್ಯಕರ ರೀತಿಯಲ್ಲಿ ವರ್ತಿಸುವುದು ಸರಿಯಲ್ಲ" ಎಂದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬೆನ್ನಲೇ ಸಂಪುಟದ ಅನೇಕ ಸಚಿವರು ಕೋರ್ಟ್ ಮೆಟ್ಟಿಲೇರಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೊರಟ್ಟಿ, "ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಬಹಳ ಎಚ್ಚರಿಕೆಯಿಂದ ಇರಬೇಕು. ಪರಿಷತ್ ಕಲಾಪದಲ್ಲಿ ಮಾಧ್ಯಮವನ್ನು ಬ್ಯಾನ್ ಮಾಡುವಂತೆ ಅನೇಕರು ಹೇಳಿದ್ದಾರೆ."

"ಆದರೆ, ನಾನು ಬ್ಯಾನ್ ಮಾಡಿಲ್ಲ. ಮಾಧ್ಯಮದವರು ಎಷ್ಟು ಜನ ಇರುತ್ತಾರೋ ಅಷ್ಟು ನಮಗೆ ಒಳ್ಳೆಯದು ಎಂದು ಬಸವರಾಜ್ ಹೊರಟ್ಟಿ ಹೇಳಿದರು. ಸಾರ್ವಜನಿಕ ಬದುಕಿನಲ್ಲಿದ್ದವರು ಸರಿಯಾಗಿ ಇರಬೇಕು. ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಜನರು ನೀಡಿರುವ ಕರ್ತವ್ಯವನ್ನು ಸರಿಯಾದ ನಿರ್ವಹಿಸಬೇಕು" ಎಂದು ಹೊರಟ್ಟಿ ಸಲಹೆ ನೀಡಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications