ಹುಬ್ಬಳ್ಳಿ ಹುಡುಗ ಅಕ್ಷಯ್ ಆತ್ಮಹತ್ಯೆಗೆ ಕಾರಣವೇ ಗೊತ್ತಾಗ್ಲಿಲ್ಲ!
ಹುಬ್ಬಳ್ಳಿಯ ದೇಹದಾರ್ಢ್ಯ ಪಟು ಅಕ್ಷಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಕಾರಣ ಗೊತ್ತಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ
ಹುಬ್ಬಳ್ಳಿ, ಏಪ್ರಿಲ್ 25: ಆತ ಸ್ಫುರದ್ರೂಪಿ. ದೇಹದಾರ್ಢ್ಯ ಪಟು ಆದ್ದರಿಂದ ಕಟ್ಟುಮಸ್ತಾಗಿದ್ದ. ಆತ ವೇಟ್ ಲಿಫ್ಟರ್ ಕೂಡ ಹೌದು. ಆದರೆ 19 ವರ್ಷಕ್ಕೆ ಎಷ್ಟೆಲ್ಲ ಭರವಸೆ ಹುಟ್ಟಿಸಿದ್ದ ಹುಬ್ಬಳ್ಳಿಯ ಪಿಸಿ ಜಾಬಿನ್ ಕಾಲೇಜು ವಿದ್ಯಾರ್ಥಿ ಅಕ್ಷಯ್ ಖನೋಜ್ ಭಾನುವಾರ ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದಾನೆ.
ಇಲ್ಲಿನ ವಿಕಾಸ ನಗರದ ಫಕೀರಪ್ಪ ಖನೋಜ್ -ಸುಧಾ ದಂಪತಿಯ ಮಗ ಅಕ್ಷಯ್ ಬಿಸಿಎ ನಾಲ್ಕನೇ ಸೆಮಿಸ್ಟರ್ ವ್ಯಾಸಂಗ ಮಾಡ್ತಿದ್ದ. ಕರ್ನಾಟಕ ವಿವಿ ಅಂತರ ಕಾಲೇಜು ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದಿದ್ದ. ಇಂಥ ಭರವಸೆಯ ವಿದ್ಯಾರ್ಥಿ ಅಕ್ಷಯ್ ಶವ ಆತನ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.[ಚಿಟ್ ಫಂಡ್, ನೂರಾರು ಜನರಿಗೆ ಸಾವಿರಾರು ಕೋಟಿ ದೋಖಾ]

ಮನೆಯಲ್ಲಿ ಎಲ್ಲರೂ ಮದುವೆ ಕಾರ್ಯಕ್ರಮವೊಂದರ ಸಲುವಾಗಿ ಶಿವಮೊಗ್ಗಕ್ಕೆ ತೆರಳಿದ್ದರು. ಅಲ್ಲಿಂದ ಬಂದ ನಂತರ ಮನೆ ಬಾಗಿಲನ್ನು ಎಷ್ಟು ಬಡಿದರೂ ತೆರೆದಿಲ್ಲ. ಬಾಗಿಲು ಮುರಿದು ಒಳ ಹೋದಾಗ ಅಕ್ಷಯ್ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಈ ಹುಡುಗ ಅಕ್ಷಯ್ ಮದುವೆಗೆ ಶಿವಮೊಗ್ಗಕ್ಕೆ ಬಂದಿದ್ದರೆ ಈ ಅನಾಹುತ ಆಗುತ್ತಿರಲಿಲ್ಲವೇನೋ ಅನ್ನುತ್ತಾರೆ ಫಕೀರಪ್ಪ.
ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಅಕ್ಷಯ್ ಗೆ ಸೇರಿದ ಚಿತ್ರಗಳು, ಇನ್ನಿತರ ಮಾಹಿತಿ ಮೊಬೈಲ್ ಫೋನ್-ಲ್ಯಾಪ್ ಟಾಪ್ ನಲ್ಲಿವೆ. ಅವುಗಳನ್ನು ನೋಡಿದರೆ ಕಾರಣ ಏನಾದರೂ ಗೊತ್ತಾಗಬಹುದು ಎಂಬ ನಿರೀಕ್ಷೆಯಿದ್ದು, ಅವುಗಳ ಲಾಕ್ ತೆಗೆಯಲು ಪ್ರಯತ್ನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications