ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ: ತಂಬಿಗೆ ಹಿಡಿದು ಶಾಸಕ ಅರವಿಂದ ಬೆಲ್ಲದ್ ವಿರುದ್ಧ ಪ್ರತಿಭಟನೆ

By Basavaraj Maralihalli
|
Google Oneindia Kannada News

ಹುಬ್ಬಳ್ಳಿ, ಜುಲೈ 5: ಶಾಸಕ ಅರವಿಂದ ಬೆಲ್ಲದ ಹಾಗೂ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ಹೇಳಿಕೆಯನ್ನು ಖಂಡಿಸಿ ಜಗದೀಶನಗರದ ಮೂಲ ನಿವಾಸಿಗಳು ಇಂದು ತಂಬಿಗೆ ಹಿಡಿದು ವಿನೂತನ ಪ್ರತಿಭಟನೆ ನಡೆಸಿದರು.

ಜಗದೀಶನಗರದ ಮೂಲ ಆಶ್ರಯ ಫಲಾನುಭವಿಗಳನ್ನು ಒಕ್ಕಲೆಬ್ಬಿಸುವ ಕುರಿತಂತೆ ಅರವಿಂದ ಬೆಲ್ಲದ ಮತ್ತು ರಾಮಣ್ಣ ಬಡಿಗೇರ ಹೇಳಿಕೆ ನೀಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ನಿವಾಸಿಗಳು ಆಶ್ರಯ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಪ್ರೇಮನಾಥ ಚಿಕ್ಕತುಂಬಳ ನೇತೃತ್ವದಲ್ಲಿ 'ಹೋಗೋಣ ಬನ್ನಿ ಮಲ ವಿಸರ್ಜನೆ'ಗೆ ಎಂಬ ಹೆಸರಿನಲ್ಲಿ ತಂಬಿಗೆಯೊಂದಿಗೆ ವಿನೂತವಾಗಿ ಪ್ರತಿಭಟನೆ ನಡೆಸಿದರು.

Hubballi: People held protest against MLA Arvind Bellad and corporator

ಪಾಲಿಕೆ ಆವರಣದಲ್ಲಿ ನೂರಾರು ಮಹಿಳೆಯರು ಕೈಯಲ್ಲಿ ತಂಬಿಗೆ ಹಿಡಿದುಕೊಂಡು ಮಲ ವಿಸರ್ಜನೆಯ ಅಣಕು ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದರು. ಇದೇ ವೇಳೆ ಶಾಸಕ ಅರವಿಂದ ಬೆಲ್ಲದ ಹಾಗೂ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Hubballi: People held protest against MLA Arvind Bellad and corporator

ಆಶ್ರಯ ಕಾಲೋನಿಯಲ್ಲಿ ಅನಧಿಕೃತವಾಗಿ ವಾಸಿಸುವವರಿಗೆ ಹಕ್ಕುಪತ್ರ ನೀಡುವುದಾಗಿ, ವಾಸವಿಲ್ಲದಿರುವವರ ಹಂಚಿಕೆಯನ್ನು ರದ್ದುಪಡಿಸುವುದಾಗಿ ಶಾಸಕರು ಹೇಳಿಕೆ ನೀಡಿದ್ದಾರೆ. ಹೀಗಾಗಿ ಮೂಲ ಆಶ್ರಯ ಫಲಾನುಭವಿಗಳನ್ನು ಒಕ್ಕಲೆಬ್ಬಿಸುವ ಹುನ್ನಾರವನ್ನು ಶಾಸಕರು ಮಾಡುತ್ತಿದ್ದಾರೆ. ಹೀಗಾಗಿ ಶಾಸಕರು ತಮ್ಮ ಹೇಳಿಕೆಯನ್ನು ವಾಪಸ್‌ ಪಡೆದುಕೊಂಡು ಮೂಲವಾಸಿಗಳನ್ನು ಒಕ್ಕಲೆಬ್ಬಿಸುವುದನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

English summary
Local people of Jagadeeshnagar held protest against MLA Arvind Bellad, representing Hubli-Dharwad West and corporator Ramanna Badiger for their remark on eviction.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X