ತೀರಿಕೊಂಡ ಮಗುವಿನ ಕಣ್ಣು ದಾನ ಮಾಡಿದ ಹುಬ್ಬಳ್ಳಿಯ ಘಂಟಿಕೇರಿ ಪೋಷಕರು
ಹುಬ್ಬಳ್ಳಿ, ಜೂನ್ 9: ಒಂದೂವರೆ ವರ್ಷದ ಮಗುವೊಂದು ಆಟವಾಡುತ್ತಾ ಮನೆಯ ಸಂಪಿನಲ್ಲಿ ಬಿದ್ದು ಸಾವನ್ನಪ್ಪಿದ್ದು, ಮಗುವಿನ ಪೋಷಕರು ತಮ್ಮ ದುಃಖದ ಮಧ್ಯೆಯೂ ಆ ಮಗುವಿನ ಕಣ್ಣುಗಳನ್ನು ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಇಲ್ಲಿನ ಘಂಟಿಕೇರಿಯಲ್ಲಿ ಗುರುವಾರ ನಡೆದಿದೆ.
ನಗರದ ಘಂಟಿಕೇರಿ ನಿವಾಸಿಗಳಾದ ರಾಘವೇಂದ್ರ ಹಾಗೂ ರೂಪಾ ಕಟ್ಟಿಮನಿ ದಂಪತಿಯ ಮಗು ನಿಶಾನ್ ನೀರಿನ ಸಂಪಿಗೆ ಬಿದ್ದು ಮೃತಪಟ್ಟಿದ್ದಾನೆ. ಕಣ್ಣ ಎದುರೇ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಪ್ರಾಣ ಕಳೆದುಕೊಂಡ ದುಃಖದ ಮಧ್ಯೆಯೇ ನಗರದ ಎಂ ಎಂ ಜೋಶಿ ನೇತ್ರ ಸಂಶೋಧನಾ ಸಂಸ್ಥೆಗೆ ಕಣ್ಣು ದಾನ ಮಾಡಿದ್ದಾರೆ.[ಪಾಕಿಸ್ತಾನದ ಮಗುವಿನ ಚಿಕಿತ್ಸೆಗೆ ವೀಸಾ ಕೊಡಿಸಿದ ಸಚಿವೆ ಸುಷ್ಮಾ]

ಗುರುವಾರ ಸಂಜೆ ನೀರು ಕರ್ನಾಟಕ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಬೋರ್ಡ್ ಘಂಟಿಕೇರಿ ಪ್ರದೇಶಕ್ಕೆ ಕುಡಿಯುವ ನೀರು ಪೂರೈಸಲು ಮುಂದಾಗಿತ್ತು. ಅದರಂತೆ ಕಟ್ಟಿಮನಿ ಅವರ ಮನೆಯ ಸದಸ್ಯರೆಲ್ಲ ಕುಡಿಯುವ ನೀರು ಸಂಗ್ರಹಿಸಲು ಮುಂದಾಗಿದ್ದರು. ಆ ವೇಳೆ ನಿಶಾನ್ ಆಟವಾಡುತ್ತಾ ಮನೆ ಎದುರಿಗೆ ಇರುವ ನೀರಿನ ಸಂಪಿಗೆ ಬಿದ್ದಿದ್ದಾನೆ.[ತೀರಿಕೊಂಡ ತಾಯಿಯ ಎದೆಹಾಲು ಕುಡಿಯಲು ಯತ್ನಿಸುತ್ತಿದ್ದ ಮಗು]
ಕುಟುಂಬದ ಸದಸ್ಯರು ನಿಶಾನ್ ಗಾಗಿ ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಿಲ್ಲ. ನಂತರ ಅನುಮಾನಗೊಂಡ ಅವರು ನೀರು ಸಂಗ್ರಹಿಸುವ ಸಂಪ್ ನೋಡಿದಾಗ ನಿಶಾನ್ ನೀರಲ್ಲಿ ಬಿದ್ದಿರುವುದು ಗೊತ್ತಾಗಿದೆ. ತಕ್ಷಣವೇ ಆತನನ್ನು ಹೊರಗೆ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ನಿಶಾನ್ ಕೊನೆಯುಸಿರೆಳೆದಿದ್ದ ಎಂದು ವೈದ್ಯರು ದೃಢಪಡಿಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications