₹8 Lakh Gold: ಆಟೋದಲ್ಲೇ ಬಿಟ್ಟಿದ್ದ 8 ಲಕ್ಷ ರೂ. ಚಿನ್ನಾಭರಣವಿದ್ದ ಬ್ಯಾಗ್ ಮರಳಿ ಸಿಕ್ಕಿದ್ದೆ ರೋಚಕ
ಹುಬ್ಬಳ್ಳಿ, ಏಪ್ರಿಲ್ 18: ಈಗಿನ ಕಾಲದಲ್ಲಿ ಚಿನ್ನಾಭರಣ, ವಸ್ತು ಸಿಕ್ಕಿದರೆ ಯಾರು ಬಿಡ್ತಾರೆ ಹೇಳಿ. ಆದರೆ ಇಲ್ಲೊಬ್ಬ ನಿಶ್ವಾರ್ಥ ಆಟೋ ಚಾಲಕ ಬಿಟ್ಟು ಹೋಗಿದ್ದ ಬ್ಯಾಗ್ ಅನ್ನು ಮರಳಿ ತಲುಪಿಸುವ ಮೂಲಕ ಮಾನವೀಯತೆ ಮೆರೆದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.
ಆಟೋದಲ್ಲಿ ಬಿಟ್ಟಿ ಬ್ಯಾಗ್ಯ ತೆರೆದು ನೋಡಿದರೆ, ಅದರೊಳಗೆ 8 ಲಕ್ಷ ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳು ಇರುವುದು ಗೊತ್ತಾಗಿದೆ. ಇದೆಲ್ಲ ನೋಡಿ ವಿಚಲಿತರಾಗದೇ ಪ್ರಯಾಣಿಕರೇ ಆ ಬ್ಯಾಗ್ ಅನ್ನು ವಾಪಾಸ್ ನೀಡುವ ಮೂಲಕ ಆಟೋ ಚಾಲಕರೊಬ್ಬರು ಮಾನವೀಯತೆ ಪ್ರದರ್ಶಿಸಿದ್ದಾರೆ.

ಧಾರವಾಡದ ಮಹಿಳೆಯ ಬ್ಯಾಗ್
ಹುಬ್ಬಳ್ಳಿಯ ನಾಗರಾಜ್ ಎನ್ನುವವರ ಆಟೋದಲ್ಲಿ ನಗರದ ಗೋಕುಲ ಬಸ್ ನಿಲ್ದಾಣದಿಂದ ಹೊಸುರ ಬಸ್ ನಿಲ್ದಾಣದವರೆಗೆ ಮೂವರು ಪ್ರಯಾಣ ಮಾಡಿದ್ದಾರೆ. ಈ ವೇಳೆ ಆಟೋದಿಂದ ಇಳಿಯುವಾಗ ಗಡಿಬಿಡಿಯಲ್ಲಿ ಧಾರವಾಡದ ನಿಸ್ಸಾಮುದ್ದೀನ್ ಕಾಲೋನಿ ಮಹಿಳೆಯೊಬ್ಬರು ತಮ್ಮ ಬ್ಯಾಗ್ನ್ನು ಆಟೋದಲ್ಲಿ ಬಿಟ್ಟು ಹೋಗಿದ್ದರು.
ಈ ಮಹಿಳೆ ಬಿಟ್ಟು ಹೋದ ಬ್ಯಾಗ್ನಲ್ಲಿ 4 ತೊಲೆ ಬಂಗಾರ, 16 ತೊಲೆ ಬೆಳ್ಳಿ ಹಾಗೂ ಮನೆಯ ದಾಖಲಾತಿಗಳು ಇವೆ. ಪ್ರಯಾಣಿಕರು ಬ್ಯಾಗ್ ಬಿಟ್ಟು ಹೋಗಿರುವುದನ್ನು ಗಮನಿಸಿದ ಆಟೋ ಚಾಲಕ ಹುಬ್ಬಳ್ಳಿಯ ಗೋಕುಲ ಠಾಣೆಯ ಪೊಲೀಸರು, ಆಟೋ ಚಾಲಕರ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಬ್ಯಾಗ್ ವಾಪಸ್ ನೀಡಿದ್ದಾರೆ.
ಈ ಮೂಲಕ ಆಟೋ ಚಾಲಕ ನಾಗರಾಜ್ ಮಾನವೀಯತೆ ಮೆರೆದಿದ್ದಾರೆ. ಸದ್ಯ ನಾಗರಾಜ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಆಟೋ ಚಾಲಕನ ಮಾನವೀಯತೆಗೆ ಪೊಲೀಸರು ಕೂಡ ಸನ್ಮಾನ ಮಾಡಿದ್ದಾರೆ.

ಬ್ಯಾಗ್ ಬಿಟ್ಟು ಹೋಗಿ ಮಹಿಳೆ ಆತಂಕ
ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಬಿಟ್ಟು ಹೋದ ಮಹಿಳೆಯು ಮನೆಗೆ ಹೋಗಿ ನೋಡಿದಾಗ ಬ್ಯಾಗ್ ಕಾಣಲಿಲ್ಲ. ಎಲ್ಲಿ ಬಿಟ್ಟು ಬಂದಿದ್ದಾರೆ ಎಂಬುದು ಸಹ ಅವರಿಗೆ ನೆನಪಿರಲಿಲ್ಲ. ಇದರಿಂದಾಗಿ ಆತಂಕಗೊಂಡ ಧಾರವಾಡದ ನಿಸ್ಸಾಮುದ್ದೀನ್ ಕಾಲೋನಿ ಮಹಿಳೆ ಹುಡುಕಾಟ ನಡೆಸಿದರು.
33 ಕಡೆ ಸಿಸಿಟಿವಿ ಪರಿಶೀಲನೆ
ಒಂದು ದಿನ ಕಳೆದರೂ ಆ ಬ್ಯಾಗ್ ಸಿಗಲೇ ಇಲ್ಲ. ನಂತರ ಶ್ರೀ ಸಿದ್ಧಾರೂಢ ಮಠ, ಹಳೆ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣ, ರೈಲು ನಿಲ್ದಾಣ ಹೀಗೆ ಎಲ್ಲ ಕಡೆ ಹುಡುಕಲಾಯಿತು. ನಂತರ ಇದರ ಜೊತೆಗೆ 33 ವಿವಿಧ ಕಡೆಗಳಲ್ಲಿ ಸಿಸಿ ಟಿವಿವಳನ್ನ ಪರಿಶೀಲನೆ ಸಹ ಮಾಡಲಾಯಿತು. ಆದರೆ ಚಿನ್ನಾಭರಣ ಬ್ಯಾಗ್ ಅಟೋ ಸೀಟಿನ ಹಿಂಬದಿಯಲ್ಲೇ ಇತ್ತು. ಅಟೊ ಚಾಲಕ ನೋಡಿ ಪೊಲೀಸರಿಗೆ ಒಪ್ಪಿಸಿದರು.
ಬಳಿಕ ಪೊಲೀಸರ ಸಮೇತರಾಗಿ ಆಟೋ ಚಾಲಕ ಬ್ಯಾಗ್ ಅನ್ನು ಕಳೆದುಕೊಂಡಿದ್ದ ಮಹಿಳೆಗೆ ತಲುಪಿಸಿ ಸಾರ್ಥಕತೆ ಮೆರೆದು ಇತರರಿಗೆ ಮಾದಿಯಾಗಿದ್ದಾರೆ.
-
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications