ಹುಬ್ಬಳ್ಳಿ: ಮಹಿಳೆಯರೇ ರಥವನ್ನು ಎಳೆಯುವ ಬನಶಂಕರಿ ಜಾತ್ರೆ
ಹುಬ್ಬಳ್ಳಿಯ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಮಹಿಳೆಯರೇ ರಥವನ್ನು ಎಳೆದು ನೆರೆದ ಭಕ್ತರ ಗಮನ ಸೆಳೆದರು.
ಹುಬ್ಬಳ್ಳಿ, ಫೆಬ್ರವರಿ 11: ಹುಬ್ಬಳ್ಳಿಯ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಮಹಿಳೆಯರೇ ರಥವನ್ನು ಎಳೆದು ನೆರೆದ ಭಕ್ತರ ಗಮನ ಸೆಳೆದರು. ಇಲ್ಲಿನ ಬನಶಂಕರಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಭಾಗದಲ್ಲಿ ಹಲವಾರು ಕಾಲೇಜುಗಳಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಕಾಲೇಜು ಕನ್ಯೆಯರು ಹಾಗೂ ಮಹಿಳೆಯರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ದೇವಸ್ಥಾನದ ರಥೋತ್ಸವದಲ್ಲಿ ಪಾಲ್ಗೊಂಡು ರಥವನ್ನು ಎಳೆದರು.

ಜಾತ್ರೆಯಲ್ಲಿ ಮಹಿಳೆಯರೊಂದಿಗೆ ಪುರುಷರೂ ಭಾಗವಹಿಸಬಹುದಾಗಿದ್ದರೂ ಆದರೆ ಅವರಿಗೆ ರಥವನ್ನು ಎಳೆಯುವ ಅವಕಾಶ ರಥಬೀದಿಯಲ್ಲಿ ಹೋಗುವಾಗ ಮಾತ್ರ. ಬರುವಾಗ ಕೇವಲ ಮಹಿಳೆಯರೇ ವೈಭವಯುತವಾಗಿ ಅಲಂಕರಿಸಿದ ರಥವನ್ನು ದೇವಸ್ಥಾನದಿಂದ ಸುಮಾರು 100 ಮೀ.ರವರೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಡೊಳ್ಳು, ವಾದ್ಯಮೇಳಗಳೊಂದಿಗೆ ಎಳೆದರು.
ರಥದಲ್ಲಿದ್ದ ಬನಶಂಕರಿಯ ಉತ್ಸವ ಮೂರ್ತಿಗೆ ಭಕ್ತರು ದ್ರಾಕ್ಷಿ, ಉತ್ತತ್ತಿ, ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಭಕ್ತಿಯನ್ನು ಪ್ರದರ್ಶಿಸಿದರು.
ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ, ಹವನ, ಮಹಿಳೆಯರಿಂದ ಕುಂಕುಮಾರ್ಚನೆ, ಮಧ್ಯಾಹ್ನ ಪೂರ್ಣಾಹುತಿ, ಮಹಾ ಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಗಳು ಜರುಗಿದವು.

ಮಣಕವಾಡದ ಶ್ರೀ ಸಿದ್ಧರಾಮ ದೇವರು ಜಾತ್ರೆಯ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, ಭಕ್ತಿಯಿಂದ ದೇವರನ್ನು ಸ್ಮರಿಸಿದರೆ ಬದುಕು ನೆಮ್ಮದಿಯಿಂದ ಸಾಗುತ್ತದೆ ಎಂದರು. ಜಗನ್ಮಾತೆ ಬನಶಂಕರಿ ದೇವಿ ನಿಮ್ಮೆಲ್ಲರಿಗೆ ಅನುಗ್ರಹ ನೀಡುತ್ತಾರೆ ಎಂದು ಹರಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications