NWKRTC: ಬಸ್ ಚಾಲಕನ ರೀಲ್ಸ್ ಹುಚ್ಚಿಗೆ ರೈತನ 2 ಎತ್ತುಗಳು ಬಲಿ, ರೈತರಿಗೆ ಗಂಭೀರ ಗಾಯ
ಹುಬ್ಬಳ್ಳಿ, ಜುಲೈ 17: ಸಾಮಾಜಿಕ ಜಾಲತಾಣದ ಭರಾಟೆ ಹೆಚ್ಚಿರುವ ಇಂದಿನ ಸನ್ನಿವೇಶದಲ್ಲಿ ಯುವ ಜನರಿಗೆ ರೀಲ್ಸ್ ಹುಚ್ಚು ಹಿಡಿದಂತಿದೆ. ಇದಕ್ಕೆ ನಾವೇನು ಕಡಿಮೆ ಎಂಬಂತೆ ಸರ್ಕಾರಿ ಬಸ್ ಚಾಲಕ ರೀಲ್ಸ್ ಮಾಡಲು ಹೋಗಿ ರೈತರು ಮತ್ತವರ ಎರಡು ಎತ್ತುಗಳ ಜೀವಕ್ಕೆ ಕುತ್ತು ತಂದಿದ್ದಾನೆ.
ಹೌದು, ಸರ್ಕಾರಿ ಬಸ್ ಚಾಲಕನೊಬ್ಬರು ರೀಲ್ಸ್ ವಿಡಿಯೋ ಹುಚ್ಚಿಗೆ ರಸ್ತೆಯಲ್ಲಿ ಚಲಿಸುತ್ತಿದ್ದ ಚಕ್ಕಡಿಗೆ ಬಸ್ ಹಿಂಬದಿಯಿಂದ ಗುದ್ದಿದೆ. ಪರಿಣಾಮ ರೈತರಿಗೆ ಗಂಭೀರವಾಗಿ ಗಾಯಗಳಾಗಿವೆ. ರೈತರ ಎರಡು ಎತ್ತುಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಬುಧವಾರ ನಡೆದಿದೆ.

ಇದು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಆಗಿದ್ದು, ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆಗೆ ತೆರಳುವಾಗ ಘಟನೆ ನಡೆದ ಬಗ್ಗೆ ವರದಿ ಆಗಿದೆ.
ಎಂದಿನಂತೆ ಹುಬ್ಬಳ್ಳಿಯಿಂದ ಬಸ್ ಬಾಗಲಕೋಟೆಯತ್ತ ಹೊರಟಿತ್ತು. ರೀಲ್ಸ್ ಮಾಡುವ ಹುಚ್ಚು ಹಿಡಿಸಿಕೊಂಡಿದ್ದ ಬಸ್ ಚಾಲಕ ಮೋಬೈಲ್ ನಲ್ಲಿ ರೀಲ್ಸ್ ಮಾಡುತ್ತಿದ್ದ. ಬಸ್ ಚಾಲನೆ ಮಾಡಿಕೊಂಡೆ ಸೆರೆಯಾಗುತ್ತಿದ್ದ ರೀಲ್ಸ್ ವಿಡಿಯೋಗೆ ಪೋಸ್ಟ್ ಕೊಡಲು ಹೋಗಿ ರೈತನ ಜೀವಕ್ಕೆ ಜೀವವಾಗಿದ್ದ ಎರಡು ಎತ್ತುಗಳ ಸಾವಿಗೆ ಕಾರಣವಾಗಿದ್ದಾನೆ.
ಚಕ್ಕಡಿ ಸಮೇತ ಮುಗ್ಗಿರಿದ ಎತ್ತುಗಳು
ಹಿಂದಿನಿಂದ ಜೋರಾಗಿ ಬಂದು ಡಿಕ್ಕಿ ಹೊಡೆದ ಬಸ್ ರಭಸಕ್ಕೆ ಎತ್ತುಗಳು ಚಕ್ಕಡಿ ಸಮೇತ ಮುಗ್ಗರಿಸಿ ಬಿದ್ದಿವೆ. ಪರಿಣಾಮ ಎರಡು ಎತ್ತುಗಳು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಪ್ರಾಣಬಿಟ್ಟಿವೆ. ಚಕ್ಕಡಿಯಲ್ಲಿದ್ದ ಇಬ್ಬರು ರೈತರಿಗೆ ಗಂಭೀರಗಾಯಗಳಾಗಿವೆ.

ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು, ಇತರ ಸವಾರರು ಗಾಯಾಳು ರೈತರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ ಚಾಲಕನ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಲಕನ ನಿರ್ಲಕ್ಷ್ಯಕ್ಕೆ ಆಕ್ರೋಶ
ಸರ್ಕಾರಿ, ಖಾಸಗಿ ಬಸ್ಗಳು ಸೇರಿದಂತೆ ಯಾರೇ ಆದರೂ ಮೊಬೈಲ್ ಬಳಕೆ ಮಾಡುತ್ತಾರೆ ಸಂಚಾರ ಮಾಡುವುದು ನಿಯಮ ಉಲ್ಲಂಘನೆ ಆಗುತ್ತದೆ. ಅದರಲ್ಲೂ ಸರ್ಕಾರಿ ಬಸ್ ಚಾಲಕರೇ ಹೀಗೆ ಮೊಬೈಲ್ ನೋಡಿಕೊಂಡು ರೀಲ್ಸ್ ಮಾಡುತ್ತಾ ಕರ್ತವ್ಯ ಪಾಲನೆ ಮಾಡಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ವಿಡಿಯೋದಲ್ಲಿ ಚಾಲಕ ಸ್ಟೇರಿಂಗ್ ಸರಿಯಾಗಿ ಹಿಡಿಯದಿರುವುದು ಕಾಣಿಸುತ್ತದೆ. ಇದೆಲ್ಲವು ನೋಡಿದರೆ ಚಾಲಕ ಸ್ಪಷ್ಟ ನಿಯಮ ಉಲ್ಲಂಘಿಸಿರುವುದು ಗೊತ್ತಾಗುತ್ತದೆ ಎಂದು ಪ್ರಯಾಣಿಕರು, ಸ್ಥಳಿಯರು ಆಕ್ರೋಶ ಹೊರ ಹಾಕಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications