ಹುಬ್ಬಳ್ಳಿ: ಬಡ್ಡಿ ಕುಳಗಳಿಂದ ಹೊಡೆದು ವ್ಯಕ್ತಿಯ ಕೊಲೆ
ತಾವು ನೀಡಿದ ಹಣಕ್ಕೆ ಬಡ್ಡಿ ನೀಡಿಲ್ಲವೆಂದು ಬಡ್ಡಿ ಕುಳಗಳು ಸ್ಥಳೀಯ ಬಂಕಾಪುರ ಚೌಕ ನಿವಾಸಿ ಪರಶುರಾಮ ದೊಡ್ಡಮನಿ (40) ಎಂಬಾತನನ್ನು ಹೊಡೆದು ಸಾಯಿಸಿದ್ದಾರೆ.
ಹುಬ್ಬಳ್ಳಿ, ಫೆಬ್ರವರಿ, 8: ಬಡ್ಡಿ ನೀಡಿಲ್ಲ ಎಂಬ ಒಂದೇ ಕಾರಣಕ್ಕೆ ಬಡ್ಡಿ ಕುಳಗಳು ವ್ಯಕ್ತಿಯೋರ್ವನನ್ನು ಹೊಡೆದು ಸಾಯಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ತಾವು ನೀಡಿದ ಹಣಕ್ಕೆ ಬಡ್ಡಿ ನೀಡಿಲ್ಲವೆಂದು ಬಡ್ಡಿ ಕುಳಗಳು ಸ್ಥಳೀಯ ಬಂಕಾಪುರ ಚೌಕ ನಿವಾಸಿ ಪರಶುರಾಮ ದೊಡ್ಡಮನಿ (40) ಎಂಬಾತನನ್ನು ಹೊಡೆದು ಸಾಯಿಸಿದ್ದಾರೆ. ಫೆಬ್ರವರಿ 3 ರಂದು ದೊಡ್ಡಮನಿಯನ್ನು ಕೇಶ್ವಾಪುರದ ಹೊರವಲಯಕ್ಕೆ ಕರೆದುಕೊಂಡು ಹೋಗಿ ಹಾಕಿ ಸ್ಟಿಕ್ ಹಾಗೂ ಬಡಿಗೆಗಳಿಂದ ಬಡ್ಡಿ ವ್ಯಾಪಾರಿಗಳು ಹಲ್ಲೆ ಮಾಡಿದ್ದರು. [ಹುಬ್ಬಳ್ಳಿ: ಕಾಟ್ಲಾ ಮೀನು ಗಂಟಲಲ್ಲಿ ಸಿಕ್ಕಿಹಾಕಿಕೊಂಡು ಯುವಕ ಸಾವು!]

ಹಲ್ಲೆಯಿಂದ ಗಾಯಗೊಂಡಿದ್ದ ದೊಡ್ಡಮನಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ದೊಡ್ಡಮನಿ ಮೃತಪಟ್ಟಿದ್ದಾರೆ.
ಪ್ರತಿಭಟನೆ
ದೊಡ್ಡಮನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕಿಮ್ಸ್ ಆಸ್ಪತ್ರೆ ಶವಾಗಾರದ ಮುಂದೆ ಮೃತರ ಸಂಬಂಧಿಗಳು ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸ್ ಕಮಿಷನರ್ ಪಾಂಡುರಂಗ ರಾಣೆ ಸ್ಥಳಕ್ಕೆ ಬರುವಂತೆ ಮೃತರ ಸಂಬಂಧಿಕರು ಒತ್ತಾಯಿಸಿದ್ದು, ಅಲ್ಲಿವರೆಗೆ ಶವ ಪರೀಕ್ಷೆಗೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಪೊಲೀಸರು ಹಾಗೂ ಮೃತರ ಸಂಬಂಧಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. [ಹುಬ್ಬಳ್ಳಿ ಸಂಚಾರಿ ಪೊಲೀಸ್ರ ಕಣ್ತಪ್ಪಿಸಿದ್ರೆ 'ಟ್ರಾಫಿಕ್ ಆಪ್' ಇದೆ ಜೋಕೆ!]
ಮದನ ಬುಗಡಿ, ಕಿರಣ, ದೊಡ್ಡೇಶ ದೊಡ್ಡಮನಿ ಹಾಗೂ ಇನ್ನಿಬ್ಬರು ಸೇರಿ ಹಲ್ಲೆ ಮಾಡಿ ಪರಶುರಾಮ ದೊಡ್ಡಮನಿಯನ್ನು ಕೊಂದಿದ್ದಾರೆ ಎಂದು ಮೃತರ ಸಂಬಂಧಿಗಳು ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿಯವರೆಗೂ ಪೊಲೀಸರು ಯಾರನ್ನೂ ಬಂಧಿಸಿಲ್ಲ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications