ಒಂದು ದಿನದ ಮಟ್ಟಿಗೆ ಬ್ರಿಟೀಷ್ ರಾಯಭಾರಿಯಾದ ಹುಬ್ಬಳ್ಳಿ ಬೆಡಗಿ
ಹುಬ್ಬಳ್ಳಿ, ಅಕ್ಟೋಬರ್, 12: ಹುಬ್ಬಳ್ಳಿಯ ಸಂಜನಾ ಹಿರೇಮಠ ಎಂಬ ಯುವತಿ ಬೆಂಗಳೂರಿನಲ್ಲಿ ಒಂದು ದಿನದ ಮಟ್ಟಿಗೆ ಬ್ರಿಟೀಷ್ ರಾಯಭಾರಿ ಕಾರ್ಯನಿರ್ವಹಿಸಿದರು.
ಅಂತಾರಾಷ್ಟ್ರೀಯ ಹೆಣ್ಣುಮಗುವಿನ ದಿನದ ಪ್ರಯುಕ್ತ ಭಾರತದಲ್ಲಿರುವ ಬ್ರಿಟಿಷ್ ರಾಯಭಾರಿ ಕಚೇರಿಯು ಏರ್ಪಡಿಸಿದ್ದ ಒಂದು ದಿನದ ರಾಯಭಾರಿ ಸ್ಪರ್ಧೆಯಲ್ಲಿ 180 ಯುವತಿಯರು ಪಾಲ್ಗೊಂಡಿದ್ದರು. ಲಂಡನ್ ಸ್ಟಾಕ್ ಎಕ್ಸಚೇಂಜ್ ಗ್ರೂಪ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಜನಾ ಹಿರೇಮಠ ವಿಜೇತರಾದರು. ಅವರು ಮಾಧ್ಯಮ ಹಾಗೂ ಸಂವಹನದಲ್ಲಿ ಸ್ನಾತಕೋತ್ತರ ಪದವೀಧರರು.

"ಬ್ರಿಟಿಷ್ ರಾಯಭಾರಿ ಕಚೇರಿಯಲ್ಲಿ ಸಮಯ ಕಳೆಯಬೇಕೆಂಬ ನನ್ನ ಕನಸು ನನಸಾಗಿದೆ. ರಾಯಭಾರಿ ಕಚೇರಿಯಲ್ಲಿರುವ ತಂಡದ ಸದಸ್ಯರನ್ನು ಹಾಗೂ ನಾಯಕಿಯರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು" ಎಂದು ಸಂಜನಾ ಹಿರೇಮಠ ಹರ್ಷ ವ್ಯಕ್ತಪಡಿಸಿದರು.
ಕರ್ನಾಟಕ ಹಾಗೂ ಕೇರಳಕ್ಕೆ ಬ್ರಿಟೀಷ್ ಡೆಪ್ಯೂಟಿ ಹೈಕಮಿಷನರ್ ಚಂದ್ರು ಐಯ್ಯರ್ ಮಾತನಾಡಿ, "ಹೆಣ್ಣುಮಕ್ಕಳ ಹಕ್ಕುಗಳ ಹಾಗೂ ಮಹಿಳಾ ನಾಯಕತ್ವದ ಬಗ್ಗೆ ಜಾಗೃತಿ ಮೂಡಿಸಲು ಯುವತಿಯರಿಗೆ ಇದು ಒಳ್ಳೆಯ ಅವಕಾಶ. ಸಂಜನಾ ಅವರು ಒಂದು ದಿನದ ಮಟ್ಟಿಗೆ ಬ್ರಿಟೀಷ್ ರಾಯಭಾರಿಯಾಗಿ ತುಂಬಾ ಚೆನ್ನಾಗಿ ಕಾರ್ಯನಿರ್ವಹಿಸಿದರು" ಎಂದರು.
ಅಲ್ಲದೆ ನಂತರ ಸಂಜನಾ ಅವರು ಆಸ್ಟ್ರೇಲಿಯಾದ ಕೌನ್ಸಲ್ ಜನರಲ್ ಹಿಲರಿ ಮ್ಯಾಕ್ಗಿಚಿ ಅವರೊಂದಿಗೆ ಜೋಳದ ರೊಟ್ಟಿ ಊಟ ಸವಿದರು. ಉತ್ತರ ಕರ್ನಾಟಕದ ವಿಶೇಷ ಖಾದ್ಯಗಳ ಕುರಿತು ಹಾಗೂ ಮಹಿಳಾ ನಾಯಕತ್ವ ಕುರಿತು ಅವರೊಂದಿಗೆ ಚರ್ಚಿಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications