ಗಂಧದ ಗುಡಿ ಸಂಭ್ರಮದಲ್ಲೂ ಸಾಮಾಜಿಕ ಕಳಕಳಿ ಮೆರೆದ ಅಪ್ಪು ಅಭಿಮಾನಿಗಳು
ಹುಬ್ಬಳ್ಳಿ, ಅಕ್ಟೋಬರ್ 28: ಚಂದನವನದ ಪವರ್ ಸ್ಟಾರ್ ಅಚ್ಚುಮೆಚ್ಚಿನ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಪ್ರಕೃತಿ ಸೌಂದರ್ಯ ಸಾರುವ ಗಂಧದಗುಡಿ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಗೆ ಅಪ್ಪಳಿಸಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಅಪ್ಪು ನೆನಪಿನಲ್ಲಿ ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದಾರೆ. ನೆಚ್ಚಿನ ಪರಮಾತ್ಮನಂತೆ ಅವರ ಅಭಿಮಾನಿಗಳು ಸಾಮಾಜಿಕ ಕಳಕಳಿಯ ಕೆಲಸ ಮಾಡುತ್ತಾ ಯುವರತ್ನ ಇನ್ನೂ ನಮ್ಮೊಂದಿಗೆ ಇದ್ದಾರೆ ಎನ್ನುವುದನ್ನು ಸಾಬೀತು ಮಾಡುತ್ತಿದ್ದಾರೆ.
ಇಂದು ಪುನೀತ್ ರಾಜ್ಕುಮಾರ್ ಅವರ ಗಂಧದ ಗುಡಿಯ ಕಂಪು ಎಲ್ಲೆಡೆ ಸೂಸುತ್ತಿದೆ. ಹುಬ್ಬಳ್ಳಿಯಲ್ಲೂ ಅದ್ದೂರಿಯಾಗಿ ಚಿತ್ರ ತೆರೆಕಂಡಿದ್ದು, ಅಪ್ಪು ಅಭಿಮಾನಿಗಳು ಸಂಭ್ರಮದೊಂದಿಗೆ ಮಾದರಿ ಕೆಲಸದಿಂದ ಅದ್ಧೂರಿಯಾಗಿ ಗಂಧದ ಗುಡಿಯನ್ನು ಸ್ವಾಗತಿಸಿಕೊಂಡಿದ್ದಾರೆ.
ಶ್ರವಣ ದೋಷ ಇರುವವರಿಗೆ ಉಚಿತವಾಗಿ ಮಶೀನ್ ಹಂಚುವ ಮೂಲಕ ಅಪ್ಪು ಅಭಿಮಾನಿಗಳು ಮಾದರಿಯಾಗಿದ್ದಾರೆ. ಸುಮಾರು ಐವತ್ತು ಮಂದಿ ಶ್ರವಣ ದೋಷ ಇರುವವರಿಗೆ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಉಚಿತವಾಗಿ ಮಶೀನ್ ಹಂಚಿದರು. ಹುಬ್ಬಳ್ಳಿ ತಾಲೂಕಿನ ವಿವಿಧ ಹಳ್ಳಿಗಳ ಬಡವರಿಗೆ ಅಪ್ಪು ಅಭಿಮಾನಿಗಳು ಮಶೀನ್ ವಿತರಣೆ ಮಾಡಿ ಅವರ ಬಾಳು ಬೆಳಗುವಂತೆ ಮಾಡಿದರು.

ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿರುವ ರಘು ಹಾಗೂ ಸ್ನೇಹಿತರಿಂದ ಹತ್ತರಿಂದ ಹದಿನೈದು ಸಾವಿರ ರೂಪಾಯಿ ಕೊಟ್ಟು ಖರೀದಿ ಮಾಡಿರುವ ಮಶೀನ್ಗಳನ್ನು ವಿತರಣೆ ಮಾಡಲಾಯಿತು. ಬಳಿಕ ಮಾತನಾಡಿದ ಅಭಿಮಾನಿಗಳು " ಅಪ್ಪು ನಮಗೆ ಹೀರೋ ಅಲ್ಲ.. ದೇವರು.. ಅವರ ಹೆಸರಿನಲ್ಲಿ ನಮ್ಮ ಕೈಲಾದಷ್ಟು ಸೇವೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹುಬ್ಬಳ್ಳಿಯ ಅಪ್ಪು ಅಭಿಮಾನಿಗಳ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications